Featured

ಕಾಂಗ್ರೆಸ್‌ ಮತ್ತು ಜೆಡಿಎಸ್ ಬಡವರು, ಹಾಗೂ ರೈತರ ಪರವಾಗಿ ಕೆಲಸ ಮಾಡುತ್ತಿದೆ ;ನಾವು ದೇಶವನ್ನು ಒಗ್ಗೂಡಿಸುತ್ತೇವೆ : ರಾಹುಲ್‌ ಗಾಂಧಿ

ಬೆಂಗಳೂರುದೇಶಕ್ಕೆ ಏನೂ ಮಾಡದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿಯನ್ನು ಸೋಲಿಸುವುದೇ ನಮ್ಮ ಮುಖ್ಯ ಗುರಿಯಾಗಬೇಕು ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಕರೆ ನೀಡಿದ್ದಾರೆ.

ಬೆಂಗಳೂರಿನ ಹೊರವಲಯದ ಮಾದವಾರದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಪಕ್ಷಗಳು ಬೃಹತ್ ಪರಿವರ್ತನಾ ಸಮಾವೇಶದಲ್ಲಿ ರಾಹುಲ್‌ ಗಾಂಧಿ ತಿಳಿಸಿದರು.

ಕಾಂಗ್ರೆಸ್‌ ಮತ್ತು ಜೆಡಿಎಸ್ ಕಾರ್ಯಕರ್ತರು ಈಗ ಒಟ್ಟಗಿ ಕೆಲಸ ಮಾಡಬೇಕು. ಜೆಡಿಎಸ್‌ ಅಭ್ಯರ್ಥಿ ಇದ್ದ ಕಡೆ ಕಾಂಗ್ರೆಸ್‌ ಕಾರ್ಯಕರ್ತರು, ಅದೇ ರೀತಿ ಕಾಂಗ್ರೆಸ್‌ ಅಭ್ಯರ್ಥಿ ಇದ್ದ ಕಡೆ ಜೆಡಿಎಸ್‌ ಕಾರ್ಯಕರ್ತರು ಪ್ರಚಾರ ಮಾಡಿ ಗೆಲ್ಲಿಸಬೇಕು ಎಂದು ಕರೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಒಡೆಯುವ ಕೆಲಸ ಮಾಡಿದರು. ಆದರೆ ನಾವು ದೇಶವನ್ನು ಒಟ್ಟುಗೂಡಿಸುವ ಕೆಲವ ಮಾಡುತ್ತೇವೆ ಎಂದು ಘೋಷಿಸಿದವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ. ಕೇಂದ್ರ ಸರ್ಕಾರ ದೇಶದ ಜನರಲ್ಲಿ ಒಡಕನ್ನು ಉಂಟು ಮಾಡುವ ಕೆಲಸ ಮಾಡುತ್ತಿದೆ. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶದವರನ್ನು ಒಟ್ಟುಗೂಡಿಸುವ ಕೆಲಸ ಮಾಡಲಿದೆ ಎಂದರು..

ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಮಾತನಾಡಿ, ಈ ಸಮಾವೇಶದ ಮೂಲಕ ದೇಶಕ್ಕೆ ಮೈತ್ರಿ ಕೂಟದ ಬಗ್ಗೆ ಸ್ಪಷ್ಟ ಸಂದೇಶ ರವಾನೆಯಾಗಬೇಕು ಎಂದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ, ದೇಶದ ರಾಜಕಾರಣದಲ್ಲಿ ಬದಲಾವಣೆ ಅನಿವಾರ್ಯವಾಗಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ ಕಾಂಗ್ರೆಸ್-ಜೆಡಿಎಸ್ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ದೇಶದ ರಾಜಕಾರಣದ ಬದಲಾವಣೆಗೆ ಸಾಕ್ಷಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು

ಈ ಸಂದರ್ಭ ಮಾತನಾಡಿದ ಸಿದ್ದರಾಮಯ್ಯ, ರಾಹುಲ್ ಗಾಂಧಿ ಸೂಚನೆ ಮೇರೆಗೆ 2 ಪಕ್ಷಗಳ ಜಂಟಿ ಸಮಾವೇಶ ಆಯೋಜಿಸಿದ್ದು, ದೇಶಕ್ಕೆ ಬದಲಾವಣೆಯ ಸಂದೇಶ ನೀಡುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಸಿದ್ದರಾಮಯ್ಯ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ್ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸೇರಿದಂತೆ ಹಲವಾರು ನಾಯಕರು ಪರಿವರ್ತನಾ ಸಮಾವೇಶದಲ್ಲಿ ಭಾಗಿಯಾಗಿದ್ದರು.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

3 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

3 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

4 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

4 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

4 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

4 hours ago