ಲಖನೌ: “ಈ ಹಿಂದೆ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರದ ಮಾರ್ಗವನ್ನೇ ಕೇಂದ್ರ ಮತ್ತು ಉತ್ತರ ಪ್ರದೇಶದ ಬಿಜೆಪಿ ಸರ್ಕಾರಗಳು ಅನುಸರಣೆ ಮಾಡುತ್ತಿದೆ. ಕಾಂಗ್ರೆಸ್ ಮಾಡಿದ ತಪ್ಪನ್ನೇ ಬಿಜೆಪಿ ಮಾಡುತ್ತಿದೆ” ಎಂದು ಬಿಎಸ್ಪಿ (ಬಹುಜನ ಸಮಾಜ ಪಕ್ಷ) ಮುಖ್ಯಸ್ಥೆ ಮಾಯಾವತಿ ಆರೋಪ ಮಾಡಿದ್ದಾರೆ.
ಬುಧವಾರ ಬೆಳಿಗ್ಗೆ ತಮ್ಮ 64ನೇ ವರ್ಷದ ಹುಟ್ಟುಹಬ್ಬದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, “ಕಾಂಗ್ರೆಸ್ ಮಾರ್ಗವನ್ನೇ ಬಿಜೆಪಿ ನೇತೃತ್ವದಲ್ಲಿರುವ ಕೇಂದ್ರ ಸರಕಾರ ಅನುಸರಣೆ ಮಾಡುತ್ತಿದೆ. ಅಧಿಕಾರವನ್ನು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡುತ್ತಿದ್ದಾರೆ. ಕೇಂದ್ರದ ತಪ್ಪು ನೀತಿಯಿಂದಾಗಿ ದೇಶದಾದ್ಯಂತ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗಿದೆ. ಕಾಂಗ್ರೆಸ್ ಕೂಡಾ ಇಂತಹದ್ದೆ ತಪ್ಪುಗಳನ್ನು ಮಾಡಿತ್ತು. ಆ ಹಿನ್ನಲೆಯಲ್ಲಿ ಕಾಂಗ್ರೆಸ್ಸನ್ನು ಜನರು ತಿರಸ್ಕಾರ ಮಾಡಿದ್ದರು” ಎಂದು ಹೇಳಿದ್ದಾರೆ.
“ಗಂಭೀರ ಸಮಸ್ಯೆಗಳಾದ ನಿರುದ್ಯೋಗ, ಹಣದುಬ್ಬರ ಮೊದಲಾದವುಗಳನ್ನು ದೇಶ ಎದುರಿಸುತ್ತಿರುವ ಈ ಸಂದರ್ಭದಲ್ಲಿ ಎನ್ಆರ್ಸಿ ಮತ್ತು ಎನ್ಪಿಆರ್ ಅನುಷ್ಠಾನಕ್ಕೆ ಸಂಬಂಧಿಸಿ ಬಿಜೆಪಿ ತನ್ನ ಮೊಂಡುತನ ತೋರಿಸಬಾರದು” ಎಂದು ಹೇಳಿದರು.
“ಮೋದಿ ಸರ್ಕಾರ ಬಂಡವಾಳಶಾಹಿಗಳ ಪರವಾದ ಸರ್ಕಾರ, ಬಡವರ ವಿರುದ್ಧವಾಗಿ ಕಾರ್ಯ ನಿರ್ವಹಿಸುತ್ತಿದೆ. ಬಡತನವನ್ನು ಹೆಚ್ಚು ಮಾಡುವ ಕೆಲಸ ನಿರ್ವಹಿಸುತ್ತಿದೆ” ಎಂದು ದೂರಿದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…