ಲಖನೌ: “ಈ ಹಿಂದೆ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರದ ಮಾರ್ಗವನ್ನೇ ಕೇಂದ್ರ ಮತ್ತು ಉತ್ತರ ಪ್ರದೇಶದ ಬಿಜೆಪಿ ಸರ್ಕಾರಗಳು ಅನುಸರಣೆ ಮಾಡುತ್ತಿದೆ. ಕಾಂಗ್ರೆಸ್ ಮಾಡಿದ ತಪ್ಪನ್ನೇ ಬಿಜೆಪಿ ಮಾಡುತ್ತಿದೆ” ಎಂದು ಬಿಎಸ್ಪಿ (ಬಹುಜನ ಸಮಾಜ ಪಕ್ಷ) ಮುಖ್ಯಸ್ಥೆ ಮಾಯಾವತಿ ಆರೋಪ ಮಾಡಿದ್ದಾರೆ.
ಬುಧವಾರ ಬೆಳಿಗ್ಗೆ ತಮ್ಮ 64ನೇ ವರ್ಷದ ಹುಟ್ಟುಹಬ್ಬದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, “ಕಾಂಗ್ರೆಸ್ ಮಾರ್ಗವನ್ನೇ ಬಿಜೆಪಿ ನೇತೃತ್ವದಲ್ಲಿರುವ ಕೇಂದ್ರ ಸರಕಾರ ಅನುಸರಣೆ ಮಾಡುತ್ತಿದೆ. ಅಧಿಕಾರವನ್ನು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡುತ್ತಿದ್ದಾರೆ. ಕೇಂದ್ರದ ತಪ್ಪು ನೀತಿಯಿಂದಾಗಿ ದೇಶದಾದ್ಯಂತ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗಿದೆ. ಕಾಂಗ್ರೆಸ್ ಕೂಡಾ ಇಂತಹದ್ದೆ ತಪ್ಪುಗಳನ್ನು ಮಾಡಿತ್ತು. ಆ ಹಿನ್ನಲೆಯಲ್ಲಿ ಕಾಂಗ್ರೆಸ್ಸನ್ನು ಜನರು ತಿರಸ್ಕಾರ ಮಾಡಿದ್ದರು” ಎಂದು ಹೇಳಿದ್ದಾರೆ.
“ಗಂಭೀರ ಸಮಸ್ಯೆಗಳಾದ ನಿರುದ್ಯೋಗ, ಹಣದುಬ್ಬರ ಮೊದಲಾದವುಗಳನ್ನು ದೇಶ ಎದುರಿಸುತ್ತಿರುವ ಈ ಸಂದರ್ಭದಲ್ಲಿ ಎನ್ಆರ್ಸಿ ಮತ್ತು ಎನ್ಪಿಆರ್ ಅನುಷ್ಠಾನಕ್ಕೆ ಸಂಬಂಧಿಸಿ ಬಿಜೆಪಿ ತನ್ನ ಮೊಂಡುತನ ತೋರಿಸಬಾರದು” ಎಂದು ಹೇಳಿದರು.
“ಮೋದಿ ಸರ್ಕಾರ ಬಂಡವಾಳಶಾಹಿಗಳ ಪರವಾದ ಸರ್ಕಾರ, ಬಡವರ ವಿರುದ್ಧವಾಗಿ ಕಾರ್ಯ ನಿರ್ವಹಿಸುತ್ತಿದೆ. ಬಡತನವನ್ನು ಹೆಚ್ಚು ಮಾಡುವ ಕೆಲಸ ನಿರ್ವಹಿಸುತ್ತಿದೆ” ಎಂದು ದೂರಿದರು.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…