ಲಖನೌ: “ಈ ಹಿಂದೆ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರದ ಮಾರ್ಗವನ್ನೇ ಕೇಂದ್ರ ಮತ್ತು ಉತ್ತರ ಪ್ರದೇಶದ ಬಿಜೆಪಿ ಸರ್ಕಾರಗಳು ಅನುಸರಣೆ ಮಾಡುತ್ತಿದೆ. ಕಾಂಗ್ರೆಸ್ ಮಾಡಿದ ತಪ್ಪನ್ನೇ ಬಿಜೆಪಿ ಮಾಡುತ್ತಿದೆ” ಎಂದು ಬಿಎಸ್ಪಿ (ಬಹುಜನ ಸಮಾಜ ಪಕ್ಷ) ಮುಖ್ಯಸ್ಥೆ ಮಾಯಾವತಿ ಆರೋಪ ಮಾಡಿದ್ದಾರೆ.
ಬುಧವಾರ ಬೆಳಿಗ್ಗೆ ತಮ್ಮ 64ನೇ ವರ್ಷದ ಹುಟ್ಟುಹಬ್ಬದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, “ಕಾಂಗ್ರೆಸ್ ಮಾರ್ಗವನ್ನೇ ಬಿಜೆಪಿ ನೇತೃತ್ವದಲ್ಲಿರುವ ಕೇಂದ್ರ ಸರಕಾರ ಅನುಸರಣೆ ಮಾಡುತ್ತಿದೆ. ಅಧಿಕಾರವನ್ನು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡುತ್ತಿದ್ದಾರೆ. ಕೇಂದ್ರದ ತಪ್ಪು ನೀತಿಯಿಂದಾಗಿ ದೇಶದಾದ್ಯಂತ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗಿದೆ. ಕಾಂಗ್ರೆಸ್ ಕೂಡಾ ಇಂತಹದ್ದೆ ತಪ್ಪುಗಳನ್ನು ಮಾಡಿತ್ತು. ಆ ಹಿನ್ನಲೆಯಲ್ಲಿ ಕಾಂಗ್ರೆಸ್ಸನ್ನು ಜನರು ತಿರಸ್ಕಾರ ಮಾಡಿದ್ದರು” ಎಂದು ಹೇಳಿದ್ದಾರೆ.
“ಗಂಭೀರ ಸಮಸ್ಯೆಗಳಾದ ನಿರುದ್ಯೋಗ, ಹಣದುಬ್ಬರ ಮೊದಲಾದವುಗಳನ್ನು ದೇಶ ಎದುರಿಸುತ್ತಿರುವ ಈ ಸಂದರ್ಭದಲ್ಲಿ ಎನ್ಆರ್ಸಿ ಮತ್ತು ಎನ್ಪಿಆರ್ ಅನುಷ್ಠಾನಕ್ಕೆ ಸಂಬಂಧಿಸಿ ಬಿಜೆಪಿ ತನ್ನ ಮೊಂಡುತನ ತೋರಿಸಬಾರದು” ಎಂದು ಹೇಳಿದರು.
“ಮೋದಿ ಸರ್ಕಾರ ಬಂಡವಾಳಶಾಹಿಗಳ ಪರವಾದ ಸರ್ಕಾರ, ಬಡವರ ವಿರುದ್ಧವಾಗಿ ಕಾರ್ಯ ನಿರ್ವಹಿಸುತ್ತಿದೆ. ಬಡತನವನ್ನು ಹೆಚ್ಚು ಮಾಡುವ ಕೆಲಸ ನಿರ್ವಹಿಸುತ್ತಿದೆ” ಎಂದು ದೂರಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…