ಕಾಂಗ್ರೆಸ್‌ ಮಾಡಿದ ತಪ್ಪನ್ನೇ ಬಿಜೆಪಿ ಮಾಡುತ್ತಿದೆ, ಅಧಿಕಾರವನ್ನು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡುತ್ತಿದ್ದಾರೆ : ಮಾಯಾವತಿ -Vishwanews24

ಲಖನೌ: “ಈ ಹಿಂದೆ ಆಡಳಿತ ನಡೆಸಿದ ಕಾಂಗ್ರೆಸ್‌ ಸರ್ಕಾರದ ಮಾರ್ಗವನ್ನೇ ಕೇಂದ್ರ ಮತ್ತು ಉತ್ತರ ಪ‍್ರದೇಶದ ಬಿಜೆಪಿ ಸರ್ಕಾರಗಳು ಅನುಸರಣೆ ಮಾಡುತ್ತಿದೆ. ಕಾಂಗ್ರೆಸ್‌ ಮಾಡಿದ ತಪ್ಪನ್ನೇ ಬಿಜೆಪಿ ಮಾಡುತ್ತಿದೆ” ಎಂದು ಬಿಎಸ್‌ಪಿ (ಬಹುಜನ ಸಮಾಜ ಪಕ್ಷ) ಮುಖ್ಯಸ್ಥೆ ಮಾಯಾವತಿ ಆರೋಪ ಮಾಡಿದ್ದಾರೆ.

ಬುಧವಾರ ಬೆಳಿಗ್ಗೆ ತಮ್ಮ 64ನೇ ವರ್ಷದ ಹುಟ್ಟುಹಬ್ಬದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, “ಕಾಂಗ್ರೆಸ್‌ ಮಾರ್ಗವನ್ನೇ ಬಿಜೆಪಿ ನೇತೃತ್ವದಲ್ಲಿರುವ ಕೇಂದ್ರ ಸರಕಾರ ಅನುಸರಣೆ ಮಾಡುತ್ತಿದೆ. ಅಧಿಕಾರವನ್ನು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡುತ್ತಿದ್ದಾರೆ. ಕೇಂದ್ರದ ತಪ್ಪು ನೀತಿಯಿಂದಾಗಿ ದೇಶದಾದ್ಯಂತ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗಿದೆ. ಕಾಂಗ್ರೆಸ್‌ ಕೂಡಾ ಇಂತಹದ್ದೆ ತಪ್ಪುಗಳನ್ನು ಮಾಡಿತ್ತು. ಆ ಹಿನ್ನಲೆಯಲ್ಲಿ ಕಾಂಗ್ರೆಸ್ಸನ್ನು ಜನರು ತಿರಸ್ಕಾರ ಮಾಡಿದ್ದರು” ಎಂದು ಹೇಳಿದ್ದಾರೆ.

“ಗಂಭೀರ ಸಮಸ್ಯೆಗಳಾದ ನಿರುದ್ಯೋಗ, ಹಣದುಬ್ಬರ ಮೊದಲಾದವುಗಳನ್ನು ದೇಶ ಎದುರಿಸುತ್ತಿರುವ ಈ ಸಂದರ್ಭದಲ್ಲಿ ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ ಅನುಷ್ಠಾನಕ್ಕೆ ಸಂಬಂಧಿಸಿ ಬಿಜೆಪಿ ತನ್ನ ಮೊಂಡುತನ ತೋರಿಸಬಾರದು” ಎಂದು ಹೇಳಿದರು.

“ಮೋದಿ ಸರ್ಕಾರ ಬಂಡವಾಳಶಾಹಿಗಳ ಪರವಾದ ಸರ್ಕಾರ, ಬಡವರ ವಿರುದ್ಧವಾಗಿ ಕಾರ್ಯ ನಿರ್ವಹಿಸುತ್ತಿದೆ. ಬಡತನವನ್ನು ಹೆಚ್ಚು ಮಾಡುವ ಕೆಲಸ ನಿರ್ವಹಿಸುತ್ತಿದೆ” ಎಂದು ದೂರಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago