ಚಿಕ್ಕಬಳ್ಳಾಪುರ : ನೂರಾರು ವರ್ಷಗಳ ಇತಿಹಾಸ ಇದ್ದು, ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಕೀರ್ತಿ ಕಾಂಗ್ರೆಸ್ ಬಿಟ್ಟರೆ ಮತ್ತೆ ಬೇರೆ ಯಾವ ಪಕ್ಷಕ್ಕೂ ಇಲ್ಲ. ಕಾಂಗ್ರೆಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ತಿಳಿಸಿದರು.
ಜಿಲ್ಲೆಯ ಗುಡಿಬಂಡೆ ಪಟ್ಟಣದಲ್ಲಿ ಶುದ್ಧ ಕುಡಿಯುವ ನೀರು ಉದ್ಘಾಟನೆಗೆ ತೆರಳುವ ವೇಳೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-7 ರ ಹಾಡೋಬಂಡೆ ಸಮೀಪ ಇರುವ ಶಿರಡಿ ಸಾಯಿ ಬಾಬಾ ಆಶ್ರಮಕ್ಕೆ ಆಗಮಿಸಿ ಕಾಂಗ್ರೆಸ್ ಮುಖಂಡರ, ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಇಡೀ ಜಿಲ್ಲೆ ಕಾಂಗ್ರೆಸ್ನ ಭದ್ರಕೋಟೆ
ಚಿಕ್ಕಬಳ್ಳಾಪುರ ತಾಲೂಕು ಮಾತ್ರವಲ್ಲ ಇಡೀ ಜಿಲ್ಲೆ ಕಾಂಗ್ರೆಸ್ ಭದ್ರಕೋಟೆ. ಕಾಂಗ್ರೆಸ್ ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಪುಟಿದೇಳುತ್ತದೆ. ಅಧಿಕಾರಕ್ಕೂ ಬರುತ್ತದೆ. ಯಾರು ಈ ಬಗ್ಗೆ ಚಿಂತಿಸಬೇಡಿ. ಕಾರ್ಯಕರ್ತರ ರಕ್ಷಣೆಗೆ ನಾವು ಬದ್ದರಾಗಿದ್ದೇವೆ ಎಂದು ಧೈರ್ಯ ತುಂಬಿದರು.
ಮಸೀದಿಗೆ ಬೇಟಿ: ಗುಡಿಬಂಡೆ ಪಟ್ಟಣಕ್ಕೆ ಭೇಟಿ ಕೊಡುವ ಮೊದಲು ಚಿಕ್ಕಬಳ್ಳಾಪುರ ನಗರದ ಎಂಜಿ ರಸ್ತೆಯಲ್ಲಿರುವ ಮಿಸ್ಕೀನ್ ಷಾ ಶೇಲಾನಿ ದರ್ಗಾಗೆ ಭೇಟಿ ನೀಡಿದ ಶಾಸಕ ಜಮೀರ್ ಅಹ್ಮದ್, ದರ್ಗಾದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಅಧ್ಯಕ್ಷ ಇಸ್ಮಾಯಿಲ್, ನಗರಸಭಾ ಸದಸ್ಯರಾದ ಸತೀಶ್, ಅಂಬರೀಶ್, ನರಸಿಂಹಮೂರ್ತಿ, ಅಡ್ಡಗಲ್ ಶ್ರೀಧರ್, ಸಂತೋಷ್ ಸೇರಿದಂತೆ ಮತ್ತಿತರರು ಇದ್ದರು.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…