Featured

ಕಾಂಗ್ರೆಸ್‌ ‘ಸಂಘಟನೆಯ ಜತೆ ಬಲವರ್ಧನೆಗೆ ಮಾ. 3ರಿಂದ ಪಕ್ಷದ ಶಾಸಕರಿಲ್ಲದ 100 ಕ್ಷೇತ್ರಗಳಲ್ಲಿ ಪಾದಯಾತ್ರೆ: ಡಿ.ಕೆ. ಶಿವಕುಮಾರ್‌ -Vishwanews24

ಕಾಂಗ್ರೆಸ್‌ ‘ಸಂಘಟನೆಯ ಜತೆ ಬಲವರ್ಧನೆಗೆ ಮಾ. 3ರಿಂದ ಪಕ್ಷದ ಶಾಸಕರಿಲ್ಲದ 100 ಕ್ಷೇತ್ರಗಳಲ್ಲಿ ಪಾದಯಾತ್ರೆ: ಡಿ.ಕೆ. ಶಿವಕುಮಾರ್‌ -Vishwanews24

ಬೆಂಗಳೂರು: ‘ಸಂಘಟನೆಯ ಜತೆಗೆ ಬಲವರ್ಧನೆಗೆ ಒತ್ತು ನೀಡುವ ಉದ್ದೇಶದಿಂದ ಪಕ್ಷದ ಶಾಸಕರಿಲ್ಲದ 100 ಕ್ಷೇತ್ರಗಳಲ್ಲಿ ಹೋರಾಟ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಮಾರ್ಚ್‌ 3ರಂದು ಈ ಕಾರ್ಯಕ್ರಮ ಆರಂಭಿಸುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಮಾರ್ಚ್ 1ರಂದು ದೇವಾಲಯ ಹಾಗೂ ದರ್ಗಾಕ್ಕೆ ಭೇಟಿ ಮಾಡಿ ಪೂಜೆ, ಪ್ರಾರ್ಥನೆ ಸಲ್ಲಿಸಿ, 3ರಂದು ಕಾಂಗ್ರೆಸ್ ಕಚೇರಿಯಿಂದ ಬೆಳಿಗ್ಗೆ 5 ಗಂಟೆಗೆ ಹೊರಟು ದೇವನಹಳ್ಳಿಯಲ್ಲಿ ಮೊದಲ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಸಂಜೆ 3 ಗಂಟೆಗೆ ಚಿಕ್ಕಬಳ್ಳಾಪುರದಲ್ಲಿ ಕಾರ್ಯಕ್ರಮ ನಡೆಯಲಿದೆ’ ಎಂದರು.

ಉಡುಪಿ : ಅಜ್ಜರಕಾಡಿನ ಪಾರ್ಕಿಂಗ್ ಸ್ಥ ಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು -Vishwanews24

‘ಪ್ರತಿ ಕ್ಷೇತ್ರದಲ್ಲೂ ಜನರ ಮಧ್ಯೆ ಈ ಕಾರ್ಯಕ್ರಮ ಮಾಡುತ್ತೇವೆ. ಬಿಜೆಪಿ ಸರ್ಕಾರದಿಂದ ಎಲ್ಲ ವರ್ಗದ ಜನರಿಗೆ ತೊಂದರೆಯಾಗಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆಯಾಗಿದೆ. ವರ್ತಕರು, ರೈತರು, ಕಾರ್ಮಿಕರು ಎಲ್ಲ ವರ್ಗಕ್ಕೂ ಅನ್ಯಾಯವಾಗುತ್ತಿದೆ. ಈ ವಿಚಾರವಾಗಿ ಜನರಲ್ಲಿ ಎಚ್ಚರಿಸಿ, ಅವರ ಧ್ವನಿಯನ್ನು ಕೇಂದ್ರ – ರಾಜ್ಯ ಸರ್ಕಾರಕ್ಕೆ ಮುಟ್ಟಿಸುತ್ತೇವೆ. ಎಲ್ಲ ನಗರಗಳ ಮುಖ್ಯರಸ್ತೆಯಲ್ಲಿ ಪಾದಯಾತ್ರೆ ಹಮ್ಮಿಕೊಳ್ಳುತ್ತೇವೆ’ ಎಂದರು.

‘ಅಧಿವೇಶನದಲ್ಲಿ ಭಾಗವಹಿಸಲು ತೊಂದರೆ ಆಗದಂತೆ ಪಕ್ಷದ ಕಾರ್ಯಾಧ್ಯಕ್ಷರಿಗೆ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ. ಜಿಲ್ಲಾಧ್ಯಕ್ಷರ ಜತೆ ಸೇರಿ ಅವರು ಕಾರ್ಯಕ್ರಮದ  ಸಿದ್ಥತೆ ನಡೆಸುತ್ತಾರೆ’ ಎಂದರು.

ಬೆಳ್ತಂಗಡಿ : ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಧರ್ಮಸ್ಥಳದ ಚೇತನಾ ಆಯ್ಕೆ -Vishwanews24

ಕಾಂಗ್ರೆಸ್‌ಗೆ ಪ್ರಸನ್ನಕುಮಾರ್: ‘ಪುಲಕೇಶಿನಗರದ ಕ್ಷೇತ್ರದ ಮಾಜಿ ಶಾಸಕ ಪ್ರಸನ್ನಕುಮಾರ್ ಅವರನ್ನು ಪಕ್ಷದ ಎಲ್ಲ ನಾಯಕರ ಒಪ್ಪಿಗೆ ಮೇರೆಗೆ ಪಕ್ಷಕ್ಕೆ ಸೇರಿಸಿಕೊಳ್ಳಲು ನಿರ್ಧರಿಸಿದ್ದೇವೆ’ ಎಂದು ಶಿವಕುಮಾರ್‌ ಹೇಳಿದರು.

ಮಾರ್ಚ್,1ರಂದು ಶ್ರೀ ದುರ್ಗಾ ದೇವಸ್ಥಾನ ಕುಂಜೂರುವಿನಲ್ಲಿ ತ್ರಿಕಾಲ ಪೂಜೆ -Vishwanews24

 

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

3 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

4 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

4 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

4 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

4 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

5 hours ago