ಪಕ್ಷದ ಕಚೇರಿಯಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಟ್ ಕಾಯಿನ್ ವಿಚಾರದಲ್ಲಿ ಬರೀ ಗೊಂದಲ ಎಬ್ಬಿಸಲಾಗುತ್ತಿದೆ. ನಿಖರ ಮಾಹಿತಿ ಯಾರ ಬಳಿಯೂ ಇಲ್ಲ ಎಂದು ಹೇಳಿದರು.
ಬಿಟ್ ಕಾಯಿನ್ ಹಗರಣ ಪ್ರಕರಣವನ್ನು ಇಡಿಗೆ ಕೊಡಲಾಗಿದೆ ಎಂದು ಹೇಳಲಾಗುತ್ತಿದೆ. ನಿಖರ ಮಾಹಿತಿ ಯಾರ ಬಳಿಯೂ ಇಲ್ಲ. ಏಳೆಂಟು ಬಾರಿ ಹಗರಣದ ಮಾಸ್ಟರ್ ಮೈಂಡ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನ್ನು ಬಂಧನಕ್ಕೊಳಪಡಿಸಿ ತನಿಖೆಗೆ ಒಳಪಡಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶ್ರಿಕಿ ಬಂಧಿಸಲಾಗಿತ್ತು ಎನ್ನಲಾಗಿದೆ. ಇದರ ಬಗ್ಗೆ ನುರಿತ ತಜ್ಞರಿಂದ ಮಾಹಿತಿ ಪಡೆದು ತನಿಖೆ ಮಾಡಬೇಕು. ಇಷ್ಟು ವರ್ಷ ಅವನ ಜೀವಕ್ಕೆ ಅಪಾಯ ಇರಲಿಲ್ಲ. ಈಗ ಅವನಿಗೆ ಜೀವ ಬೆದರಿಗೆ ಅಂದರೆ ಹೇಗೆ? ಕಾಂಗ್ರೆಸ್ಗೆ ಈ ಬಗ್ಗೆ ಮಾಹಿತಿ ಇರಬೇಕು. ರಕ್ಷಣೆ ಕೊಡೋದು ತಪ್ಪಲ್ಲ, ಕೊಡಲಿ. ಎಂಥೆಂತವರಿಗೋ ರಕ್ಷಣೆ ನೀಡಲಾಗಿದೆ. ಇವರಿಗೂ ಕೊಡಲಿ ಬೇಡ ಅಂದವರು ಯಾರು..? ಎಂದು ಹೇಳಿದರು.