ಹಾಸನ: ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿಯ ಯಾವ ಚಾಣಕ್ಯ ತಂತ್ರಗಳೂ ನಡೆಯುವುದಿಲ್ಲ. ಅತಂತ್ರ ಪರಿಸ್ಥಿತಿ ಸಾಧ್ಯವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೃಢವಿಶ್ವಾಸ ವ್ಯಕ್ತಪಡಿಸಿದರು.
‘‘ನಮ್ಮದೇ ಸರಕಾರ, ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹೋದೆಡೆ ಎಲ್ಲ ಹೇಳುತ್ತಿದ್ದಾರೆ. ಅವರ ಪಕ್ಷ ಅಧಿಕಾರಕ್ಕೆ ಬರುವುದಿರಲಿ, 25 ಸ್ಥಾನಕ್ಕೆ ಇಳಿದರೂ ಆಶ್ಚರ್ಯವಿಲ್ಲ,’’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.
‘‘ಜೆಡಿಎಸ್ 25 ಸ್ಥಾನ ಗಳಿಸಲ್ಲ ಎಂದು ಪದೇ ಪದೆ ಕೆಣಕಿ ಅಧೋಗತಿಗೆ ಹೋಗಬೇಡಿ. ಮೇ 18ರಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹುಟ್ಟುಹಬ್ಬ. ಅಂದೇ ಜೆಡಿಎಸ್ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ನನ್ನ ತಂದೆ ದೇವೇಗೌಡರು, ತಾಯಿ ಚನ್ನಮ್ಮ ಸಾಕ್ಷಿಯಾಗಲಿದ್ದಾರೆ. ಜನರ ಮನಸ್ಸನ್ನು ಪರಿರ್ತನೆ ಮಾಡಲು ಜೆಡಿಎಸ್ ಟೀಕಿಸುತ್ತಿದ್ದೀರಲ್ಲ, ಇನ್ನೊಂದು ಜನ್ಮ ಎತ್ತಿಬಂದರೂ, ಜನ ನಿಮ್ಮ ಮಾತು ಕೇಳುವುದಿಲ್ಲ ಎಂಬ ನಂಬಿಕೆ ನನಗಿದೆ,’’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘‘ಸೋಲಿನ ಭೀತಿಯಿಂದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಐದು ದಿನದಿಂದ ಠಿಕಾಣಿ ಹೂಡಿ ಹಳ್ಳಿ, ಹಳ್ಳಿಗೆ ತಿರುಗುತ್ತಿದ್ದೀರಲ್ಲ, ಅಲ್ಲಿ ಜನತೆ ಯಾವ ರೀತಿ ಸ್ಪಂದಿಸುತ್ತಿದ್ದಾರೆ ಎಂಬುದು ತಿಳಿಯುತ್ತಿಲ್ಲವೆ. ನಿಮ್ಮ ದುರಂಕಾರಕ್ಕೆ ತಕ್ಕಶಾಸ್ತಿ ಮಾಡಲಿದ್ದಾರೆ’’ ಎಂದು ಟೀಕಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…