Featured

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ 1 ಲಕ್ಷ, ರೈತರಿಗೆ 5 ಲಕ್ಷ ರೂ. ಬಡ್ಡಿ ರಹಿತ ಸಾಲ :  ಸಿದ್ದರಾಮಯ್ಯ  – Vishwanews24

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ 1 ಲಕ್ಷ, ರೈತರಿಗೆ 5 ಲಕ್ಷ ರೂ. ಬಡ್ಡಿ ರಹಿತ ಸಾಲ :  ಸಿದ್ದರಾಮಯ್ಯ

ಬೆಂಗಳೂರು : ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ 1 ಲಕ್ಷ, ರೈತರಿಗೆ 5 ಲಕ್ಷ ರೂ ಬಡ್ಡಿರಹಿತ ಸಾಲ ನೀಡಲಾಗುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪ್ರವಾಸ ಕೈಗೊಂಡಿದ್ದು, ವೇಮಗಲ್ ನಲ್ಲಿ ಮಹಿಳಾ ಸಮಾವೇಶ ನಡೆದಿದೆ.ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಮಹಿಳೆಯರಿಗೆ, ರೈತರಿಗೆ ಸಾಕಷ್ಟು ಭರವಸೆ ನೀಡಿದ್ದಾರೆ.

ಮಹಿಳೆಯರಿಗೆ ನೀಡಲಾಗುತ್ತಿರುವ 50 ಸಾವಿರ ರೂ ಬಡ್ಡಿರಹಿತ ಸಾಲವನ್ನು ಒಂದು ಲಕ್ಷ ರೂಪಾಯಿಗೆ ಏರಿಸುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ರೈತರಿಗೂ ಕೂಡ ಬಡ್ಡಿರಹಿತ ಸಾಲವನ್ನು 5 ಲಕ್ಷಕ್ಕೆ ಏರಿಸುತ್ತೇವೆ. ಶೇ. 3ರ ಬಡ್ಡಿಯಲ್ಲಿ ರೈತರಿಗೆ ನೀಡುವ ಸಾಲವನ್ನು 10 ಲಕ್ಷದಿಂದ 20 ಲಕ್ಷ ರೂಪಾಯಿಗೆ ಏರಿಸುತ್ತೇವೆ ಎಂದು ಮಹಿಳಾ ಸಮಾವೇಶದಲ್ಲಿ ಸಿದ್ದರಾಮಯ್ಯ ಘೋಷಿಸಿದ್ದಾರೆ.ಇನ್ನು ಷರತ್ತುಬದ್ಧ ಸಾಲಮನ್ನಾ ಮಾಡಲಾಗುವುದು ಎಂದಿದ್ದಾರೆ. ಸರಿಯಾಗಿ ಸಾಲದ ಕಂತು ಕಟ್ಟುತ್ತಿರುವವರ ಸಾಲವನ್ನು ಮನ್ನಾ ಮಾಡಲಾಗುವುದು .

ಕಾಂಗ್ರೆಸ್ ಅಧಿಕಾರಕ್ಕೆ ಬರುವವರೆಗೂ ಸಾಲದ ಕಂತು ಕಟ್ಟಿ ಎಂದು ಹೇಳಿದ್ದಾರೆ.ಬಡ್ಡಿರಹಿತ ಸಾಲದ ಪ್ರಮಾಣ ಏರಿಸುವ ಬಗ್ಗೆ ಮತ್ತು ಸಾಲ ಮನ್ನಾ ಬಗ್ಗೆ ಪಕ್ಷದ ಪ್ರಣಾಳಿಕೆ ಕಮಿಟಿ ಅಧ್ಯಕ್ಷರ ಜೊತೆ ಚರ್ಚಿಸಿ ತೀರ್ಮಾನ ಮಾಡಲಾಗುವುದು.ಇದೇ ವೇಳೆ ರಾಜ್ಯದಲ್ಲಿ ಮತ್ತು ದೇಶದಲ್ಲಿ ಬೆಲೆ ಏರಿಕೆ ಹೆಚ್ಚಾಗಿದೆ. ಬಿಜೆಪಿ ಸರ್ಕಾರ ಹಾಲು, ಮೊಸರು, ಅಕ್ಕಿ ಸೇರಿದಂತೆ ಮಕ್ಕಳು ಓದು ಪೆನ್ನು ಪುಸ್ತಕಗಳ ಮೇಲೂ ತೆರಿಗೆ ವಿಧಿಸಿದೆ ಎಂದ , ಮೋದಿ ಸರ್ಕಾರ ಬಂದ ಮೇಲೆ ಉದ್ಯಮಿಗಳ 14 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಮಹಿಳಾ ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ ಭರವಸೆಗಳು ಈ ಕೆಳಗಿನಂತಿವೆ :

* ಮಹಿಳೆಯರಿಗೆ ನೀಡುವ ಬಡ್ಡಿರಹಿತ ಸಾಲ 50 ಸಾವಿರ ರೂ ನಿಂದ 1 ಲಕ್ಷ ರೂಗೆ ಏರಿಕೆ
* ರೈತರಿಗೆ ಬಡ್ಡಿರಹಿತವಾಗಿ ನೀಡುವ 3 ಲಕ್ಷ ರೂ ಸಾಲದ ಮೊತ್ತ 10 ಲಕ್ಷಕ್ಕೆ ಏರಿಕೆ
* ಶೇ. 3ರಷ್ಟು ಬಡ್ಡಿ ಮೇಲೆ ನೀಡುವ ಸಾಲ 10 ಲಕ್ಷದಿಂದ 20 ಲಕ್ಷಕ್ಕೆ ಏರಿಕೆ
* ಕೋಲಾರದಲ್ಲಿ ಎಪಿಎಂಸಿ ಮಾರುಕಟ್ಟೆಗೆ 100 ಎಕರೆ ಜಮೀನು ಮಂಜೂರು ಮಾಡುತ್ತೇವೆ
* ಟೊಮ್ಯಾಟೊ ಮತ್ತು ಮಾವು ಸಂಸ್ಕರಣಾ ಘಟಕ ಮಾಡಿಕೊಡುತ್ತೇವೆ
* ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುತ್ತೇವೆ
* ಹಾಲಿಗೆ ಪ್ರೋತ್ಸಾಹ ಧನವನ್ನು 6 ರೂಪಾಯಿಗೆ ಹೆಚ್ಚಿಸುತ್ತೇವೆ

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

23 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

23 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

23 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

24 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

24 hours ago