Featured

ಕಾಂಗ್ರೆಸ್‌ ಅಧಿಕಾರಕ್ಕೆ ಬರುವಂತೆ ಜನರು ಬಯಸುತ್ತಿದ್ದಾರೆ , ಇಂತಹ ಮುನ್ಸೂಚನೆ ಈಗಲೇ ಸಿಕ್ಕಿದೆ : ಸತೀಶ್ ಜಾರಕಿಹೊಳಿ – VIshwanews24

ಕಾಂಗ್ರೆಸ್‌ ಅಧಿಕಾರಕ್ಕೆ ಬರುವಂತೆ ಜನರು ಬಯಸುತ್ತಿದ್ದಾರೆ , ಇಂತಹ ಮುನ್ಸೂಚನೆ ಈಗಲೇ ಸಿಕ್ಕಿದೆ : ಸತೀಶ್ ಜಾರಕಿಹೊಳಿ – VIshwanews24

ಚಿತ್ರದುರ್ಗ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದು ಅಧಿಕಾರ ಹಿಡಿಯುವುದು ಸತ್ಯ. ಇಂತಹ ಮುನ್ಸೂಚನೆ ಈಗಲೇ ಸಿಕ್ಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.

ಇಲ್ಲಿನ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಬುಧವಾರ ಕಾರ್ಯಕರ್ತರೊಂದಿಗೆ ಸಭೆ ನಡೆಸುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ಬಿಜೆಪಿ ನೇತೃತ್ವದ ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಂಬಂಧಿಸಿದಂತೆ ಸರ್ಕಾರಿ ಅಧಿಕಾರಿಗಳು, ಗುತ್ತಿಗೆದಾರರು ಹಾಗೂ ಟೀ ಅಂಗಡಿಯ ಬಳಿ ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ರೋಗ ಉಲ್ಬಣಿಸುವ ಲಕ್ಷಣಗಳು ಈ ಮೂಲಕ ಗೋಚರಿಸುತ್ತಿವೆ. ಕಾಂಗ್ರೆಸ್‌ ಅಧಿಕಾರಕ್ಕೆ ಬರುವಂತೆ ಜನರು ಬಯಸುತ್ತಿದ್ದಾರೆ’ ಎಂದು ಹೇಳಿದರು.

‘ಬಿಜೆಪಿಯ ಹಲವರು ಕಾಂಗ್ರೆಸ್‌ ಸಂಪರ್ಕದಲ್ಲಿದ್ದಾರೆ. ಯಾರು ಹೀಗೆ ಬರಲು ಸಿದ್ಧರಿದ್ದಾರೆ ಎಂಬುದನ್ನು ಸಂದರ್ಭ ಬಂದಾಗ ಬಹಿರಂಗ ಮಾಡಲಾಗುವುದು. ಇದಕ್ಕೆ ಇನ್ನೂ ಕಾಲಾವಕಾಶವಿದೆ. ಬಿಜೆಪಿ ಸಚಿವರೇ ಒಬ್ಬೊಬ್ಬರಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡುತ್ತಿದ್ದಾರೆ. ಸಂಪರ್ಕದಲ್ಲಿರುವವರು ಕಾಂಗ್ರೆಸ್‌ಗೆ ಬರುವುದು ನಿಶ್ಚಿತ’ ಎಂದರು.

ಇದನ್ನೂ ಓದಿ :

‘ಬೇರೆ ಪಕ್ಷದಿಂದ ಬರುವುದರಿಂದ ಸ್ವಪಕ್ಷೀಯರಿಗೆ ತೊಂದರೆ ಆಗದು. ಪಕ್ಷನಿಷ್ಠೆ, ಪಕ್ಷಕ್ಕೆ ಮಾಡಿದ ಸೇವೆಯನ್ನು ಪರಿಗಣಿಸಲಾಗುವುದು. ಪಕ್ಷನಿಷ್ಠೆ ಹೊಂದಿದ ಕಾರ್ಯಕರ್ತರನ್ನು ಕಡೆಗಣನೆ ಮಾಡುವುದಿಲ್ಲ. ಚುನಾವಣೆಯಲ್ಲಿ ವಿಜೇತರಾಗುವ ಸಾಮರ್ಥ್ಯ ಹೊಂದಿದವರು ಹಾಗೂ ಬೇರೆ ಪಕ್ಷದಿಂದ ಬರುವವರನ್ನು ಗಮನಿಸಿ ಟಿಕೆಟ್‌ ನೀಡಲಾಗುವುದು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಈ ಹೊಣೆಯನ್ನು ನಿಭಾಯಿಸಲಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

‘ಬಿಜೆಪಿ, ಜೆಡಿಎಸ್‌ನಲ್ಲಿ ಇರುವಂತೆ ಕಾಂಗ್ರೆಸ್‌ನಲ್ಲಿಯೂ ಗುಂಪುಗಾರಿಕೆ, ಜಗಳ ಇರಬಹುದು. ಆದರೆ, ಇದರಿಂದ ಪಕ್ಷ ಸಂಘಟನೆಗೆ ತೊಂದರೆ ಉಂಟಾಗಿಲ್ಲ. ಕಾಂಗ್ರೆಸ್‌ ಕಾರ್ಯಕರ್ತರು ಗುಂಪಿನ ನಾಯಕರಿಗೆ ಮತ ಚಲಾವಣೆ ಮಾಡುವುದಿಲ್ಲ. ಅವರು ಮತ ಹಾಕುವುದು ಪಕ್ಷದ ಗುರುತಿಗೆ. ಚುನಾವಣೆಯಲ್ಲಿ 113 ಶಾಸಕರು ಗೆದ್ದ ಬಳಿಕ ಮುಖ್ಯಮಂತ್ರಿ ಯಾರಾಗಬೇಕು ಎಂಬ ಬಗ್ಗೆ ಚರ್ಚೆ ನಡೆಯುತ್ತದೆ. ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್‌ ತೀರ್ಮಾನ ಕೈಗೊಳ್ಳಲಿದೆ’ ಎಂದರು.

‘ಕಾಂಗ್ರೆಸ್‌ನ ಯಾವೊಬ್ಬ ಶಾಸಕರೂ ಪಕ್ಷ ತೊರೆಯುವುದಿಲ್ಲ. ಬಿಜೆಪಿಗೆ ಈಗ ಶಾಸಕರ ಅಗತ್ಯವಿಲ್ಲ. ಪಕ್ಷಾಂತರ ಮಾಡುವವರು ಸುಮ್ಮನೆ ಹೋಗುವುದಿಲ್ಲ. ಅವರಿಗೆ ಮತ್ತೆ ಅಧಿಕಾರ ನೀಡಬೇಕಾಗುತ್ತದೆ. ಇಂತಹ ಸ್ಥಿತಿಯಲ್ಲಿ ಬಿಜೆಪಿ ಇಲ್ಲ. ಮುಂಬರುವ ಚುನಾವಣೆಯ ಬಳಿಕ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂಬ ವಾಸನೆ ಎಲ್ಲರಿಗೂ ಸಿಕ್ಕಿದೆ’ ಎಂದು ಹೇಳಿದರು.

ಇದನ್ನೂ ಓದಿ :

 

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

2 hours ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

2 hours ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

20 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago