Featured

ಕಾಂಗ್ರೆಸ್‌ ಅಧಿಕಾರಕ್ಕೆ ಬರುವಂತೆ ಜನರು ಬಯಸುತ್ತಿದ್ದಾರೆ , ಇಂತಹ ಮುನ್ಸೂಚನೆ ಈಗಲೇ ಸಿಕ್ಕಿದೆ : ಸತೀಶ್ ಜಾರಕಿಹೊಳಿ – VIshwanews24

ಕಾಂಗ್ರೆಸ್‌ ಅಧಿಕಾರಕ್ಕೆ ಬರುವಂತೆ ಜನರು ಬಯಸುತ್ತಿದ್ದಾರೆ , ಇಂತಹ ಮುನ್ಸೂಚನೆ ಈಗಲೇ ಸಿಕ್ಕಿದೆ : ಸತೀಶ್ ಜಾರಕಿಹೊಳಿ – VIshwanews24

ಚಿತ್ರದುರ್ಗ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದು ಅಧಿಕಾರ ಹಿಡಿಯುವುದು ಸತ್ಯ. ಇಂತಹ ಮುನ್ಸೂಚನೆ ಈಗಲೇ ಸಿಕ್ಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.

ಇಲ್ಲಿನ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಬುಧವಾರ ಕಾರ್ಯಕರ್ತರೊಂದಿಗೆ ಸಭೆ ನಡೆಸುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ಬಿಜೆಪಿ ನೇತೃತ್ವದ ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಂಬಂಧಿಸಿದಂತೆ ಸರ್ಕಾರಿ ಅಧಿಕಾರಿಗಳು, ಗುತ್ತಿಗೆದಾರರು ಹಾಗೂ ಟೀ ಅಂಗಡಿಯ ಬಳಿ ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ರೋಗ ಉಲ್ಬಣಿಸುವ ಲಕ್ಷಣಗಳು ಈ ಮೂಲಕ ಗೋಚರಿಸುತ್ತಿವೆ. ಕಾಂಗ್ರೆಸ್‌ ಅಧಿಕಾರಕ್ಕೆ ಬರುವಂತೆ ಜನರು ಬಯಸುತ್ತಿದ್ದಾರೆ’ ಎಂದು ಹೇಳಿದರು.

‘ಬಿಜೆಪಿಯ ಹಲವರು ಕಾಂಗ್ರೆಸ್‌ ಸಂಪರ್ಕದಲ್ಲಿದ್ದಾರೆ. ಯಾರು ಹೀಗೆ ಬರಲು ಸಿದ್ಧರಿದ್ದಾರೆ ಎಂಬುದನ್ನು ಸಂದರ್ಭ ಬಂದಾಗ ಬಹಿರಂಗ ಮಾಡಲಾಗುವುದು. ಇದಕ್ಕೆ ಇನ್ನೂ ಕಾಲಾವಕಾಶವಿದೆ. ಬಿಜೆಪಿ ಸಚಿವರೇ ಒಬ್ಬೊಬ್ಬರಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡುತ್ತಿದ್ದಾರೆ. ಸಂಪರ್ಕದಲ್ಲಿರುವವರು ಕಾಂಗ್ರೆಸ್‌ಗೆ ಬರುವುದು ನಿಶ್ಚಿತ’ ಎಂದರು.

ಇದನ್ನೂ ಓದಿ :

‘ಬೇರೆ ಪಕ್ಷದಿಂದ ಬರುವುದರಿಂದ ಸ್ವಪಕ್ಷೀಯರಿಗೆ ತೊಂದರೆ ಆಗದು. ಪಕ್ಷನಿಷ್ಠೆ, ಪಕ್ಷಕ್ಕೆ ಮಾಡಿದ ಸೇವೆಯನ್ನು ಪರಿಗಣಿಸಲಾಗುವುದು. ಪಕ್ಷನಿಷ್ಠೆ ಹೊಂದಿದ ಕಾರ್ಯಕರ್ತರನ್ನು ಕಡೆಗಣನೆ ಮಾಡುವುದಿಲ್ಲ. ಚುನಾವಣೆಯಲ್ಲಿ ವಿಜೇತರಾಗುವ ಸಾಮರ್ಥ್ಯ ಹೊಂದಿದವರು ಹಾಗೂ ಬೇರೆ ಪಕ್ಷದಿಂದ ಬರುವವರನ್ನು ಗಮನಿಸಿ ಟಿಕೆಟ್‌ ನೀಡಲಾಗುವುದು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಈ ಹೊಣೆಯನ್ನು ನಿಭಾಯಿಸಲಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

‘ಬಿಜೆಪಿ, ಜೆಡಿಎಸ್‌ನಲ್ಲಿ ಇರುವಂತೆ ಕಾಂಗ್ರೆಸ್‌ನಲ್ಲಿಯೂ ಗುಂಪುಗಾರಿಕೆ, ಜಗಳ ಇರಬಹುದು. ಆದರೆ, ಇದರಿಂದ ಪಕ್ಷ ಸಂಘಟನೆಗೆ ತೊಂದರೆ ಉಂಟಾಗಿಲ್ಲ. ಕಾಂಗ್ರೆಸ್‌ ಕಾರ್ಯಕರ್ತರು ಗುಂಪಿನ ನಾಯಕರಿಗೆ ಮತ ಚಲಾವಣೆ ಮಾಡುವುದಿಲ್ಲ. ಅವರು ಮತ ಹಾಕುವುದು ಪಕ್ಷದ ಗುರುತಿಗೆ. ಚುನಾವಣೆಯಲ್ಲಿ 113 ಶಾಸಕರು ಗೆದ್ದ ಬಳಿಕ ಮುಖ್ಯಮಂತ್ರಿ ಯಾರಾಗಬೇಕು ಎಂಬ ಬಗ್ಗೆ ಚರ್ಚೆ ನಡೆಯುತ್ತದೆ. ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್‌ ತೀರ್ಮಾನ ಕೈಗೊಳ್ಳಲಿದೆ’ ಎಂದರು.

‘ಕಾಂಗ್ರೆಸ್‌ನ ಯಾವೊಬ್ಬ ಶಾಸಕರೂ ಪಕ್ಷ ತೊರೆಯುವುದಿಲ್ಲ. ಬಿಜೆಪಿಗೆ ಈಗ ಶಾಸಕರ ಅಗತ್ಯವಿಲ್ಲ. ಪಕ್ಷಾಂತರ ಮಾಡುವವರು ಸುಮ್ಮನೆ ಹೋಗುವುದಿಲ್ಲ. ಅವರಿಗೆ ಮತ್ತೆ ಅಧಿಕಾರ ನೀಡಬೇಕಾಗುತ್ತದೆ. ಇಂತಹ ಸ್ಥಿತಿಯಲ್ಲಿ ಬಿಜೆಪಿ ಇಲ್ಲ. ಮುಂಬರುವ ಚುನಾವಣೆಯ ಬಳಿಕ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂಬ ವಾಸನೆ ಎಲ್ಲರಿಗೂ ಸಿಕ್ಕಿದೆ’ ಎಂದು ಹೇಳಿದರು.

ಇದನ್ನೂ ಓದಿ :

 

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago