ಉಡುಪಿ: ಗ್ರಾಮ ಪಂಚಾಯತ್ನಿಂದ ಪಾರ್ಲಿಮೆಂಟ್ ವರೆಗೂ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳು ಪಕ್ಷದ ತತ್ತ್ವ, ಸಿದ್ಧಾಂತಗಳಿಗೆ ನಿಷ್ಠರಾಗಿದ್ದಲ್ಲಿ ತಾವು ಜಯಗಳಿಸುವುದರ ಜೊತೆಗೆ ಕಾರ್ಯಕರ್ತರ ಶ್ರಮಕ್ಕೂ ಬೆಲೆ ದೊರೆತು ಕಾಂಗ್ರೆಸ್ ಅಧಿಕಾರಕ್ಕೆ ಬಂದು ಜನ ಸೇವೆಗೆ ಅವಕಾಶ ದೊರೆಯುತ್ತದೆ. ಎಂದು ಕೆ.ಪಿ.ಸಿ.ಸಿ. ಕೋ-ಆರ್ಡಿನೇಟರ್ ಹರೀಶ್ ಕಿಣಿ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
ಅವರು ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡು ಅಲೆವೂರು 4ನೇ ವಾರ್ಡ್ನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧಿಸಿ ವಿಜಯಗಳಿಸಿದ ರೂಪೇಶ್ ದೇವಾಡಿಗ ಮತ್ತು ಶ್ರೀಲತಾ ಇವರಿಗೆ ಅಭಿನಂದನಾ ಸಮಾರಂಭ ಮತ್ತು ಮತದಾರರಿಗೆ ಕೃತಜ್ಞತೆ ಸಮರ್ಪಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಶ್ರೀಧರ ದೇವಾಡಿಗ, ಹಿಂದು ಕಾಂಗ್ರೆಸ್ ಮುಖಂಡರಾದ ಗೋಪಾಲ ಸೇರಿಗಾರ್, ಉದ್ಯಮಿ ಹರೀಶ್ ಕುಲಾಲ್ ಉಪಸ್ಥಿತರಿದ್ದರು. ಅಲೆವೂರು ಗ್ರಾಮೀಣ ಯುವ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ಅಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಗೆ ಕಾಂಗ್ರೆಸ್ ಬೆಂಬಲಿತರಾಗಿ ಸ್ಪರ್ಧಿಸಿ ಸದಸ್ಯರಾಗಿ ಆಯ್ಕೆಯಾದವರನ್ನು ಹಾಗೂ ಸ್ಪರ್ಧಿಸಿದ ಇತರ ಅಭ್ಯರ್ಥಿಗಳನ್ನು ಗೌರವಿಸಲಾಯಿತು.
ಕಾಂಗ್ರೆಸ್ ಯುವ ಮುಖಂಡ ಅಶೋಕ್ ಸೇರಿಗಾರ್ ಕಾರ್ಯಕ್ರಮ ನಿರ್ವಹಿಸಿದರು. ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಲಿತಾ ಸೇರಿಗಾರ್ ಸ್ವಾಗತಿಸಿದರು. ಯುವ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಸೇರಿಗಾರ್ ಧನ್ಯವಾದವಿತ್ತರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…