Featured

ಕಾಂಗ್ರೆಸ್ ಅವಧಿಯಲ್ಲಿ ಬಂಟ್ವಾಳದ ನೆಮ್ಮದಿ ಕೆಡಿಸಿದವರೇ ಬಿಜೆಪಿಯವರು :ರಮಾನಾಥ ರೈ – Vishwanews24

ಬಂಟ್ವಾಳ : ದ್ವೇಷ ರಾಜಕಾರಣ ಮಾಡುವ ಬಿಜೆಪಿಗೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ

ಬಂಟ್ವಾಳ : ಸಮಾಜದಲ್ಲಿ ಜಾತಿ, ಧರ್ಮಗಳ ನಡುವೆ ವಿಷಬೀಜ ಬಿತ್ತಿ ದ್ವೇಷ ರಾಜಕಾರಣ ಮಾಡುವ ಬಿಜೆಪಿಗೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಕರೆ ನೀಡಿದರು. ಅವರು ಬಿ.ಸಿ.ರೋಡ್ ಪರ್ಲಿಯಾದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದರು.

ಕಳೆದ ಐದು ವರ್ಷದಲ್ಲಿ ಬಂಟ್ವಾಳ ಶಾಂತವಾಗಿದೆ ಎಂದು ಬಿಜೆಪಿಗರು ಹೇಳುತ್ತಿದ್ದಾರೆ. ಆದರೆ, ಕಾಂಗ್ರೆಸ್ ಅವಧಿಯಲ್ಲಿ ಬಂಟ್ವಾಳದ ನೆಮ್ಮದಿ ಕೆಡಿಸಿದವರೇ ಬಿಜೆಪಿಯವರು. ನಮ್ಮ ಅವಧಿಯಲ್ಲಿ ಚುನಾವಣೆಗೂ ಆರು ತಿಂಗಳಿರುವಾಗ ಗಲಭೆಗಳ ಸಂಚು ರೂಪಿಸಿ ಸಮಾಜದಲ್ಲಿ ಅಶಾಂತಿಯನ್ನು ಸೃಷ್ಟಿಸಿದ್ದರು. ಕೊಲೆ ಪ್ರಕರಣವೊಂದನ್ನು ಕಾಂಗ್ರೆಸ್ ನಾಯಕರ ತಲೆಗೆ ಕಟ್ಟಲು ನೋಡಿದ್ದರು. ಆದರೆ, ನಾಲ್ಕೇ ದಿನದಲ್ಲಿ ಆರೋಪಿಗಳು ಪತ್ತೆಯಾದಾಗ ಅವರು ಯಾರು ಆಗಿದ್ದರು ಎಂಬುದು ಇಡೀ ಜಗತ್ತಿಗೆ ಗೊತ್ತಾಗಿದೆ ಎಂದು ಅವರು ಸ್ಮರಿಸಿದರು.

ಕಳೆದ ಐದು ವರ್ಷದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡದಿರುವ ಇವರಿಗೆ ಮಾತನಾಡಲು ವಿಷಯಗಳು ಸಿಗುತ್ತಿಲ್ಲ. ಅದಕ್ಕೆ ಮತ್ತೆ ತನ್ನ ಹಳೆಯ ಚಾಳಿಯನ್ನು ಮುಂದುವರಿಸಿದೆ. ನನ್ನ ನಾಮಪತ್ರ ಸಲ್ಲಿಕೆಗೆ ಮಂಜೇಶ್ವರದ ಶಾಸಕ ಆಗಮಿಸಿದ್ದಕ್ಕೆ ಬೇರೆ ಬಣ್ಣ ಕಟ್ಟಲು ನೋಡುತ್ತಿದ್ದಾರೆ. ಮಂಜೇಶ್ವರದ ಶಾಸಕ ಕಾಂಗ್ರೆಸ್ ಬೆಂಬಲಿತ ಯುಡಿಎಫ್ ಶಾಸಕರಾಗಿದ್ದು, ನನ್ನ ಮೇಲಿನ ಅಭಿಮಾನದಿಂದ ನಾಮಪತ್ರ ಸಲ್ಲಿಕೆಗೆ ಶುಭಕೋರಲು ಬಂದಿದ್ದರು. ಆದರೆ, ಬಿಜೆಪಿಗರು ಅದಕ್ಕೆ ಬೇರೆಯದೇ ಅರ್ಥ ಕಲ್ಪಿಸಿ, ಜನತೆಯ ದಿಕ್ಕು ತಪ್ಪಿಸಲು ಯತ್ನಿಸುತ್ತಿದ್ದಾರೆ. ಜನತೆ ಬಿಜೆಪಿಯ ಬಂಡವಾಳವನ್ನು ಅರಿತಿದ್ದು, ವಾಮಮಾರ್ಗದಿಂದ ಅಧಿಕಾರ ಹಿಡಿಯಬಹುದು ಎಂಬ ಇವರ ಕನಸು ನುಚ್ಚು ನೂರಾಗಲಿದೆ ಎಂದು ರೈ ಭವಿಷ್ಯ ನುಡಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

10 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

10 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago