Featured

ಕಾಂಗ್ರೆಸ್‌ ಆಡಳಿತದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ರಾಜ್ಯ ಗೃಹ ಸಚಿವರು ರಾಜೀನಾಮೆ ನೀಡುವುದು ಸೂಕ್ತ : ಕೆ. ಉದಯಕುಮಾರ್ ಶೆಟ್ಟಿ

ಕಾಂಗ್ರೆಸ್‌ ಆಡಳಿತದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ರಾಜ್ಯ ಗೃಹ ಸಚಿವರು ರಾಜೀನಾಮೆ ನೀಡುವುದು ಸೂಕ್ತ : ಕೆ. ಉದಯಕುಮಾರ್ ಶೆಟ್ಟಿ

ಉಡುಪಿ : ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದ ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಅಮಾನುಷ ಹತ್ಯೆಯ ನೆನಪು ಮಾಸುವ ಮುನ್ನ ಅದೇ ಮಾದರಿಯಲ್ಲಿ ಹುಬ್ಬಳ್ಳಿಯ ವೀರಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಎಂಬ ಯುವತಿಯ ಕೊಲೆಯಾಗಿದೆ. ಈ ಘಟನೆಯನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಅಭಿವೃದ್ಧಿಯನ್ನು ಮರೆತಿರುವ ಕಾಂಗ್ರೆಸ್ ಸರಕಾರ ಕನಿಷ್ಠ ಪಕ್ಷ ರಾಜ್ಯದ ಜನತೆಯ ಪ್ರಾಣ ರಕ್ಷಣೆಯ ಕೆಲಸ ಕಾರ್ಯಗಳನ್ನೂ ಮಾಡುತ್ತಿಲ್ಲ.

ಹುಬ್ಬಳ್ಳಿಯ ವೀರಾಪುರದ 21 ವರ್ಷದ ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದ ಗಿರೀಶ್ ಅಲಿಯಾಸ್ ವಿಶ್ವ ಎಂ. ಸಾವಂತ್ ಎಂಬಾತ ಮೇ 15ರ ಮುಂಜಾನೆ ಆಕೆಯನ್ನು ಬರ್ಬರವಾಗಿ ಹತ್ಯೆಗೈದಿರುವುದು ನಾಗರಿಕ ಸಮಾಜವನ್ನು ಮಗದೊಮ್ಮೆ ಭಯಭೀತಿಯಲ್ಲಿ ನಲುಗುವಂತೆ ಮಾಡಿದೆ.

ನೇಹಾ ಹತ್ಯೆ ಪ್ರಕರಣವನ್ನು ಸಾಮಾನ್ಯ ಘಟನೆ ಎಂದಿರುವ ಗೃಹ ಸಚಿವರು ಮತ್ತು ಸರಕಾರದ ಲಘು ಹೇಳಿಕೆಗಳು ಹಾಗೂ ಆರೋಪಿಯ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಿರುವುದು ಇಂತಹ ಹೇಯ ಕೃತ್ಯಗಳ ಪುನರಾವರ್ತನೆಗೆ ಮುಖ್ಯ ಕಾರಣವಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್ ರವರು ರಾಜ್ಯದಲ್ಲಿ ನಡೆಯುತ್ತಿರುವ ಅಮಾನುಷ ಹತ್ಯೆಗಳ ನೈತಿಕ ಹೊಣೆ ಹೊರಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆಯ ಹೊಣೆ ಹೊತ್ತಿರುವ ಗೃಹ ಸಚಿವರು ತಕ್ಷಣ ರಾಜೀನಾಮೆ ಸಲ್ಲಿಸಿ, ಈ ಹತ್ಯೆಯ ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಪತ್ರಿಕಾ ಗೋಷ್ಠಿಯಲ್ಲಿ ಸರಕಾರವನ್ನು ಆಗ್ರಹಿಸಿದರು.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

10 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

10 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

10 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

11 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

11 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

11 hours ago