ಕಾಂಗ್ರೆಸ್ ಆಭ್ಯರ್ಥಿ ಮಿಥುನ್ ರೈ ನಿಂದ ಬಜರಂಗದಳ ನಿಷೇಧ ಮಾಡಲು ಸಾಧ್ಯನಾ?? : ಶಾಸಕ ಸುನಿಲ್ ಕುಮಾರ್ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು,  : ಕಾಂಗ್ರೆಸ್ ಆಭ್ಯರ್ಥಿ ಮಿಥುನ್ ರೈ ವಿರುದ್ಧ ಬಿಜೆಪಿ ಶಾಸಕ ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಬಜರಂಗದಳ ನಿಷೇಧ ಮಾಡ್ತೀವಿ ಅಂತಾ ಹೇಳಿದ್ದಾರೆ.

ಎಂತೆಂತಾ ಕಾಂಗ್ರೆಸ್ ನಾಯಕರು ಬಂದು ಹೋದರೂ ನಿಷೇಧ ಮಾಡಲು ಸಾಧ್ಯವಾಗಿಲ್ಲ. ಇನ್ನು ಈ ಬಚ್ಚಾ ರಾಜಕಾರಣಿ ಯಿಂದ ಆಗುತ್ತಾ? ಎಂದು ಮಿಥುನ್ ರೈ ವಿರುದ್ದ ಹರಿಹಾಯ್ದಿದ್ದಾರೆ. ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡುವ ಪೂರ್ವಭಾವಿಯಾಗಿ ಮಂಗಳೂರಿನ ಬಂಟ್ಸ್ ಹಾಸ್ಟೆಲಿನ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರು ಒಬ್ಬ ಬಚ್ಚಾ. ಇವರು ಭಜರಂಗದಳವನ್ನು ನಿಷೇಧ ಮಾಡ್ತಾನಂತೆ. ಎಂತೆಂತಾ ಕಾಂಗ್ರೆಸ್ ನಾಯಕರು ಬಂದು ಹೋದರೂ ನಿಷೇಧ ಮಾಡಲು ಸಾಧ್ಯವಾಗಿಲ್ಲ. ಇನ್ನು ಈ ಬಚ್ಚಾ ರಾಜಕಾರಣಿ ಯಿಂದ ಆಗುತ್ತಾ ಎಂದು ಲೇವಾಡಿ ಮಾಡಿದರು.

ಚುನಾವಣೆಯಲ್ಲಿ ಬಿಜೆಪಿ ವಿಜಯದ ಬಳಿಕ ಗ್ರಾಮ ಗ್ರಾಮದಲ್ಲಿ ಬಜರಂಗದಳ ಶಾಖೆಗಳನ್ನು ತೆರೆದು ಸಂಘಟನೆಯನ್ನು ಇನ್ನೂ ಬಲಿಷ್ಠ ಮಾಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಕಾರ್ಕಳ ಶಾಸಕ ಸುನೀಲ್ ಕುಮಾರ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಪುರುಷೋತ್ತಮ ಭಟ್ ಉಪಸ್ಥಿತರಿದ್ದರು.