ಮಂಗಳೂರು, : ಕಾಂಗ್ರೆಸ್ ಆಭ್ಯರ್ಥಿ ಮಿಥುನ್ ರೈ ವಿರುದ್ಧ ಬಿಜೆಪಿ ಶಾಸಕ ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಬಜರಂಗದಳ ನಿಷೇಧ ಮಾಡ್ತೀವಿ ಅಂತಾ ಹೇಳಿದ್ದಾರೆ.
ಎಂತೆಂತಾ ಕಾಂಗ್ರೆಸ್ ನಾಯಕರು ಬಂದು ಹೋದರೂ ನಿಷೇಧ ಮಾಡಲು ಸಾಧ್ಯವಾಗಿಲ್ಲ. ಇನ್ನು ಈ ಬಚ್ಚಾ ರಾಜಕಾರಣಿ ಯಿಂದ ಆಗುತ್ತಾ? ಎಂದು ಮಿಥುನ್ ರೈ ವಿರುದ್ದ ಹರಿಹಾಯ್ದಿದ್ದಾರೆ. ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡುವ ಪೂರ್ವಭಾವಿಯಾಗಿ ಮಂಗಳೂರಿನ ಬಂಟ್ಸ್ ಹಾಸ್ಟೆಲಿನ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರು ಒಬ್ಬ ಬಚ್ಚಾ. ಇವರು ಭಜರಂಗದಳವನ್ನು ನಿಷೇಧ ಮಾಡ್ತಾನಂತೆ. ಎಂತೆಂತಾ ಕಾಂಗ್ರೆಸ್ ನಾಯಕರು ಬಂದು ಹೋದರೂ ನಿಷೇಧ ಮಾಡಲು ಸಾಧ್ಯವಾಗಿಲ್ಲ. ಇನ್ನು ಈ ಬಚ್ಚಾ ರಾಜಕಾರಣಿ ಯಿಂದ ಆಗುತ್ತಾ ಎಂದು ಲೇವಾಡಿ ಮಾಡಿದರು.
ಚುನಾವಣೆಯಲ್ಲಿ ಬಿಜೆಪಿ ವಿಜಯದ ಬಳಿಕ ಗ್ರಾಮ ಗ್ರಾಮದಲ್ಲಿ ಬಜರಂಗದಳ ಶಾಖೆಗಳನ್ನು ತೆರೆದು ಸಂಘಟನೆಯನ್ನು ಇನ್ನೂ ಬಲಿಷ್ಠ ಮಾಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಕಾರ್ಕಳ ಶಾಸಕ ಸುನೀಲ್ ಕುಮಾರ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಪುರುಷೋತ್ತಮ ಭಟ್ ಉಪಸ್ಥಿತರಿದ್ದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…