ಉಡುಪಿ: ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜೆಡಿಎಸ್ ಬಿ ಫಾರ್ಮ್ ಪಡೆದಿದ್ದು, ಕಾಂಗ್ರೆಸ್ ಕೈ ಮತ್ತು ಜೆಡಿಎಸ್ ನ ತೆನೆ ಹೊತ್ತ ಮಹಿಳೆಯ ಚಿಹ್ನೆ ಇರುವ ಶಾಲು ಹೊದ್ದು ಕಾಣಿಸಿಕೊಂಡಿದ್ದಾರೆ.
ಇಂದು ಕಾಂಗ್ರೆಸ್ ಕಚೇರಿಗೆ ಆಗಮಿಸಿದ ಪ್ರಮೋದ್ ಅವರು ಮಾದ್ಯಮಗಳೊಂದಿಗೆ ಮಾತನಾಡಿದರು. ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ನಾನು ಕಾಂಗ್ರೆಸ್ -ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿದ್ದು, ಎರಡು ಪಕ್ಷದ ಚಿಹ್ನೆಯನ್ನು ಒಂದೇ ಶಾಲಿನಲ್ಲಿ ಮುದ್ರಿಸಿಕೊಂಡಿದ್ದೇನೆ. ಇಂತಹ ಶಾಲು ಈ ವರೆಗೆ ಯಾರೂ ತಯಾರು ಮಾಡಿಲ್ಲ. ಈ ಶಾಲನ್ನು ಎಪ್ರೀಲ್ 18 ರವರೆಗೆ ತೊಡುತ್ತೇನೆ. ಕಾಂಗ್ರೆಸ್- ಜೆಡಿಎಸ್ ಹಾಲು ಜೇನಿನಂತೆ ಬೆರೆಯಲಿದೆ ಎಂದು ಹೇಳಿದರು.
ಕಾಂಗ್ರೆಸ್ ಉಳಿಸಲು ಜೆಡಿಎಸ್ ಅಭ್ಯರ್ಥಿಯಾದೆ. ರಾಜ್ಯದಲ್ಲಿ ಹೇಗಿದ್ಯೋ ಗೊತ್ತಿಲ್ಲ. ಉಡುಪಿಯಲ್ಲಿ ಕಾಂಗ್ರೆಸ್- ಜೆಡಿಎಸ್ ಹಾಲು ಜೇನಿನಂತೆ ಬೆರೆಯಲಿದೆ. ನಾನು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಮೈತ್ರಿ ಧರ್ಮದಂತೆ ಉಡುಪಿ-ಚಿಕ್ಕಮಗಳೂರು ಜೆಡಿಎಸ್ ಪಾಲಾಯ್ತು. ಜೆಡಿಎಸ್ ಅಭ್ಯರ್ಥಿಯಾಗಿ ಕಾಂಗ್ರೆಸ್ ಪರವಾಗಿ ಸ್ಪರ್ಧಿಸ್ತೇನೆ. ಇಡೀ ದೇಶದಲ್ಲಿ ಪ್ರಥಮ ಬಾರಿಗೆ ಈ ಅವಕಾಶ ಸಿಕ್ಕಿದೆ ಎಂದರು.
ಉಭಯ ಜಿಲ್ಲೆಗಳ ಜನತೆ ಕೆಲಸ ಮಾಡುವ ಸಂಸದರನ್ನು ಆಯ್ಕೆ ಮಾಡಬೇಕು. ಇಡೀ ದೇಶದಲ್ಲಿ ಪ್ರಥಮ ಬಾರಿಗೆ ಇಂತಹ ಒಂದು ಅವಕಾಶ ನನಗೆ ಸಿಕ್ಕಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಉಳಿಸಲು ಈ ನಿರ್ಧಾರ ತೆಗೆದುಕೊಂಡಿದ್ದು ಒಂದು ವೇಳೆ ಗೆದ್ದು ಬಂದರೆ ರಾಜ ಧರ್ಮಪಾಲಿಸುತ್ತೇನೆ ಎಂದರು.
ಮಾರ್ಚ್ 25ಕ್ಕೆ ನಾಮಪತ್ರ ಸಲ್ಲಿಸುತ್ತೇನೆ. ಎರಡು ದಿನದಲ್ಲಿ ಎರಡು ಜಿಲ್ಲೆಗಳ ಪ್ರವಾಸ ಮಾಡುತ್ತೇನೆ ಎಂದರು. ಕಾಂಗ್ರೆಸ್ ಪಕ್ಷ ಉಳಿಸಲು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಗೆದ್ದು ಬಂದರೆ ರಾಜಧರ್ಮ ಪಾಲಿಸುತ್ತೇನೆ ಎಂದು ಮಧ್ವರಾಜ್ ಹೇಳಿದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…