Featured

ಕಾಂಗ್ರೆಸ್ ಉಳಿಸಲು ಜೆಡಿಎಸ್ ಅಭ್ಯರ್ಥಿಯಾದೆ : ಪ್ರಮೋದ್ ಮಧ್ವರಾಜ್ -Vishwanews24

ಉಡುಪಿ: ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜೆಡಿಎಸ್ ಬಿ ಫಾರ್ಮ್ ಪಡೆದಿದ್ದು, ಕಾಂಗ್ರೆಸ್ ಕೈ ಮತ್ತು ಜೆಡಿಎಸ್ ನ ತೆನೆ ಹೊತ್ತ ಮಹಿಳೆಯ ಚಿಹ್ನೆ ಇರುವ ಶಾಲು ಹೊದ್ದು ಕಾಣಿಸಿಕೊಂಡಿದ್ದಾರೆ.

ಇಂದು ಕಾಂಗ್ರೆಸ್ ಕಚೇರಿಗೆ ಆಗಮಿಸಿದ ಪ್ರಮೋದ್ ಅವರು ಮಾದ್ಯಮಗಳೊಂದಿಗೆ ಮಾತನಾಡಿದರು. ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ನಾನು ಕಾಂಗ್ರೆಸ್ -ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿದ್ದು, ಎರಡು ಪಕ್ಷದ ಚಿಹ್ನೆಯನ್ನು ಒಂದೇ ಶಾಲಿನಲ್ಲಿ ಮುದ್ರಿಸಿಕೊಂಡಿದ್ದೇನೆ. ಇಂತಹ ಶಾಲು ಈ ವರೆಗೆ ಯಾರೂ ತಯಾರು ಮಾಡಿಲ್ಲ. ಈ ಶಾಲನ್ನು ಎಪ್ರೀಲ್ 18 ರವರೆಗೆ ತೊಡುತ್ತೇನೆ. ಕಾಂಗ್ರೆಸ್- ಜೆಡಿಎಸ್ ಹಾಲು ಜೇನಿನಂತೆ ಬೆರೆಯಲಿದೆ ಎಂದು ಹೇಳಿದರು.

ಕಾಂಗ್ರೆಸ್ ಉಳಿಸಲು ಜೆಡಿಎಸ್ ಅಭ್ಯರ್ಥಿಯಾದೆ. ರಾಜ್ಯದಲ್ಲಿ ಹೇಗಿದ್ಯೋ ಗೊತ್ತಿಲ್ಲ. ಉಡುಪಿಯಲ್ಲಿ ಕಾಂಗ್ರೆಸ್- ಜೆಡಿಎಸ್ ಹಾಲು ಜೇನಿನಂತೆ ಬೆರೆಯಲಿದೆ. ನಾನು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಮೈತ್ರಿ ಧರ್ಮದಂತೆ ಉಡುಪಿ-ಚಿಕ್ಕಮಗಳೂರು ಜೆಡಿಎಸ್ ಪಾಲಾಯ್ತು. ಜೆಡಿಎಸ್ ಅಭ್ಯರ್ಥಿಯಾಗಿ ಕಾಂಗ್ರೆಸ್ ಪರವಾಗಿ ಸ್ಪರ್ಧಿಸ್ತೇನೆ. ಇಡೀ ದೇಶದಲ್ಲಿ ಪ್ರಥಮ ಬಾರಿಗೆ ಈ ಅವಕಾಶ ಸಿಕ್ಕಿದೆ ಎಂದರು.

ಉಭಯ ಜಿಲ್ಲೆಗಳ ಜನತೆ ಕೆಲಸ ಮಾಡುವ ಸಂಸದರನ್ನು ಆಯ್ಕೆ ಮಾಡಬೇಕು. ಇಡೀ ದೇಶದಲ್ಲಿ ಪ್ರಥಮ ಬಾರಿಗೆ ಇಂತಹ ಒಂದು ಅವಕಾಶ ನನಗೆ ಸಿಕ್ಕಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಉಳಿಸಲು ಈ ನಿರ್ಧಾರ ತೆಗೆದುಕೊಂಡಿದ್ದು ಒಂದು ವೇಳೆ ಗೆದ್ದು ಬಂದರೆ ರಾಜ ಧರ್ಮಪಾಲಿಸುತ್ತೇನೆ ಎಂದರು.

ಮಾರ್ಚ್ 25ಕ್ಕೆ ನಾಮಪತ್ರ ಸಲ್ಲಿಸುತ್ತೇನೆ. ಎರಡು ದಿನದಲ್ಲಿ ಎರಡು ಜಿಲ್ಲೆಗಳ ಪ್ರವಾಸ ಮಾಡುತ್ತೇನೆ ಎಂದರು. ಕಾಂಗ್ರೆಸ್ ಪಕ್ಷ ಉಳಿಸಲು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಗೆದ್ದು ಬಂದರೆ ರಾಜಧರ್ಮ ಪಾಲಿಸುತ್ತೇನೆ ಎಂದು ಮಧ್ವರಾಜ್ ಹೇಳಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

9 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

9 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

10 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

10 hours ago