Featured

ಕಾಂಗ್ರೆಸ್ ಉಳಿಸಲು ಜೆಡಿಎಸ್ ಅಭ್ಯರ್ಥಿಯಾದೆ : ಪ್ರಮೋದ್ ಮಧ್ವರಾಜ್ -Vishwanews24

ಉಡುಪಿ: ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜೆಡಿಎಸ್ ಬಿ ಫಾರ್ಮ್ ಪಡೆದಿದ್ದು, ಕಾಂಗ್ರೆಸ್ ಕೈ ಮತ್ತು ಜೆಡಿಎಸ್ ನ ತೆನೆ ಹೊತ್ತ ಮಹಿಳೆಯ ಚಿಹ್ನೆ ಇರುವ ಶಾಲು ಹೊದ್ದು ಕಾಣಿಸಿಕೊಂಡಿದ್ದಾರೆ.

ಇಂದು ಕಾಂಗ್ರೆಸ್ ಕಚೇರಿಗೆ ಆಗಮಿಸಿದ ಪ್ರಮೋದ್ ಅವರು ಮಾದ್ಯಮಗಳೊಂದಿಗೆ ಮಾತನಾಡಿದರು. ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ನಾನು ಕಾಂಗ್ರೆಸ್ -ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿದ್ದು, ಎರಡು ಪಕ್ಷದ ಚಿಹ್ನೆಯನ್ನು ಒಂದೇ ಶಾಲಿನಲ್ಲಿ ಮುದ್ರಿಸಿಕೊಂಡಿದ್ದೇನೆ. ಇಂತಹ ಶಾಲು ಈ ವರೆಗೆ ಯಾರೂ ತಯಾರು ಮಾಡಿಲ್ಲ. ಈ ಶಾಲನ್ನು ಎಪ್ರೀಲ್ 18 ರವರೆಗೆ ತೊಡುತ್ತೇನೆ. ಕಾಂಗ್ರೆಸ್- ಜೆಡಿಎಸ್ ಹಾಲು ಜೇನಿನಂತೆ ಬೆರೆಯಲಿದೆ ಎಂದು ಹೇಳಿದರು.

ಕಾಂಗ್ರೆಸ್ ಉಳಿಸಲು ಜೆಡಿಎಸ್ ಅಭ್ಯರ್ಥಿಯಾದೆ. ರಾಜ್ಯದಲ್ಲಿ ಹೇಗಿದ್ಯೋ ಗೊತ್ತಿಲ್ಲ. ಉಡುಪಿಯಲ್ಲಿ ಕಾಂಗ್ರೆಸ್- ಜೆಡಿಎಸ್ ಹಾಲು ಜೇನಿನಂತೆ ಬೆರೆಯಲಿದೆ. ನಾನು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಮೈತ್ರಿ ಧರ್ಮದಂತೆ ಉಡುಪಿ-ಚಿಕ್ಕಮಗಳೂರು ಜೆಡಿಎಸ್ ಪಾಲಾಯ್ತು. ಜೆಡಿಎಸ್ ಅಭ್ಯರ್ಥಿಯಾಗಿ ಕಾಂಗ್ರೆಸ್ ಪರವಾಗಿ ಸ್ಪರ್ಧಿಸ್ತೇನೆ. ಇಡೀ ದೇಶದಲ್ಲಿ ಪ್ರಥಮ ಬಾರಿಗೆ ಈ ಅವಕಾಶ ಸಿಕ್ಕಿದೆ ಎಂದರು.

ಉಭಯ ಜಿಲ್ಲೆಗಳ ಜನತೆ ಕೆಲಸ ಮಾಡುವ ಸಂಸದರನ್ನು ಆಯ್ಕೆ ಮಾಡಬೇಕು. ಇಡೀ ದೇಶದಲ್ಲಿ ಪ್ರಥಮ ಬಾರಿಗೆ ಇಂತಹ ಒಂದು ಅವಕಾಶ ನನಗೆ ಸಿಕ್ಕಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಉಳಿಸಲು ಈ ನಿರ್ಧಾರ ತೆಗೆದುಕೊಂಡಿದ್ದು ಒಂದು ವೇಳೆ ಗೆದ್ದು ಬಂದರೆ ರಾಜ ಧರ್ಮಪಾಲಿಸುತ್ತೇನೆ ಎಂದರು.

ಮಾರ್ಚ್ 25ಕ್ಕೆ ನಾಮಪತ್ರ ಸಲ್ಲಿಸುತ್ತೇನೆ. ಎರಡು ದಿನದಲ್ಲಿ ಎರಡು ಜಿಲ್ಲೆಗಳ ಪ್ರವಾಸ ಮಾಡುತ್ತೇನೆ ಎಂದರು. ಕಾಂಗ್ರೆಸ್ ಪಕ್ಷ ಉಳಿಸಲು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಗೆದ್ದು ಬಂದರೆ ರಾಜಧರ್ಮ ಪಾಲಿಸುತ್ತೇನೆ ಎಂದು ಮಧ್ವರಾಜ್ ಹೇಳಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago