ಹೊಸಪೇಟೆ: ‘ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಅದನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ಕಾಂಗ್ರೆಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರನಾಥ ಆರೋಪಿಸಿದರು.
ಗುರುವಾರ ಇಲ್ಲಿನ ಬ್ಲಾಕ್ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಆಯೋಜಿಸಿದ್ದ ವಿಜಯನಗರ ಕ್ಷೇತ್ರದ ಮಹಿಳಾ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದರು.
‘ಒಂದೆಡೆ ಕೊರೊನಾ ಸೋಂಕು ಹರಡುತ್ತಿರುವುದರಿಂದ ಜನ ಸಾವನ್ನಪ್ಪುತ್ತಿದ್ದಾರೆ. ಇನ್ನೊಂದೆಡೆ ಜನ ಉದ್ಯೋಗ ಕಳೆದುಕೊಂಡು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕಾರ್ಯಕರ್ತರು ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸುತ್ತ ಪಕ್ಷ ಸಂಘಟಿಸಬೇಕು’ ಎಂದು ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಇಮಾಮ್ ನಿಯಾಜಿ, ಮಹಿಳಾ ಕಾಂಗ್ರೆಸ್ನ ಭಾಗ್ಯಲಕ್ಷ್ಮಿ ಭರಾಡೆ, ಕೆರೋಲಿನ್ ಸ್ಮಿತ್, ಮುನ್ನಿ ಕಾಸಿಂ, ಬಾನುಬೀ, ರಜೀಯಾ ಬೇಗಂ, ರಂಗಮ್ಮ, ಶಮಾ, ಗೀತಾ ತಿಮ್ಮಪ್ಪ, ಗೌಸಿಯಾ ಬಾನು, ಆಶಾಬೀ, ಮುಖಂಡರಾದ ತೇಜ ನಾಯ್ಕ, ವಿನಯ ಶೆಟ್ಟರ್, ತಾಜುದ್ದೀನ್, ಅಲಾನ್ ಬಾಷಾ, ತಿಮ್ಮಪ್ಪ, ಕೋತಿ ಮಂಜುನಾಥ, ಫರೋಜ್, ಜಫ್ರುಲ್ಲಾ ಖಾನ್, ನಾಗರಾಜು, ರಾಜು, ಜಾವೀದ್ ಇದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…