ಹೊಸಪೇಟೆ: ‘ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಅದನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ಕಾಂಗ್ರೆಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರನಾಥ ಆರೋಪಿಸಿದರು.
ಗುರುವಾರ ಇಲ್ಲಿನ ಬ್ಲಾಕ್ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಆಯೋಜಿಸಿದ್ದ ವಿಜಯನಗರ ಕ್ಷೇತ್ರದ ಮಹಿಳಾ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದರು.
‘ಒಂದೆಡೆ ಕೊರೊನಾ ಸೋಂಕು ಹರಡುತ್ತಿರುವುದರಿಂದ ಜನ ಸಾವನ್ನಪ್ಪುತ್ತಿದ್ದಾರೆ. ಇನ್ನೊಂದೆಡೆ ಜನ ಉದ್ಯೋಗ ಕಳೆದುಕೊಂಡು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕಾರ್ಯಕರ್ತರು ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸುತ್ತ ಪಕ್ಷ ಸಂಘಟಿಸಬೇಕು’ ಎಂದು ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಇಮಾಮ್ ನಿಯಾಜಿ, ಮಹಿಳಾ ಕಾಂಗ್ರೆಸ್ನ ಭಾಗ್ಯಲಕ್ಷ್ಮಿ ಭರಾಡೆ, ಕೆರೋಲಿನ್ ಸ್ಮಿತ್, ಮುನ್ನಿ ಕಾಸಿಂ, ಬಾನುಬೀ, ರಜೀಯಾ ಬೇಗಂ, ರಂಗಮ್ಮ, ಶಮಾ, ಗೀತಾ ತಿಮ್ಮಪ್ಪ, ಗೌಸಿಯಾ ಬಾನು, ಆಶಾಬೀ, ಮುಖಂಡರಾದ ತೇಜ ನಾಯ್ಕ, ವಿನಯ ಶೆಟ್ಟರ್, ತಾಜುದ್ದೀನ್, ಅಲಾನ್ ಬಾಷಾ, ತಿಮ್ಮಪ್ಪ, ಕೋತಿ ಮಂಜುನಾಥ, ಫರೋಜ್, ಜಫ್ರುಲ್ಲಾ ಖಾನ್, ನಾಗರಾಜು, ರಾಜು, ಜಾವೀದ್ ಇದ್ದರು.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …