Featured

ಕಾಂಗ್ರೆಸ್ ಕಾರ್ಯರ್ಕತರು ಸತ್ಯವನ್ನು ಜನರಿಗೆ ಮನದಟ್ಟು ಮಾಡುವಲ್ಲಿ ವಿಫಲರಾದರು, ಬಿಜೆಪಿ ಅಧಿಕಾರಕ್ಕೆ ಬಾರದಂತೆ ತಡೆಯಿರಿ : ಸಿದ್ದರಾಮಯ್ಯ -Vishwanews24

ಮಂಗಳೂರು: ಬಿಜೆಪಿಗೆ ಅಧಿಕಾರ ನೀಡಿದರೆ ಅಭಿವೃದ್ಧಿ ಕಾರ್ಯ ನಡೆಯುವುದಿಲ್ಲ. ಹಾಗಾಗಿ ನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಾರದಂತೆ ತಡೆಯಿರಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

ನಗರದ ಸೆಬಾಸ್ಟಿನ್ ಚರ್ಚ್ ಸಭಾಂಗಣದಲ್ಲಿ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರು ಸುಳ್ಳು ಹೇಳಿದರು. ಕಾಂಗ್ರೆಸ್ ಕಾರ್ಯರ್ಕತರು ಸತ್ಯವನ್ನು ಜನರಿಗೆ ಮನದಟ್ಟು ಮಾಡುವಲ್ಲಿ ವಿಫಲರಾದರು. ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಕಾರ್ಯಕರ್ತರು ಮನೆಗಳಿಗೆ ತೆರಳಿ ಧೈರ್ಯವಾಗಿ ಹೇಳಬೇಕು. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದರು.

ಕಾಂಗ್ರೆಸ್ ಸರ್ಕಾರ ಇದ್ದಾಗ ಕರಾವಳಿಗೆ ಗರಿಷ್ಠ ಅನುದಾನ ನೀಡಲಾಗಿದೆ. ಕಾಂಗ್ರೆಸ್ ಶಾಸಕರು ತಮ್ಮ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಆದರೆ ಬಿಜೆಪಿಯ ಅಪಪ್ರಚಾರ ಮೇಲುಗೈ ಸಾಧಿಸಿತು. ಆರೆಸ್ಸೆಸ್ ಹಾಗೂ ಬಿಜೆಪಿಯ ಕೋಮುವಾದಕ್ಕೆ ಮಂಗಳೂರು ಪ್ರಯೋಗಾಲಯ. ಶ್ರೀರಾಮ, ಹಿಂದುತ್ವ, ಪಾಕಿಸ್ತಾನ ಎಂದು ಭಾವನಾತ್ಮಕ ವಿಚಾರಗಳನ್ನು ಮಾತ್ರ ಜನರಿಗೆ ಹೇಳುತ್ತಾರೆ. ಅಭಿವೃದ್ಧಿ ವಿಚಾರ ಬಿಟ್ಟು ಜನರ ಮನಸ್ಸುಗಳನ್ನು ಬೇರೆಡೆ ಸೆಳೆಯಲು ಅವರು ಪ್ರಯತ್ನಿಸುತ್ತಾರೆ. ಇದಕ್ಕೆ ಪ್ರತಿಯಾಗಿ ದೇಶದ ಆರ್ಥಿಕ, ಸಾಮಾಜಿಕ ಸಮಸ್ಯೆಗಳನ್ನು ಜನರೆದುರು ಇಡುವ ಕೆಲಸವನ್ನು ಕಾಂಗ್ರೆಸ್ ಕಾರ್ಯರ್ಕತರು ಮಾಡಬೇಕು ಎಂದರು.

ಶಾಸಕ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ, ಹರೀಶ್‌ಕುಮಾರ್, ಮಾಜಿ ಸಚಿವರಾದಬಿ.ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಮೊಯಿದ್ದೀನ್ ಬಾವಾ, ಜೆ.ಆರ್. ಲೋಬೊ, ಯು.ಆರ್.ಸಭಾಪತಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ನಾಯಕರಾದ ಅಶೋಕ್ ಕೊಡವೂರು, ಶಾಲೆಟ್ ಪಿಂಟೊ, ಅಬ್ದುಲ್ ಸಲೀಂ, ಸದಾಶಿವ ಶೆಟ್ಟಿ, ಧನಂಜಯ ಅಡ್ಪಂಗಾಯ, ಶಶಿಧರ್ ಹೆಗ್ಡೆ, ಭಾಸ್ಕರ ಮೊಯ್ಲಿ, ಪಿ.ವಿ. ಮೋಹನ್, ಕವಿತಾ ಸನಿಲ್ ಮುಂತಾದವರು ಉಪಸ್ಥಿತರಿದ್ದರು.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

4 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

4 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

4 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

4 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

5 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

5 hours ago