Featured

ಕಾಂಗ್ರೆಸ್ ಕುಟುಂಬೋತ್ಸವ : ಮಾ. 2ರಂದು  ಕಾರ್ಕಳಕ್ಕೆ ಡಿ.ಕೆ. ಶಿವಕುಮಾರ್  – vishwanews24

ಮಾ. 2ರಂದು ಕಾರ್ಕಳದಲ್ಲಿ ಕಾಂಗ್ರೆಸ್ ಕುಟುಂಬೋತ್ಸವ : ಡಿ.ಕೆ. ಶಿವಕುಮಾರ್ ಭಾಗಿ

ಕಾರ್ಕಳ : ಜನ ಮೆಚ್ಚಿದ ನಾಯಕ, ಯುವಕರ ಕಣ್ಮಣಿ ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಮಾ. 2ರಂದು ಸಂಜೆ 4ಗಂಟೆಗೆ ಕಾರ್ಕಳ ಗಾಂಧಿ ಮೈದಾನದಲ್ಲಿ ನಡೆಯುವ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಭಾಗವಹಿಸಲಿದ್ದಾರೆ.

ಸಾವಿರ ಸೀಮೆಯ ಒಡತಿ ಕಾಪು ಮಾರಿಕಾಂಬೆಯ ಪ್ರತಿಷ್ಠಾಪನೆಯಲ್ಲಿ ಭಾಗವಹಿಸಿದ ಉಪಮುಖ್ಯಮಂತ್ರಿಗಳು ಬಳಿಕ ಕಾರ್ಕಳದಲ್ಲಿ ನಡೆಯುವ ಸಂಭ್ರಮದಲ್ಲಿ ಜೊತೆಯಾಗಲಿದ್ದಾರೆ. ಈ ಬಾರಿಯ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ಕಾರ್ಯಕರ್ತರನ್ನು ಹುರಿದುಂಬಿಸಲಿದ್ದಾರೆ.

ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 209 ಬೂತ್ ಗಳ, 34 ಗ್ರಾಮೀಣ ಕಾಂಗ್ರೆಸ್ ಗಳ ಹಾಗೂ 2 ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇದೇ ವೇದಿಕೆಯಲ್ಲಿ ನಡೆಯಲಿದ್ದು ಕಾಂಗ್ರೆಸ್ ಕುಟುಂಬ ಒಂದಾಗಿ ಸಂಭ್ರಮಿಸಲಿದೆ.

ಸಹಸ್ರ ಸಂಖ್ಯೆಯ ಜನರು ಸಂಭ್ರಮದಲ್ಲಿ ಭಾಗಿ :

ಈಗಾಗಲೇ ಉಚಿತ ಗ್ಯಾರಂಟಿ ಯೋಜನೆಯ ಮೂಲಕ ಜನಮನಗೆದ್ದ ಕಾಂಗ್ರೆಸ್ ಸರಕಾರದ ಜನಪರ ಯೋಜನೆಗಳನ್ನು ಜನ ಕೊಂಡಾಡುತ್ತಿದ್ದು ಅದರಲ್ಲೂ ವಿಶೇಷವಾಗಿ ಗೃಹಲಕ್ಷ್ಮಿ ಯೋಜನೆ, ಉಚಿತ ಕರೆಂಟ್ ಮೊದಲಾದ ಜನಪದ ಯೋಜನೆಗಳು ಮಹಿಳೆಯರ ಮನ ಗೆದ್ದಿದೆ. ಆದ್ದರಿಂದ ಬೃಹತ್ ಸಂಖ್ಯೆಯ ಮಹಿಳೆಯರು ಸೇರಿದಂತೆ ಸಹಸ್ರ ಸಂಖ್ಯೆಯ ಜನ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಭಾಗವಹಿಸಲಿದ್ದಾರೆ.

ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಕಾಂಗ್ರೆಸ್ ನ ಹಿರಿಯ ನಾಯಕರಾದ ಡಾ. ವೀರಪ್ಪ ಮೊಯ್ಲಿ ಅವರು ಶಾಸಕತ್ವವನ್ನು ಪಡೆದು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅವರಿಗೆ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಅಲ್ಲದೆ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ, ಪದಾಧಿಕಾರಿಗಳ ಪದಗ್ರಹಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆಯಲಿದೆ.

ಈಗಾಗಲೇ ಬ್ಲಾಕ್ ಕಾಂಗ್ರೆಸ್ ಕಾರ್ಕಳ ಮತ್ತು ಹೆಬ್ರಿ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸುತ್ತಿದ್ದು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಿನಂತಿಸಿದ್ದಾರೆ.

Vishwa News 24

Recent Posts

ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ- vishwanews24

ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…

27 minutes ago

ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ – vishwanews24

ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…

1 hour ago

ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ  – vishwanews24

ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ  ಉಡುಪಿ: ಮಂಗಳೂರಿನಿಂದ…

2 hours ago

ಆಳ್ವಾಸ್ ಪ್ರಗತಿ – 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ – vishwanews24

ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…

2 hours ago

ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್‌ ಗಾಂಧಿ ಆರೋಪ – vishwanews24

ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್‌ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…

2 hours ago

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ – vishwanews24

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…

3 hours ago