ನೆನ್ನೆ ಉಡುಪಿಯಲ್ಲಿ ನಡೆದ ಬಂದ್ ಸಂದರ್ಭ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಅದರಲ್ಲಿ ಒಂದು ಬಲವಂತವಾಗಿ ಬಂದ್ ನಡೆಸುತ್ತಿದ್ದ ಸುಮಾರು ಇನ್ನೂರರಷ್ಟಿದ್ದ ಕಾಂಗ್ರೆಸ್ ಕಾರ್ಯಕರ್ತರ ನಡುವೆ ತನ್ನ ಒಬ್ಬ ಸ್ನೇಹಿತನ ಜೊತೆಗೂಡಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಜೈಕಾರ ಹಾಕಿದ ಧೀರ ಹೆಣ್ಣುಮಗಳ ವಿಡಿಯೋ..
ಚೈತ್ರಾ ಕುಂದಾಪುರ ಎಂಬ ಎಂಬ ಯುವತಿ ಉಡುಪಿಯ ಕಡಿಯಾಳಿ ಎಂಬಲ್ಲಿ ತಿಂಡಿ ತಿನ್ನಲು ಹೋಟೆಲ್ ಒಂದಕ್ಕೆ ತೆರಳಿದ್ದರು ಆ ಸಂದರ್ಭ ಅಲ್ಲಿಗೆ ಬಂದ ಕಾಂಗ್ರೆಸ್ ಕಾರ್ಯಕರ್ತರು ತಿಂಡಿ ತಿನ್ನುತ್ತಿದ್ದವರನ್ನು ಬಲವಂತವಾಗಿ ಹೊರದೂಡಿ ಹೋಟೆಲ್ ಶಟರ್ ಅನ್ನು ಮುಚ್ಚಿದ್ದರು. ಹೀಗೆ 200 ರ ಅಸುಪಾಸಿನಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರ ನಡುವಿಗೆ ಬಂದ ಚೈತ್ರಾ ಕುಂದಾಪುರ ಏಕಾಏಕಿ ಮೋದಿಯವರಿಗೆ ಜೈಕಾರ ಹಾಕಲು ಆರಂಭಿಸಿದ್ದರು. ಇದರಿಂದ ಕಾಂಗ್ರೆಸ್ ಕಾರ್ಯಕರ್ತರು ಸ್ವಲ್ಪ ಸಮಯ ಕಕ್ಕಾಬಿಕ್ಕಿಯಾಗಿ ಬಳಿಕ ತಾವೂ ಕಾಂಗ್ರೆಸ್ ಗೆ ಜೈಕಾರ ಹಾಕಲು ಆರಂಭಿಸಿದರು. ಈ ಸಂದರ್ಭ ತಳ್ಳಾಟಗಳು ನಡೆದು ಚೈತ್ರಾ ಕುಂದಾಪುರ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಉಡುಪಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚೈತ್ರಾರ ಧೈರ್ಯವನ್ನು ದೇಶದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರೂ ಸಹ ಕೊಂಡಾಡಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಆ ವಿಡಿಯೋವನ್ನು ಶೇರ್ ಮಾಡಿರುವ ರಕ್ಷಣಾ ಸಚಿವೆ “ಈ ಯುವತಿ ಭಾರತ್ ಬಂದ್ ಸಂದರ್ಭ ತೋರಿರುವ ಧೈರ್ಯ ಹಾಗೂ ಮೋದಿ ಸರಕಾರದ ಮೇಲೆ ಇಟ್ಟಿರುವ ನಂಬಿಕೆ ಗಮನಾರ್ಹವಾಗಿದೆ. ದೇಶದ ಇತರ ಪ್ರದೇಶಗಳಲ್ಲಿಯೂ ಸಹ ಜನರು ಭಾರತ್ ಬಂದ್ ಅನ್ನು ತಿರಸ್ಕರಿಸಲು ಹೊರಬಂದಿದ್ದು ಕಾಂಗ್ರೆಸ್ ನ ಬೂಟಾಟಿಕೆಯನ್ನು ಬಹಿರಂಗವಾಗಿ ತಿರಸ್ಕರಿಸಿದ ಎಲ್ಲರಿಗೂ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೇಸ್!
ಚೈತ್ರಾ ಕುಂದಾಪುರ ಹಾಗೂ ಶ್ರೀಕಾಂತ್ ಎಂಬವರ ಮೇಲೆ ಹಲ್ಲೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೇಸ್ ದಾಖಲಾಗಿದೆ. ಬಂದ್ ವೇಳೆ ಮೋದಿ ಮೋದಿ ಎಂದು ಘೋಷಣೆ ಕೂಗಿದ್ದ ಚೈತ್ರಾ ಕುಂದಾಪುರ ಹಾಗೂ ತಂಡದ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿದ್ದ ಪ್ರಕರಣ ಇದೀಗ ರಾಷ್ಟ್ರವ್ಯಾಪಿ ಚರ್ಚೆ ನಡೆಯುತ್ತಿದ್ದು ಇದಕ್ಕೆ ಸಂಬಂಧಿಸಿದಂತೆ ಉಡುಪಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. .
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…