ಉಡುಪಿ

ಕಾಂಗ್ರೆಸ್ ಗೆ ಕೆಡ್ಡಾ ತೋಡಲು ಕೊನೆ‌ಕ್ಷಣದಲ್ಲಿ ಮತ್ತೊಂದು ದಾಳ ಉರುಳಿಸಿದ ಹಾಲಾಡಿ :vishwanews24 Bharath

ಕಾಂಗ್ರೆಸ್ ಗೆ ಕೆಡ್ಡಾ ತೋಡಲು ಕೊನೆ‌ಕ್ಷಣದಲ್ಲಿ ಮತ್ತೊಂದು ದಾಳ ಉರುಳಿಸಿದ ಹಾಲಾಡಿ :vishwanews24 Bharath

ಉಡುಪಿ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ತನ್ನ ನಿಗೂಢ ನಡೆಯಿಂದ ಭಾರೀ ಕುತೂಹಲ ಕೆರಳಿಸಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಕೊನೆಗೂ ಅಖಾಡ ಕ್ಕೆ ಇಳಿದಿದ್ದಾರೆ
ಚುನಾವಣೆಗೆ ಒಂದು ದಿನ ಬಾಕಿ ಇರುವಾಗ ಹಾಲಾಡಿ ಅವರು ತನ್ನ ಮನೆಯಲ್ಲಿ ಅತ್ಯಾಪ್ತರ ಸಭೆಯನ್ನು ನಡೆಸಿ ಬಿಜೆಪಿಯನ್ನು ಬಹುಮತದಿಂದ ಗೆಲ್ಲಿಸಲು ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಬುಧವಾರ ರಾತ್ರಿ ಹಾಲಾಡಿ ಅವರ ಸ್ವ ನಿವಾಸದಲ್ಲಿ ಈ ರಹಸ್ಯ ಸಭೆ ನಡೆದಿದೆ ಎನ್ನಲಾಗಿದ್ದು ಸಭೆಯಲ್ಲಿ 37ಕ್ಕೂ ಅಧಿಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಆಪ್ತರು ಭಾಗವಹಿಸಿದ್ದರು ಎನ್ನಲಾಗಿದೆ.

ಕೋಟ ಹೋಬಳಿ, ಕೋಡಿ ಹೊಸಬೆಂಗ್ರೆ, ಸಾಹೇಬರಕಟ್ಟೆ, ಮಧುವನ ಮತ್ತು ಕುಂದಾಪುರ ನಗರ ಭಾಗದಲ್ಲಿ ಬಿಜೆಪಿ ಇನ್ನಷ್ಟು ಸಕ್ರಿಯವಾಗಿ ಕೆಲಸ ನಿರ್ವಹಿಸುವಂತೆ ಹಾಲಾಡಿ ಸೂಚಿಸಿದ್ದಾರೆ. ಈ ಸಭೆಯ ಬಳಿಕ ಕುಂದಾಪುರದಲ್ಲಿ ಬಿಜೆಪಿಯ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಹಾಲಾಡಿ ಅವರು ಬಿಟ್ಟು ಕೊಟ್ಟ ಸ್ಥಾನದಲ್ಲಿ ವಿಧಾನಸಭಾ ಚುನಾವಣೆಗೆ ನಿಂತು ಗೆದ್ದಿದ್ದ ಕಿರಣ್ ಕೋಡ್ಗಿ ಅವರು ಕಳೆದ ಬಾರಿ ಕುಂದಾಪುರದಲ್ಲಿ 45 ಸಾವಿರ ಮತಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದ್ದರು.

ಈಗ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಲೋಕಸಭಾ ಅಭ್ಯರ್ಥಿಯ ಮೇಲಿರುವ ಅಸಮಾಧಾನದ ಕಾರಣಕ್ಕೆ ಹಲವಾರು ಪ್ರಮುಖ ಬಿಜೆಪಿ ಕಾರ್ಯಕರ್ತರು ಚುನಾವಣೆಯಿಂದ ಅಂತರ ಕಾಯ್ದುಕೊಂಡಿದ್ದರು. ಇದರಲ್ಲಿ ಹೆಚ್ಚಿನವರು ಹಾಲಾಡಿ ಆಪ್ತರು ಎನ್ನಲಾಗಿದೆ. ಇದೇ ಕಾರಣದಿಂದ ಬಿಜೆಪಿ ಪಕ್ಷದ ಮತಗಳು ವಿಭಜನೆಯಾದರೆ ಮುಂದೆ ಕುಂದಾಪುರದಲ್ಲಿ ಕಾಂಗ್ರೆಸ್ ಬಲಿಷ್ಠಗೊಂಡು ಜಯಪ್ರಕಾಶ್ ಹೆಗ್ಡೆ ಅದರ ನಾಯಕತ್ವ ವಹಿಸಿಕೊಳ್ಳುವ ಅಪಾಯ ಇದೆ ಎಂದು ಹಾಲಾಡಿ ಮುಂಜಾಗ್ರತೆ ವಹಿಸಿಕೊಂಡಿರುವ ಸಾಧ್ಯತೆ ಇದೆ.

ಜಯಪ್ರಕಾಶ್ ಹೆಗಡೆ ಮತ್ತು ಹಾಲಾಡಿ ಶ್ರೀನಿವಾಸ್ ಶೆಟ್ಟಿ ಇಬ್ಬರು ಕೂಡ ಹಲವಾರು ವರ್ಷಗಳಿಂದ ಕುಂದಾಪುರದಲ್ಲಿ ಪಾರಂಪರಿಕ ಎದುರಾಳಿಗಳಾಗಿ ಗುರುತಿಸಿಕೊಂಡಿದ್ದಾರೆ.
ಹಾಲಾಡಿ ಅವರ ಈ ಕೊನೆಯ ಕ್ಷಣದ ನಡೆ ಕುಂದಾಪುರದ ಇಡೀ ರಾಜಕೀಯ ಚಿತ್ರಣವನ್ನೇ ಬದಲಾಯಿಸಿದೆ. ಕುಂದಾಪುರದಲ್ಲಿ ಆದರೂ ಲೀಡ್ ಬರಬಹುದು ಎಂದು ಭಾವಿಸಿದ್ದ ಕಾಂಗ್ರೆಸ್ಸಿಗೆ ಹಾಲಾಡಿಯವರ ಈ ಪ್ರಹಾರ ಮರ್ಮಾಘಾತ ಮಾಡಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

7 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago