ಉಡುಪಿ

ಕಾಂಗ್ರೆಸ್ ಗೆ ಕೆಡ್ಡಾ ತೋಡಲು ಕೊನೆ‌ಕ್ಷಣದಲ್ಲಿ ಮತ್ತೊಂದು ದಾಳ ಉರುಳಿಸಿದ ಹಾಲಾಡಿ :vishwanews24 Bharath

ಕಾಂಗ್ರೆಸ್ ಗೆ ಕೆಡ್ಡಾ ತೋಡಲು ಕೊನೆ‌ಕ್ಷಣದಲ್ಲಿ ಮತ್ತೊಂದು ದಾಳ ಉರುಳಿಸಿದ ಹಾಲಾಡಿ :vishwanews24 Bharath

ಉಡುಪಿ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ತನ್ನ ನಿಗೂಢ ನಡೆಯಿಂದ ಭಾರೀ ಕುತೂಹಲ ಕೆರಳಿಸಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಕೊನೆಗೂ ಅಖಾಡ ಕ್ಕೆ ಇಳಿದಿದ್ದಾರೆ
ಚುನಾವಣೆಗೆ ಒಂದು ದಿನ ಬಾಕಿ ಇರುವಾಗ ಹಾಲಾಡಿ ಅವರು ತನ್ನ ಮನೆಯಲ್ಲಿ ಅತ್ಯಾಪ್ತರ ಸಭೆಯನ್ನು ನಡೆಸಿ ಬಿಜೆಪಿಯನ್ನು ಬಹುಮತದಿಂದ ಗೆಲ್ಲಿಸಲು ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಬುಧವಾರ ರಾತ್ರಿ ಹಾಲಾಡಿ ಅವರ ಸ್ವ ನಿವಾಸದಲ್ಲಿ ಈ ರಹಸ್ಯ ಸಭೆ ನಡೆದಿದೆ ಎನ್ನಲಾಗಿದ್ದು ಸಭೆಯಲ್ಲಿ 37ಕ್ಕೂ ಅಧಿಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಆಪ್ತರು ಭಾಗವಹಿಸಿದ್ದರು ಎನ್ನಲಾಗಿದೆ.

ಕೋಟ ಹೋಬಳಿ, ಕೋಡಿ ಹೊಸಬೆಂಗ್ರೆ, ಸಾಹೇಬರಕಟ್ಟೆ, ಮಧುವನ ಮತ್ತು ಕುಂದಾಪುರ ನಗರ ಭಾಗದಲ್ಲಿ ಬಿಜೆಪಿ ಇನ್ನಷ್ಟು ಸಕ್ರಿಯವಾಗಿ ಕೆಲಸ ನಿರ್ವಹಿಸುವಂತೆ ಹಾಲಾಡಿ ಸೂಚಿಸಿದ್ದಾರೆ. ಈ ಸಭೆಯ ಬಳಿಕ ಕುಂದಾಪುರದಲ್ಲಿ ಬಿಜೆಪಿಯ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಹಾಲಾಡಿ ಅವರು ಬಿಟ್ಟು ಕೊಟ್ಟ ಸ್ಥಾನದಲ್ಲಿ ವಿಧಾನಸಭಾ ಚುನಾವಣೆಗೆ ನಿಂತು ಗೆದ್ದಿದ್ದ ಕಿರಣ್ ಕೋಡ್ಗಿ ಅವರು ಕಳೆದ ಬಾರಿ ಕುಂದಾಪುರದಲ್ಲಿ 45 ಸಾವಿರ ಮತಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದ್ದರು.

ಈಗ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಲೋಕಸಭಾ ಅಭ್ಯರ್ಥಿಯ ಮೇಲಿರುವ ಅಸಮಾಧಾನದ ಕಾರಣಕ್ಕೆ ಹಲವಾರು ಪ್ರಮುಖ ಬಿಜೆಪಿ ಕಾರ್ಯಕರ್ತರು ಚುನಾವಣೆಯಿಂದ ಅಂತರ ಕಾಯ್ದುಕೊಂಡಿದ್ದರು. ಇದರಲ್ಲಿ ಹೆಚ್ಚಿನವರು ಹಾಲಾಡಿ ಆಪ್ತರು ಎನ್ನಲಾಗಿದೆ. ಇದೇ ಕಾರಣದಿಂದ ಬಿಜೆಪಿ ಪಕ್ಷದ ಮತಗಳು ವಿಭಜನೆಯಾದರೆ ಮುಂದೆ ಕುಂದಾಪುರದಲ್ಲಿ ಕಾಂಗ್ರೆಸ್ ಬಲಿಷ್ಠಗೊಂಡು ಜಯಪ್ರಕಾಶ್ ಹೆಗ್ಡೆ ಅದರ ನಾಯಕತ್ವ ವಹಿಸಿಕೊಳ್ಳುವ ಅಪಾಯ ಇದೆ ಎಂದು ಹಾಲಾಡಿ ಮುಂಜಾಗ್ರತೆ ವಹಿಸಿಕೊಂಡಿರುವ ಸಾಧ್ಯತೆ ಇದೆ.

ಜಯಪ್ರಕಾಶ್ ಹೆಗಡೆ ಮತ್ತು ಹಾಲಾಡಿ ಶ್ರೀನಿವಾಸ್ ಶೆಟ್ಟಿ ಇಬ್ಬರು ಕೂಡ ಹಲವಾರು ವರ್ಷಗಳಿಂದ ಕುಂದಾಪುರದಲ್ಲಿ ಪಾರಂಪರಿಕ ಎದುರಾಳಿಗಳಾಗಿ ಗುರುತಿಸಿಕೊಂಡಿದ್ದಾರೆ.
ಹಾಲಾಡಿ ಅವರ ಈ ಕೊನೆಯ ಕ್ಷಣದ ನಡೆ ಕುಂದಾಪುರದ ಇಡೀ ರಾಜಕೀಯ ಚಿತ್ರಣವನ್ನೇ ಬದಲಾಯಿಸಿದೆ. ಕುಂದಾಪುರದಲ್ಲಿ ಆದರೂ ಲೀಡ್ ಬರಬಹುದು ಎಂದು ಭಾವಿಸಿದ್ದ ಕಾಂಗ್ರೆಸ್ಸಿಗೆ ಹಾಲಾಡಿಯವರ ಈ ಪ್ರಹಾರ ಮರ್ಮಾಘಾತ ಮಾಡಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago