ಕಾಂಗ್ರೆಸ್ ಗೆ ಕೆಡ್ಡಾ ತೋಡಲು ಕೊನೆಕ್ಷಣದಲ್ಲಿ ಮತ್ತೊಂದು ದಾಳ ಉರುಳಿಸಿದ ಹಾಲಾಡಿ :vishwanews24 Bharath
ಉಡುಪಿ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ತನ್ನ ನಿಗೂಢ ನಡೆಯಿಂದ ಭಾರೀ ಕುತೂಹಲ ಕೆರಳಿಸಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಕೊನೆಗೂ ಅಖಾಡ ಕ್ಕೆ ಇಳಿದಿದ್ದಾರೆ
ಚುನಾವಣೆಗೆ ಒಂದು ದಿನ ಬಾಕಿ ಇರುವಾಗ ಹಾಲಾಡಿ ಅವರು ತನ್ನ ಮನೆಯಲ್ಲಿ ಅತ್ಯಾಪ್ತರ ಸಭೆಯನ್ನು ನಡೆಸಿ ಬಿಜೆಪಿಯನ್ನು ಬಹುಮತದಿಂದ ಗೆಲ್ಲಿಸಲು ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಬುಧವಾರ ರಾತ್ರಿ ಹಾಲಾಡಿ ಅವರ ಸ್ವ ನಿವಾಸದಲ್ಲಿ ಈ ರಹಸ್ಯ ಸಭೆ ನಡೆದಿದೆ ಎನ್ನಲಾಗಿದ್ದು ಸಭೆಯಲ್ಲಿ 37ಕ್ಕೂ ಅಧಿಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಆಪ್ತರು ಭಾಗವಹಿಸಿದ್ದರು ಎನ್ನಲಾಗಿದೆ.
ಕೋಟ ಹೋಬಳಿ, ಕೋಡಿ ಹೊಸಬೆಂಗ್ರೆ, ಸಾಹೇಬರಕಟ್ಟೆ, ಮಧುವನ ಮತ್ತು ಕುಂದಾಪುರ ನಗರ ಭಾಗದಲ್ಲಿ ಬಿಜೆಪಿ ಇನ್ನಷ್ಟು ಸಕ್ರಿಯವಾಗಿ ಕೆಲಸ ನಿರ್ವಹಿಸುವಂತೆ ಹಾಲಾಡಿ ಸೂಚಿಸಿದ್ದಾರೆ. ಈ ಸಭೆಯ ಬಳಿಕ ಕುಂದಾಪುರದಲ್ಲಿ ಬಿಜೆಪಿಯ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಹಾಲಾಡಿ ಅವರು ಬಿಟ್ಟು ಕೊಟ್ಟ ಸ್ಥಾನದಲ್ಲಿ ವಿಧಾನಸಭಾ ಚುನಾವಣೆಗೆ ನಿಂತು ಗೆದ್ದಿದ್ದ ಕಿರಣ್ ಕೋಡ್ಗಿ ಅವರು ಕಳೆದ ಬಾರಿ ಕುಂದಾಪುರದಲ್ಲಿ 45 ಸಾವಿರ ಮತಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದ್ದರು.
ಈಗ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಲೋಕಸಭಾ ಅಭ್ಯರ್ಥಿಯ ಮೇಲಿರುವ ಅಸಮಾಧಾನದ ಕಾರಣಕ್ಕೆ ಹಲವಾರು ಪ್ರಮುಖ ಬಿಜೆಪಿ ಕಾರ್ಯಕರ್ತರು ಚುನಾವಣೆಯಿಂದ ಅಂತರ ಕಾಯ್ದುಕೊಂಡಿದ್ದರು. ಇದರಲ್ಲಿ ಹೆಚ್ಚಿನವರು ಹಾಲಾಡಿ ಆಪ್ತರು ಎನ್ನಲಾಗಿದೆ. ಇದೇ ಕಾರಣದಿಂದ ಬಿಜೆಪಿ ಪಕ್ಷದ ಮತಗಳು ವಿಭಜನೆಯಾದರೆ ಮುಂದೆ ಕುಂದಾಪುರದಲ್ಲಿ ಕಾಂಗ್ರೆಸ್ ಬಲಿಷ್ಠಗೊಂಡು ಜಯಪ್ರಕಾಶ್ ಹೆಗ್ಡೆ ಅದರ ನಾಯಕತ್ವ ವಹಿಸಿಕೊಳ್ಳುವ ಅಪಾಯ ಇದೆ ಎಂದು ಹಾಲಾಡಿ ಮುಂಜಾಗ್ರತೆ ವಹಿಸಿಕೊಂಡಿರುವ ಸಾಧ್ಯತೆ ಇದೆ.
ಜಯಪ್ರಕಾಶ್ ಹೆಗಡೆ ಮತ್ತು ಹಾಲಾಡಿ ಶ್ರೀನಿವಾಸ್ ಶೆಟ್ಟಿ ಇಬ್ಬರು ಕೂಡ ಹಲವಾರು ವರ್ಷಗಳಿಂದ ಕುಂದಾಪುರದಲ್ಲಿ ಪಾರಂಪರಿಕ ಎದುರಾಳಿಗಳಾಗಿ ಗುರುತಿಸಿಕೊಂಡಿದ್ದಾರೆ.
ಹಾಲಾಡಿ ಅವರ ಈ ಕೊನೆಯ ಕ್ಷಣದ ನಡೆ ಕುಂದಾಪುರದ ಇಡೀ ರಾಜಕೀಯ ಚಿತ್ರಣವನ್ನೇ ಬದಲಾಯಿಸಿದೆ. ಕುಂದಾಪುರದಲ್ಲಿ ಆದರೂ ಲೀಡ್ ಬರಬಹುದು ಎಂದು ಭಾವಿಸಿದ್ದ ಕಾಂಗ್ರೆಸ್ಸಿಗೆ ಹಾಲಾಡಿಯವರ ಈ ಪ್ರಹಾರ ಮರ್ಮಾಘಾತ ಮಾಡಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…