ಮಂಗಳೂರು: ಉಪ ಚುನಾವಣೆಯಲ್ಲಿ ಬಿಜೆಪಿ 12 ಕ್ಷೇತ್ರದಲ್ಲಿ , ಕಾಂಗ್ರೆಸ್ 2 ಕ್ಷೇತ್ರದಲ್ಲಿ ಹಾಗೂ ಪಕ್ಷೇತರ ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿಗಳಿಗೆ ಸಿಕ್ಕ ಭರ್ಜರಿ ಮುನ್ನಡೆಯಿಂದ ಬಿಜೆಪಿ ನೇತೃತ್ವದ ಸರ್ಕಾರದ ಭವಿಷ್ಯ ಭದ್ರವಾಗಿದೆ.
ಉಪಸಮರದ ಫಲಿತಾಂಶದ ಹಿನ್ನಲೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಾಜಿ ಕೇಂದ್ರ ಸಚಿವ , ಕಾಂಗ್ರೆಸ್ ನ ಹಿರಿಯ ಮುಖಂಡ ಜನಾರ್ದನ ಪೂಜಾರಿ, ಬಿಜೆಪಿ ಗೆಲ್ಲುತ್ತದೆ ಕಾಂಗ್ರೆಸ್ ಸಾಯುತ್ತದೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ ಎಂದು ಕಾಂಗ್ರೆಸ್ ಪಕ್ಷದ ಇಂದಿನ ಪರಿಸ್ಥಿತಿ ಕಂಡು ಕಣ್ಣೀರಿಟ್ಟರು.
ಅವರು ಡಿ.09 ರ ಸೋಮವಾರ ಜೆಪ್ಪು ಪ್ರಶಾಂತ ನಿವಾಸ ಆಶ್ರಮದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಯವರ ಹುಟ್ಟು ಹಬ್ಬದ ಕಾರ್ಯಕ್ರಮ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.
” ಕಾಂಗ್ರೆಸ್ ಭವಿಷ್ಯದ ಬಗ್ಗೆ ನಾನು ನನ್ನ ಪಕ್ಷದವರಿಗೆ ಮೊದಲೇ ಹೇಳಿದ್ದೆ, ಅರ್ಥಮಾಡಿಕೊಳ್ಳಿ, ನೀವು ಹೀಗೆ ದುರಹಂಕಾರ ಮಾಡಿಕೊಂಡು ಹೋದರೆ ಬಿಜೆಪಿಯನು ತಡೆಯಲು ಸಾಧ್ಯವಿಲ್ಲ. ನನ್ನ ಪಕ್ಷದವರಲ್ಲಿ ಕೈ ಮುಗಿದು, ಕಣ್ಣೀರು ಸುರಿಸಿ ಹೇಳಿದೆ ಆದರೆ ನಮ್ಮ ಪಾರ್ಟಿಯವರಿಗೆ ಇದ್ಯಾವುದು ಅರ್ಥ ಆಗಲಿಲ್ಲ..ಇಂದು ಫಲಿತಾಂಶದ ಹಿರಬಿದ್ದಿದೆ, ಈ ಬಳಿಕವಾದರೂ ಅರ್ಥ ಆಯಿತಾ ಎಂದು ನಮ್ಮ ಪಕ್ಷದವರನ್ನು ಕೇಳುತ್ತಿದ್ದೇನೆ. ನಾನು ಈ ಭವಿಷ್ಯವನ್ನು ಕೆಲವು ತಿಂಗಳ ಹಿಂದೆ ಹೇಳಿದ್ದೆ, ದುರಹಂಕಾರ ಮಾಡಬೇಡಿ ಸರಿಪಡಿಸಿಕೊಂಡು ಹೋಗಿ, ಇಲ್ಲವಾದ್ರೆ ಬಿಜೆಪಿ ಬರುತ್ತದೆ ಕಾಂಗ್ರೆಸ್ ಸಾಯುತ್ತದೆ ” ಎಂದು ಹೇಳಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…