ಕಲಬುರ್ಗಿ: ನೀವು ಕಾಂಗ್ರೆಸ್ ಗೆ ವೋಟ್ ಹಾಕಲು ಬರದೇ ಇದ್ದರೂ ಪರವಾಗಿಲ್ಲ. ನಾನು ಸತ್ತ ಮೇಲೆ ನನ್ನ ಅಂತ್ಯಸಂಸ್ಕಾರಕ್ಕಾದರೂ ಬನ್ನಿ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರು ಬುಧವಾರ ತಮ್ಮ ತವರು ಜಿಲ್ಲೆ ಕಲಬುರಗಿಯಲ್ಲಿ ಭಾವನಾತ್ಮಕವಾಗಿ ಮಾತನಾಡಿದ್ದಾರೆ.
ಜಿಲ್ಲೆಯ ಅಫಜಲಪುರದಲ್ಲಿ ನಡೆದ ಚುನಾವಣೆ ರ್ಯಾಲಿಯಲ್ಲಿ ಮಾತನಾಡಿದ ಅವರು, ಈ ಬಾರಿ ನಿಮ್ಮ ಮತವನ್ನು ತಪ್ಪಿಸಿಕೊಂಡರೆ (ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕದಿದ್ದರೆ) ನನಗೆ ಇಲ್ಲಿ ಸ್ಥಾನವಿಲ್ಲ ಎಂದು ಭಾವಿಸುತ್ತೇನೆ ಮತ್ತು ನಿಮ್ಮ ಹೃದಯವನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಭಾವಿಸುತ್ತೇನೆ ಎಂದು ಖರ್ಗೆ ಹೇಳಿದ್ದಾರೆ. ಅವರು ಇಲ್ಲಿ 2009 ಮತ್ತು 2014 ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಅವರು 2019 ರಲ್ಲಿ ಸೋತಿದ್ದರು.
ಕಾಂಗ್ರೆಸ್ಸಿಗೆ ಮತ ಹಾಕುತ್ತೀರೋ ಇಲ್ಲವೋ, ಕಲಬುರಗಿಗಾಗಿ ಕೆಲಸ ಮಾಡಿದ್ದೇನೆ ಎಂದು ಭಾವಿಸಿದರೆ, ನನ್ನ ಅಂತ್ಯಸಂಸ್ಕಾರಕ್ಕಾದರೂ ಬನ್ನಿ. ಸತ್ತಾಗ ಸುಟ್ಟರೇ ಮೇಣದ ಬತ್ತಿ ಹಚ್ಚಲು ಬನ್ನಿ, ಹೂಳಿದ್ರೆ ಒಂದು ಹಿಡಿ ಮಣ್ಣು ಹಾಕಲು ಬನ್ನಿ. ಆಗ ಜನರು ನೋಡಪ್ಪ ಆತನ ಅಂತ್ಯಕ್ರಿಯೆಗೆ ಎಷ್ಟು ಜನ ಬಂದರೂ ಅಂತ ಹೇಳಬೇಕು ಎಂದು ಭಾವುಕರಾದ್ದಾರೆ
ʻಬಿಜೆಪಿ ಮತ್ತು ಆರೆಸ್ಸೆಸ್ ಸಿದ್ಧಾಂತವನ್ನು ಸೋಲಿಸಲು ಕೊನೆಯ ಉಸಿರು ಇರುವವರೆಗೂ ರಾಜಕೀಯದಲ್ಲಿ ಮುಂದುವರಿಯುತ್ತೇನೆ. ನಾನು ರಾಜಕೀಯಕ್ಕಾಗಿ ಹುಟ್ಟಿದ್ದೇನೆ. ಚುನಾವಣೆಗೆ ಸ್ಪರ್ಧಿಸಲಿ ಅಥವಾ ಇಲ್ಲದಿರಲಿ, ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ನನ್ನ ಕೊನೆಯ ಉಸಿರು ಇರುವವರೆಗೂ ಶ್ರಮಿಸುತ್ತೇನೆ. ರಾಜಕೀಯದಿಂದ ನಿವೃತ್ತಿಯಾಗುವುದಿಲ್ಲ,ʼ ಎಂದು ಖರ್ಗೆ ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…