ರಾಜ್ಯ ನ್ಯೂಸ್

ಕಾಂಗ್ರೆಸ್ ಗೆ ವೋಟ್ ಹಾಕಲು ಬರದೇ ಇದ್ದರೂ ಪರವಾಗಿಲ್ಲ, ಸತ್ತ ಮೇಲೆ ನನ್ನ ಅಂತ್ಯ ಸಂಸ್ಕಾರಕ್ಕಾದರೂ ಬನ್ನಿ : ತವರು ಜಿಲ್ಲೆಯಲ್ಲಿ ಮಲ್ಲಿಕಾರ್ಜನ ಖರ್ಗೆ ಭಾವುಕ ಮಾತು – Vishwanews24

ಕಾಂಗ್ರೆಸ್ ಗೆ ವೋಟ್ ಹಾಕಲು ಬರದೇ ಇದ್ದರೂ ಪರವಾಗಿಲ್ಲ,  ನಾನು ಸತ್ತ ಮೇಲೆ ನನ್ನ ಅಂತ್ಯ ಸಂಸ್ಕಾರಕ್ಕಾದರೂ ಬನ್ನಿ : ತವರು ಜಿಲ್ಲೆಯಲ್ಲಿ ಮಲ್ಲಿಕಾರ್ಜನ ಖರ್ಗೆ ಭಾವುಕ ಮಾತು

ಕಲಬುರ್ಗಿ: ನೀವು ಕಾಂಗ್ರೆಸ್ ಗೆ ವೋಟ್ ಹಾಕಲು ಬರದೇ ಇದ್ದರೂ ಪರವಾಗಿಲ್ಲ. ನಾನು ಸತ್ತ ಮೇಲೆ ನನ್ನ ಅಂತ್ಯಸಂಸ್ಕಾರಕ್ಕಾದರೂ ಬನ್ನಿ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರು ಬುಧವಾರ ತಮ್ಮ ತವರು ಜಿಲ್ಲೆ ಕಲಬುರಗಿಯಲ್ಲಿ ಭಾವನಾತ್ಮಕವಾಗಿ ಮಾತನಾಡಿದ್ದಾರೆ.

ಜಿಲ್ಲೆಯ ಅಫಜಲಪುರದಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಈ ಬಾರಿ ನಿಮ್ಮ ಮತವನ್ನು ತಪ್ಪಿಸಿಕೊಂಡರೆ (ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕದಿದ್ದರೆ) ನನಗೆ ಇಲ್ಲಿ ಸ್ಥಾನವಿಲ್ಲ ಎಂದು ಭಾವಿಸುತ್ತೇನೆ ಮತ್ತು ನಿಮ್ಮ ಹೃದಯವನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಭಾವಿಸುತ್ತೇನೆ ಎಂದು ಖರ್ಗೆ ಹೇಳಿದ್ದಾರೆ. ಅವರು ಇಲ್ಲಿ 2009 ಮತ್ತು 2014 ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಅವರು 2019 ರಲ್ಲಿ ಸೋತಿದ್ದರು.

ಕಾಂಗ್ರೆಸ್ಸಿಗೆ ಮತ ಹಾಕುತ್ತೀರೋ ಇಲ್ಲವೋ, ಕಲಬುರಗಿಗಾಗಿ ಕೆಲಸ ಮಾಡಿದ್ದೇನೆ ಎಂದು ಭಾವಿಸಿದರೆ, ನನ್ನ ಅಂತ್ಯಸಂಸ್ಕಾರಕ್ಕಾದರೂ ಬನ್ನಿ. ಸತ್ತಾಗ ಸುಟ್ಟರೇ ಮೇಣದ ಬತ್ತಿ ಹಚ್ಚಲು ಬನ್ನಿ, ಹೂಳಿದ್ರೆ ಒಂದು ಹಿಡಿ ಮಣ್ಣು ಹಾಕಲು ಬನ್ನಿ. ಆಗ ಜನರು ನೋಡಪ್ಪ ಆತನ ಅಂತ್ಯಕ್ರಿಯೆಗೆ ಎಷ್ಟು ಜನ ಬಂದರೂ ಅಂತ ಹೇಳಬೇಕು ಎಂದು ಭಾವುಕರಾದ್ದಾರೆ

ʻಬಿಜೆಪಿ ಮತ್ತು ಆರೆಸ್ಸೆಸ್ ಸಿದ್ಧಾಂತವನ್ನು ಸೋಲಿಸಲು ಕೊನೆಯ ಉಸಿರು ಇರುವವರೆಗೂ ರಾಜಕೀಯದಲ್ಲಿ ಮುಂದುವರಿಯುತ್ತೇನೆ. ನಾನು ರಾಜಕೀಯಕ್ಕಾಗಿ ಹುಟ್ಟಿದ್ದೇನೆ. ಚುನಾವಣೆಗೆ ಸ್ಪರ್ಧಿಸಲಿ ಅಥವಾ ಇಲ್ಲದಿರಲಿ, ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ನನ್ನ ಕೊನೆಯ ಉಸಿರು ಇರುವವರೆಗೂ ಶ್ರಮಿಸುತ್ತೇನೆ. ರಾಜಕೀಯದಿಂದ ನಿವೃತ್ತಿಯಾಗುವುದಿಲ್ಲ,ʼ ಎಂದು ಖರ್ಗೆ ಹೇಳಿದ್ದಾರೆ.

 

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

7 minutes ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

20 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

20 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

21 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

21 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

21 hours ago