ಬೆಂಗಳೂರು: “ಕಾಂಗ್ರೆಸ್ ಗ್ಯಾರಂಟಿಗಳನ್ನು ಮುಟ್ಟುವುದು ಬಿಜೆಪಿ- ಜೆಡಿಎಸ್ ಹಣೆಯಲ್ಲಿ ಬರೆದಿಲ್ಲ. ಇದಕ್ಕೆ ಕಾಂಗ್ರೆಸ್ ಅವಕಾಶ ಕೊಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಬಿಜೆಪಿ ಸಂಸದ ಕರಡಿ ಸಂಗಣ್ಣ ಮತ್ತಿತರರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಕೇಂದ್ರದಲ್ಲಿ ಎನ್ ಡಿಎ ಅಧಿಕಾರಕ್ಕೆ ಬಂದರೆ ಗ್ಯಾರಂಟಿಗಳನ್ನು ತೆಗೆದುಹಾಕುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಆದರೆ ಯಡಿಯೂರಪ್ಪ, ಕುಮಾರಸ್ವಾಮಿ, ಅಶೋಕ್ ಅವರಿಗೆ ಗ್ಯಾರಂಟಿಗಳನ್ನು ಮುಟ್ಟಲು ರಾಜ್ಯದ ಜನ ಅವಕಾಶ ನೀಡುವುದಿಲ್ಲ” ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದ ಮೇಲಿನ ಜನರ ಪ್ರೀತಿ ಕಂಡು ಅವರಿಗೆ ಅಸೂಯೆ ಆಗಿದೆ. ಆದ್ದರಿಂದ ನಮ್ಮ ತಾಯಂದಿರ ಬಗ್ಗೆ ಮಾತನಾಡುತ್ತಿದ್ದಾರೆ. ತಾಯಂದಿರು ದಾರಿ ತಪ್ಪಿದ್ದಾರೆ ಎಂದು ಹೇಳಿಕೆ ನೀಡಿರುವ ಅವರಿಗೆ ರಾಜ್ಯದ ಜನರೇ ಉತ್ತರ ನೀಡಲಿದ್ದಾರೆ ಎಂದರು.
ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಹಾಗೂ ಗ್ಯಾರಂಟಿಗಳ ಅಲೆಯಿದೆ. ಇಡೀ ದೇಶವೇ ಕರ್ನಾಟಕದ ಕಡೆಗೆ ತಿರುಗಿ ನೋಡುತ್ತಿದೆ. ಮಂಗಳವಾರ ಕೇರಳ ರಾಜ್ಯ ಪ್ರವಾಸಕ್ಕೆ ಹೋಗಿದ್ದೆ, ಅಲ್ಲಿಯೂ ಸಹ ಕಾಂಗ್ರೆಸ್ 20 ಸ್ಥಾನಗಳನ್ನು ಗೆಲ್ಲಲಿದೆ. ಇಡೀ ದೇಶದಲ್ಲಿ 100 ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಎನ್ಡಿಎ ಬದಲಾಯಿಸಿದೆ. ರಾಜ್ಯದಲ್ಲಿ 14 ಸ್ಥಾನಗಳನ್ನು ಬದಲಾಯಿಸಿದೆ. ಯಾವುದೇ ಕಾರಣಕ್ಕೂ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಇಂಡಿಯಾ ಒಕ್ಕೂಟ ಗೆದ್ದೇ, ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…