ರಾಜ್ಯ ನ್ಯೂಸ್

ಕಾಂಗ್ರೆಸ್-ಜೆಡಿಎಸ್ ಆರಂಭದಲ್ಲೇ ಹಗ್ಗಜಗ್ಗಾಟ..!

ಈಗಷ್ಟೇ ಜೊತೆಯಲ್ಲಿ ಹೆಜ್ಜೆ ಹಾಕುತ್ತಿರುವ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ  ಅವಧಿಯಲ್ಲಿರುವಾಗಲೇ ಮಿತ್ರಕೂಟದಲ್ಲಿ ಅಪಸ್ವರದ ರಾಗ ಪ್ರತಿಧ್ವನಿಸಲಾರಂಭಿಸಿದೆ. ಸರ್ಕಾರದ ವಿಚಾರದಲ್ಲಿ ತಮ್ಮದೇ ಮೇಲುಗೈ ಆಗಬೇಕೆಂಬ ಪ್ರಯತ್ನ ತೆರೆಮರೆಯಲ್ಲಿ ಸದ್ದಿಲ್ಲದೆ ಆರಂಭವಾಗಿದೆ. ಸಚಿವ ಸ್ಥಾನಗಳ ಹಂಚಿಕೆಯಲ್ಲಿ ಈಗಾಗಲೇ ಹಿಡಿತ ಸಾಧಿಸಿರುವ ಕಾಂಗ್ರೆಸ್ ಮುಂದೆಯೂ ಇದೇ ರೀತಿ ಇರಬೇಕೆಂಬ ಉದ್ದೇಶದಿಂದ ಆಂತರಿಕವಾಗಿ ನಡೆಸಿರುವ ಚರ್ಚೆ ಜೆಡಿಎಸ್​ಗೆ ತಲೆನೋವು ತರಿಸಿದೆ.

ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಟ್ಟಿರುವುದರಿಂದ ತನ್ನದೇ ಮರ್ಜಿಯಲ್ಲಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಇರಬೇಕೆಂಬುದು ಕಾಂಗ್ರೆಸ್ ಮುಖಂಡರ ನಿರೀಕ್ಷೆ. ಮೇಲ್ನೋಟಕ್ಕೆ ಹೊಂದಾಣಿಕೆ ಏರ್ಪಟ್ಟಂತೆ ಕಂಡರೂ ಆಂತರಿಕವಾಗಿ ಇಂತಹ ಅಭಿಪ್ರಾಯಗಳು ಜೀವ ಪಡೆದುಕೊಳ್ಳುತ್ತಿವೆ. ಸರ್ಕಾರದಲ್ಲಿ ಮಂತ್ರಿ ಸ್ಥಾನ ಹೊರತುಪಡಿಸಿಯೂ ಉಳಿದ ರಾಜಕೀಯ ಹುದ್ದೆಗಳಲ್ಲಿ ಸಿಂಹಪಾಲು ಪಡೆಯಬೇಕೆಂಬ ಕಾಂಗ್ರೆಸ್​ನ ಬಯಕೆಯನ್ನು ಜೆಡಿಎಸ್ ಹೇಗೆ ಸ್ವೀಕರಿಸಲಿದೆ ಎಂದು ಅದೇ ಪಕ್ಷದ ಮುಖಂಡರು ಆತಂಕದಿಂದಲೇ ಎದುರು ನೋಡುತ್ತಿದ್ದಾರೆ.

ಯಾವ ಯಾವ ಸ್ಥಾನಕ್ಕೆ ಹಗ್ಗಜಗ್ಗಾಟ?: ಸಚಿವರ ಆಯ್ಕೆಯನ್ನು ಜಾತಿ ಹಾಗೂ ಪ್ರದೇಶವಾರು ಮಾಡಿದರು ಸಹ ಖಾತೆಗಳ ವಿಚಾರದಲ್ಲಿ ದೊಡ್ಡ ಸಮಸ್ಯೆ ಎದುರಾಗಲಿದೆ. ಹನ್ನೆರಡು ವರ್ಷಗಳ ನಂತರ ಅಧಿಕಾರ ಪಡೆದಿರುವ ಜೆಡಿಎಸ್ ಕೆಲವು ಪ್ರಮುಖ ಖಾತೆಗಳಿಗೆ ಕೋರಿಕೆ ಇಡಲು ನಿರ್ಧರಿಸಿದೆ. ಈಗಾಗಲೇ ಸ್ಪೀಕರ್ ಸ್ಥಾನ ಪಡೆದಿರುವ ಕಾಂಗ್ರೆಸ್ ವಿಧಾನ ಪರಿಷತ್​ನಲ್ಲಿಯೂ ಸಭಾನಾಯಕ ಹಾಗೂ ಸಭಾಪತಿ ಸ್ಥಾನಗಳಿಗೆ ಕಣ್ಣಿಟ್ಟಿದೆ. ಸಭಾನಾಯಕ ಸ್ಥಾನಕ್ಕೆ ಎಸ್.ಆರ್. ಪಾಟೀಲ್ ಅಥವಾ ಎಚ್.ಎಂ. ರೇವಣ್ಣ ಅವರಲ್ಲಿ ಒಬ್ಬರನ್ನು ತರುವುದು ಹಾಗೂ ಸಭಾಪತಿ ಸ್ಥಾನಕ್ಕೆ ಉಗ್ರಪ್ಪ ಅವರನ್ನು ತರುವುದು ಕಾಂಗ್ರೆಸ್​ನ ಉದ್ದೇಶವಾಗಿದೆ.

ಸಭಾನಾಯಕನ ಸ್ಥಾನ ಕೊಟ್ಟರೆ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರನ್ನು ಆಯ್ಕೆ ಮಾಡಬೇಕು ಎಂಬುದು ಜೆಡಿಎಸ್​ನ ಚಿಂತನೆಯಾಗಿದೆ. ನಿಗಮ ಮತ್ತು ಮಂಡಳಿಗಳು ಹಾಗೂ ಆಯೋಗಗಳಲ್ಲಿ ಉತ್ತಮವಾಗಿರುವವನ್ನು ಪಡೆಯುವ ಬಗ್ಗೆಯೂ ಕಾಂಗ್ರೆಸ್ ಈಗಾಗಲೇ ಪಟ್ಟಿ ಮಾಡಿಕೊಂಡಿದೆ. ಯಾವುದೇ ಪ್ರಮುಖ ಹುದ್ದೆಗಳನ್ನು ಜೆಡಿಎಸ್​ಗೆ ಬಿಟ್ಟುಕೊಡದೇ ತನ್ನ ಬಳಿಯೇ ಇರುವಂತೆ ನೋಡಿಕೊಳ್ಳಬೇಕು ಎಂಬ ಬಗ್ಗೆ ಪಕ್ಷದಲ್ಲಿ ಚರ್ಚೆ ನಡೆದಿದೆ ಎಂದು ಕಾಂಗ್ರೆಸ್ ಉನ್ನತ ಮೂಲಗಳು ಖಚಿತಪಡಿಸಿವೆ.

ಡಿಕೆಶಿ ಸೇರಿದಂತೆ ಮೂವರಿಗೆ ವಿರೋಧ : ಸರ್ಕಾರ ರಚನೆ ಬಗ್ಗೆ ಕಾಂಗ್ರೆಸ್​ನಿಂದಲೇ ಮೊದಲು ಪ್ರಸ್ತಾವನೆ ಬಂದಿದ್ದರಿಂದ ಒಪ್ಪಿಕೊಂಡಿದ್ದ ದೇವೆಗೌಡರು ಇದೀಗ ಸರ್ಕಾರದಲ್ಲಿ ಕೆಲವು ಹಿರಿಯರಿಗೆ ಅವಕಾಶ ಬೇಡವೆಂಬ ಸಂದೇಶ ರವಾನಿಸಿದ್ದಾರೆ ಎಂಬುದು ಕಾಂಗ್ರೆಸ್​ನಲ್ಲಿ ಚರ್ಚೆಯ ವಸ್ತುವಾಗಿದೆ. ಈ ಬಗ್ಗೆ ಜೆಡಿಎಸ್ ಮುಖಂಡರು ಸ್ಪಷ್ಟನೆ ನೀಡಿದ್ದರೂ ಅದನ್ನು ನಂಬುವ ಸ್ಥಿತಿಯಲ್ಲಿ ಕಾಂಗ್ರೆಸ್​ನ ನಾಯಕರಿಲ್ಲ. ಸರ್ಕಾರ ರಚನೆಯ ವಿಚಾರದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಡಿ.ಕೆ. ಶಿವಕುಮಾರ್, ಮಾಜಿ ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆ ಹಾಗೂ ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಹೋರಾಟ ಮಾಡಿದ್ದ ಎಂ.ಬಿ. ಪಾಟೀಲ್ ಬಗ್ಗೆ ಅಪಸ್ವರ ಕೇಳಿ ಬಂದಿವೆ ಎಂಬ ಸುದ್ದಿ ಕಾಂಗ್ರೆಸ್ ಪಾಳಯಕ್ಕೆ ತಲುಪಿದೆ. ಅದಕ್ಕೆ ಕಾಂಗ್ರೆಸ್ ಮುಖಂಡರು ತಮ್ಮ ಪಕ್ಷದ ನಿರ್ಧಾರ ತಮ್ಮದು ಎಂಬ ವಾದವನ್ನು ಮಂಡಿಸುತ್ತಿದ್ದಾರೆ.

ಅಧಿಕಾರ ಹಂಚಿಕೆ ಇನ್ನೂ ಸಸ್ಪೆನ್ಸ್! : ತಾನೇ ಪೂರ್ಣ ಅವಧಿಗೆ ಮುಖ್ಯಮಂತ್ರಿಯಾಗಿರುವುದಾಗಿ ಕುಮಾರಸ್ವಾಮಿ ಹೇಳುತ್ತಿದ್ದಾರೆ. ಆದರೆ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಆ ಬಗ್ಗೆ ಚರ್ಚೆಯೇ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದ್ದರಿಂದಲೇ ಇದು 30:30ರ ಸರ್ಕಾರ ಆಗಬಹುದೆಂಬ ಮಾತು ಎರಡು ಪಕ್ಷದಲ್ಲಿಯೂ ಕೇಳಿ ಬರುತ್ತಿದೆ. ಸಮನ್ವಯ ಸಮಿತಿ ರಚನೆ ಮಾಡಿಕೊಂಡು ಹಂತಹಂತವಾಗಿ ಜೆಡಿಎಸ್ ಮೇಲೆ ಸವಾರಿ ಮಾಡುವ ಉದ್ದೇಶವನ್ನು ಕಾಂಗ್ರೆಸ್ ಹೊಂದಿದೆ. ಆದರೆ ಈಗಾಗಲೇ ಕಾಂಗ್ರೆಸ್​ನಿಂದ ಪಾಠ ಕಲಿತಿರುವ ದೇವೇಗೌಡರು ತಮ್ಮ ಪುತ್ರನ ಮೂಲಕ ಹೇಗೆ ಪರಿಸ್ಥಿತಿ ನಿಭಾಯಿಸಲಿದ್ದಾರೆ ಎಂಬುದು ರಾಜಕೀಯ ವಲಯದ ಕುತೂಹಲವೂ ಆಗಿದೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

1 day ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

1 day ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

1 day ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

1 day ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

1 day ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

1 day ago