ರಾಜ್ಯ ನ್ಯೂಸ್

ಕಾಂಗ್ರೆಸ್-ಜೆಡಿಎಸ್ ಕಳ್ಳರ ಪಕ್ಷ, ದರಿದ್ರ ಪಾರ್ಟಿ: ಡಿ.ವಿ.ಸದಾನಂದ ಗೌಡ

ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಕಳ್ಳರ ಪಕ್ಷಗಳಾಗಿದ್ದು, ಇವುಗಳು ದರಿದ್ರ ಪಕ್ಷಗಳಾಗಿವೆ ಎಂದು ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಖಾತೆಯ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಸ್ವಚ್ಛ ಭಾರತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು, ಡಾ.ರಾಜ್‍ಕುಮಾರ್ ಸಮಾಧಿ ಪಕ್ಕದ ಸರ್ವೀಸ್ ರಸ್ತೆಯಲ್ಲಿ ಖುದ್ದು ಪೌರಕಾರ್ಮಿಕರ ಜೊತೆಗೂಡಿ ಕಸಗುಡಿಸಿದರು


ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯು ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಹೋಗಿಲ್ಲ. ಅವರ ಆಂತರಿಕ ಕಚ್ಚಾಟದಿಂದಲೇ ಅವರಿಗೆ ಅಂತಹ ಪರಿಸ್ಥಿತಿ ಎದುರಾಗಿದೆ. ಶಾಸಕರಾದ ಶಿವರಾಮ್ ಹೆಬ್ಬಾರ್‍ರವರನ್ನು ಕೈಕಾಲು ಕಟ್ಟಿ ಕಿಡ್ನಾಪ್ ಮಾಡಿ ನಾವೇನು ಪಕ್ಷಕ್ಕೆ ಎಳೆದು ತಂದಿಲ್ಲ. ಕಾಂಗ್ರೆಸ್ ಹಾಗೂ ಜೆಡಿಎಸ್ ದರಿದ್ರ ಪಕ್ಷಗಳು ಹಾಗೂ ಕಳ್ಳರ ಪಾರ್ಟಿಗಳು ಎಂದು ತಿಳಿದು ಅವರೇ ಹೊರ ಬಂದಿರಬಹುದು ಎಂದು ವ್ಯಂಗ್ಯವಾಡಿದರು,

ಯಾವುದೇ ಶಾಸಕರು ಬಿಜೆಪಿ ಬಂದರೆ ನಾವು ಅವರನ್ನು ಸ್ವಾಗತಿಸುತ್ತೇವೆಯೋ ಹೊರತು, ಆಪರೇಷನ್ ಕಮಲ ಮಾಡುತ್ತಿಲ್ಲ. ನಮ್ಮದು ಏನೇ ಇದ್ದರೂ ಆಪರೇಷನ್ ಸ್ವಚ್ಛ್ ಭಾರತ್ ಅಷ್ಟೇ. ಅವರ ಸರ್ಕಾರ ಬಿದ್ದರೆ ಅತಿ ದೊಡ್ಡ ಪಕ್ಷವಾಗಿರುವ ನಾವು ಸರ್ಕಾರ ರಚಿಸುವುದು ಖಚಿತ. ನಾವು ಆಪರೇಷನ್ ಕಮಲ ಮಾಡುತ್ತಿದ್ದೇವೆ ಎಂದು ಆರೋಪ ಮಾಡುತ್ತಿರುವ ಅವರು ಸುಮ್ಮನೆ ಕುಳಿತಿಲ್ಲ. ನಮ್ಮ ಬಿಜೆಪಿ ಶಾಸಕರಿಗೂ ಸಹ ಆಮೀಷವೊಡ್ಡುತ್ತಿದ್ದಾರೆ. ಕಾಂಗ್ರೆಸ್ ಆಮೀಷವೊಡ್ಡಿರುವ ಶಾಸಕರನ್ನು ನಾನು ಕರೆದುಕೊಂಡು ಬಂದು ನಿಲ್ಲಿಸುತ್ತೇನೆ ಎಂದು ಹೇಳಿದರು.

ಕಾಂಗ್ರೆಸ್ ಹಾಗೂ ಜೆಡಿಎಸ್‍ನವರು ಏಕೆ ಬಿಜೆಪಿ ಶಾಸಕರ ಹಿಂದೆ ಬೀಳಬೇಕು? ಅವರಿಗೇನಾದರೂ ಭಯ ಇದೆಯೇ? ಕಳ್ಳನ ಮನಸ್ಸು ಹುಳ್ಳ ಹುಳ್ಳಗೆ ಅನ್ನುವ ರೀತಿ ದೊಡ್ಡ ದೊಡ್ಡ ಕಳ್ಳರು ಬೇರೆಯವರನ್ನು ಕಳ್ಳ ಅಂತಾ ತೋರಿಸ್ತಾ ಇದ್ದಾರೆ ಎಂದು ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.


ಜಾಹಿರಾತು: ಪಂಡೀತ್ ಸುದರ್ಶನ್ ಭಟ್ 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

6 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

7 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

7 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

8 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

8 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

8 hours ago