ಉಡುಪಿ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪ್ರತಾಪಚಂದ್ರ ಶೆಟ್ಟರಿಗೆ ಒಲಿಯುವುದೆ ಸಚಿವ ಸ್ಥಾನ?

ಉಡುಪಿ: ಬಿ.ಎಸ್‌. ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ ಮೂರೇ ದಿನಗಳಲ್ಲಿ ರಾಜೀನಾಮೆ ಕೊಟ್ಟಿದ್ದು, ಮುಂದಿನ ಅವಕಾಶ ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿಕೂಟಕ್ಕೆ ಸಿಕ್ಕಿದೆ. ಬಿಜೆಪಿ ಸರಕಾರ ರಚನೆಯಾಗಿದ್ದರೆ ಜಿಲ್ಲೆಯ ಐವರು ಶಾಸಕರಲ್ಲಿ ಒಬ್ಬರಲ್ಲ ಒಬ್ಬರಿಗೆ ಸಚಿವ ಪದವಿ ಸಿಗುವ ಖಾತ್ರಿ ಇತ್ತು. ಆದರೆ ಈಗ ಕಾಂಗ್ರೆಸ್‌- ಜೆಡಿಎಸ್‌ ಸರಕಾರ ರಚಿಸಿವೆ, ಈ ಪಕ್ಷಗಳಿಂದ ಜಿಲ್ಲೆಯಲ್ಲಿ ಒಬ್ಬನೇ ಒಬ್ಬ ವಿಧಾನಸಭಾ ಸದಸ್ಯನಿಲ್ಲ. ಹೀಗಾಗಿ ಉಡುಪಿ ಜಿಲ್ಲೆಗೆ ಉಸ್ತುವಾರಿ ಸಚಿವರು ಯಾರಾಗುವರು ಎಂಬ ಕುತೂಹಲ ಉಂಟಾಗಿದೆ.

ಈಗಿರುವ ಸಾಧ್ಯತೆ ಪ್ರಕಾರ ವಿಧಾನ ಪರಿಷತ್‌ ಸದಸ್ಯ ಕುಂದಾಪುರದ ಪ್ರತಾಪಚಂದ್ರ ಶೆಟ್ಟಿಯವರಿಗೆ ಅವಕಾಶಗಳು ಹೆಚ್ಚಿವೆ. ಮೈತ್ರಿಕೂಟ ಸರಕಾರವಿರುವಾಗ ಸಾಮಾನ್ಯವಾಗಿ ಜಿಲ್ಲೆಗಳನ್ನು ಉಭಯ ಪಕ್ಷಗಳು ಹಂಚಿಕೊಳ್ಳುತ್ತವೆ. ಹೀಗಾಗಿ ದ.ಕ., ಉಡುಪಿ ಜಿಲ್ಲೆ ಎರಡೂ ಜಿಲ್ಲೆಯನ್ನು ಕಾಂಗ್ರೆಸ್‌ ವಹಿಸಿಕೊಳ್ಳಬಹುದು ಅಥವಾ ಒಂದು ಜಿಲ್ಲೆಯನ್ನು ಕಾಂಗ್ರೆಸ್‌ ಮತ್ತು ಇನ್ನೊಂದು ಜಿಲ್ಲೆಯನ್ನು ಜೆಡಿಎಸ್‌ ಹಂಚಿಕೊಳ್ಳಬಹುದು.

ಯಾರು ಉಸ್ತುವಾರಿ ಸಚಿವರು?
ಇದುವರೆಗೆ ಉಡುಪಿ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರಾಗಿದ್ದ ಒಂಬತ್ತು ಮಂದಿ ಶಾಸಕರಲ್ಲಿ ಕೆ. ಜಯಪ್ರಕಾಶ್‌ ಹೆಗ್ಡೆ -ಜನತಾದಳ, ಡಿ.ಟಿ. ಜಯಕುಮಾರ್‌ -ಜೆಡಿಎಸ್‌, ಡಾ| ವಿ.ಎಸ್‌. ಆಚಾರ್ಯ, ಕೋಟ ಶ್ರೀನಿವಾಸ ಪೂಜಾರಿ ಬಿಜೆಪಿಯವರಾದರೆ ಉಳಿದವರೆಲ್ಲರೂ ಕಾಂಗ್ರೆಸ್‌ ಸರಕಾರದಲ್ಲಿ ಸಚಿವರಾಗಿದ್ದರು. ಡಿ.ಟಿ. ಜಯಕುಮಾರ್‌ ಅವರು ಎಚ್‌.ಡಿ. ಕುಮಾರಸ್ವಾಮಿ- ಯಡಿಯೂರಪ್ಪ ಸರಕಾರವಿರುವಾಗ ಉಸ್ತುವಾರಿ ಸಚಿವರಾಗಿದ್ದರು. ಈಗ ಮತ್ತೆ ಅಂತಹ ಕಾಲ ಕೂಡಿ ಬರುತ್ತಿದೆ.

ಉಡುಪಿ ಜಿಲ್ಲೆ ಜೆಡಿಎಸ್‌ ಪಾಲಿಗಾದರೆ ಹೊರಗಿನ ಸಚಿವರು ಇಲ್ಲಿಗೆ ಉಸ್ತುವಾರಿಯಾಗಿ ಬರಲಿದ್ದಾರೆ. ವಿಧಾನ ಪರಿಷತ್‌ ಸದಸ್ಯರಾಗಿ ಸಚಿವರಾಗಬಲ್ಲ ವರ್ಚಸ್ಸು ಹೊಂದಿದ ಸ್ಥಳೀಯ ಜೆಡಿಎಸ್‌ ನಾಯಕರು ಇಲ್ಲವಾದ ಕಾರಣ ಹೊರಗಿನ ಜಿಲ್ಲೆಯವರು ಉಸ್ತುವಾರಿಯಾಗುವುದು ಅನಿವಾರ್ಯ. ಇಂತಹ ಸಂದಿಗ್ಧ ಸಂದರ್ಭದಲ್ಲಿ ಪ್ರತಾಪಚಂದ್ರ ಶೆಟ್ಟಿಯವರಿಗೆ ಅವಕಾಶ ಕೂಡಿ ಬಂದೀತು. ಸುದೀರ್ಘ‌ ಕಾಲ ವಿಧಾನಸಭಾ ಸದಸ್ಯರಾಗಿ, ವಿಧಾನ ಪರಿಷತ್‌ ಸದಸ್ಯರಾಗಿ ಆಡಳಿತಾತ್ಮಕ ಸೂಕ್ಷ್ಮ ವಿಷಯಗಳು ತಿಳಿದಿದ್ದರೂ ಪ್ರತಾಪಚಂದ್ರ ಶೆಟ್ಟಿಯವರಿಗೆ ಸಚಿವರಾಗುವ ಯೋಗ ಬಂದಿರಲಿಲ್ಲ. ಈಗದು ಬರುವ ಲಕ್ಷಣಗಳಿವೆ.

 

 

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

13 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

14 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

14 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

15 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

15 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

16 hours ago