ಉಡುಪಿ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪ್ರತಾಪಚಂದ್ರ ಶೆಟ್ಟರಿಗೆ ಒಲಿಯುವುದೆ ಸಚಿವ ಸ್ಥಾನ?

ಉಡುಪಿ: ಬಿ.ಎಸ್‌. ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ ಮೂರೇ ದಿನಗಳಲ್ಲಿ ರಾಜೀನಾಮೆ ಕೊಟ್ಟಿದ್ದು, ಮುಂದಿನ ಅವಕಾಶ ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿಕೂಟಕ್ಕೆ ಸಿಕ್ಕಿದೆ. ಬಿಜೆಪಿ ಸರಕಾರ ರಚನೆಯಾಗಿದ್ದರೆ ಜಿಲ್ಲೆಯ ಐವರು ಶಾಸಕರಲ್ಲಿ ಒಬ್ಬರಲ್ಲ ಒಬ್ಬರಿಗೆ ಸಚಿವ ಪದವಿ ಸಿಗುವ ಖಾತ್ರಿ ಇತ್ತು. ಆದರೆ ಈಗ ಕಾಂಗ್ರೆಸ್‌- ಜೆಡಿಎಸ್‌ ಸರಕಾರ ರಚಿಸಿವೆ, ಈ ಪಕ್ಷಗಳಿಂದ ಜಿಲ್ಲೆಯಲ್ಲಿ ಒಬ್ಬನೇ ಒಬ್ಬ ವಿಧಾನಸಭಾ ಸದಸ್ಯನಿಲ್ಲ. ಹೀಗಾಗಿ ಉಡುಪಿ ಜಿಲ್ಲೆಗೆ ಉಸ್ತುವಾರಿ ಸಚಿವರು ಯಾರಾಗುವರು ಎಂಬ ಕುತೂಹಲ ಉಂಟಾಗಿದೆ.

ಈಗಿರುವ ಸಾಧ್ಯತೆ ಪ್ರಕಾರ ವಿಧಾನ ಪರಿಷತ್‌ ಸದಸ್ಯ ಕುಂದಾಪುರದ ಪ್ರತಾಪಚಂದ್ರ ಶೆಟ್ಟಿಯವರಿಗೆ ಅವಕಾಶಗಳು ಹೆಚ್ಚಿವೆ. ಮೈತ್ರಿಕೂಟ ಸರಕಾರವಿರುವಾಗ ಸಾಮಾನ್ಯವಾಗಿ ಜಿಲ್ಲೆಗಳನ್ನು ಉಭಯ ಪಕ್ಷಗಳು ಹಂಚಿಕೊಳ್ಳುತ್ತವೆ. ಹೀಗಾಗಿ ದ.ಕ., ಉಡುಪಿ ಜಿಲ್ಲೆ ಎರಡೂ ಜಿಲ್ಲೆಯನ್ನು ಕಾಂಗ್ರೆಸ್‌ ವಹಿಸಿಕೊಳ್ಳಬಹುದು ಅಥವಾ ಒಂದು ಜಿಲ್ಲೆಯನ್ನು ಕಾಂಗ್ರೆಸ್‌ ಮತ್ತು ಇನ್ನೊಂದು ಜಿಲ್ಲೆಯನ್ನು ಜೆಡಿಎಸ್‌ ಹಂಚಿಕೊಳ್ಳಬಹುದು.

ಯಾರು ಉಸ್ತುವಾರಿ ಸಚಿವರು?
ಇದುವರೆಗೆ ಉಡುಪಿ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರಾಗಿದ್ದ ಒಂಬತ್ತು ಮಂದಿ ಶಾಸಕರಲ್ಲಿ ಕೆ. ಜಯಪ್ರಕಾಶ್‌ ಹೆಗ್ಡೆ -ಜನತಾದಳ, ಡಿ.ಟಿ. ಜಯಕುಮಾರ್‌ -ಜೆಡಿಎಸ್‌, ಡಾ| ವಿ.ಎಸ್‌. ಆಚಾರ್ಯ, ಕೋಟ ಶ್ರೀನಿವಾಸ ಪೂಜಾರಿ ಬಿಜೆಪಿಯವರಾದರೆ ಉಳಿದವರೆಲ್ಲರೂ ಕಾಂಗ್ರೆಸ್‌ ಸರಕಾರದಲ್ಲಿ ಸಚಿವರಾಗಿದ್ದರು. ಡಿ.ಟಿ. ಜಯಕುಮಾರ್‌ ಅವರು ಎಚ್‌.ಡಿ. ಕುಮಾರಸ್ವಾಮಿ- ಯಡಿಯೂರಪ್ಪ ಸರಕಾರವಿರುವಾಗ ಉಸ್ತುವಾರಿ ಸಚಿವರಾಗಿದ್ದರು. ಈಗ ಮತ್ತೆ ಅಂತಹ ಕಾಲ ಕೂಡಿ ಬರುತ್ತಿದೆ.

ಉಡುಪಿ ಜಿಲ್ಲೆ ಜೆಡಿಎಸ್‌ ಪಾಲಿಗಾದರೆ ಹೊರಗಿನ ಸಚಿವರು ಇಲ್ಲಿಗೆ ಉಸ್ತುವಾರಿಯಾಗಿ ಬರಲಿದ್ದಾರೆ. ವಿಧಾನ ಪರಿಷತ್‌ ಸದಸ್ಯರಾಗಿ ಸಚಿವರಾಗಬಲ್ಲ ವರ್ಚಸ್ಸು ಹೊಂದಿದ ಸ್ಥಳೀಯ ಜೆಡಿಎಸ್‌ ನಾಯಕರು ಇಲ್ಲವಾದ ಕಾರಣ ಹೊರಗಿನ ಜಿಲ್ಲೆಯವರು ಉಸ್ತುವಾರಿಯಾಗುವುದು ಅನಿವಾರ್ಯ. ಇಂತಹ ಸಂದಿಗ್ಧ ಸಂದರ್ಭದಲ್ಲಿ ಪ್ರತಾಪಚಂದ್ರ ಶೆಟ್ಟಿಯವರಿಗೆ ಅವಕಾಶ ಕೂಡಿ ಬಂದೀತು. ಸುದೀರ್ಘ‌ ಕಾಲ ವಿಧಾನಸಭಾ ಸದಸ್ಯರಾಗಿ, ವಿಧಾನ ಪರಿಷತ್‌ ಸದಸ್ಯರಾಗಿ ಆಡಳಿತಾತ್ಮಕ ಸೂಕ್ಷ್ಮ ವಿಷಯಗಳು ತಿಳಿದಿದ್ದರೂ ಪ್ರತಾಪಚಂದ್ರ ಶೆಟ್ಟಿಯವರಿಗೆ ಸಚಿವರಾಗುವ ಯೋಗ ಬಂದಿರಲಿಲ್ಲ. ಈಗದು ಬರುವ ಲಕ್ಷಣಗಳಿವೆ.

 

 

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

18 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

22 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

22 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

22 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

23 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

23 hours ago