ಉಡುಪಿ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪ್ರತಾಪಚಂದ್ರ ಶೆಟ್ಟರಿಗೆ ಒಲಿಯುವುದೆ ಸಚಿವ ಸ್ಥಾನ?

ಉಡುಪಿ: ಬಿ.ಎಸ್‌. ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ ಮೂರೇ ದಿನಗಳಲ್ಲಿ ರಾಜೀನಾಮೆ ಕೊಟ್ಟಿದ್ದು, ಮುಂದಿನ ಅವಕಾಶ ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿಕೂಟಕ್ಕೆ ಸಿಕ್ಕಿದೆ. ಬಿಜೆಪಿ ಸರಕಾರ ರಚನೆಯಾಗಿದ್ದರೆ ಜಿಲ್ಲೆಯ ಐವರು ಶಾಸಕರಲ್ಲಿ ಒಬ್ಬರಲ್ಲ ಒಬ್ಬರಿಗೆ ಸಚಿವ ಪದವಿ ಸಿಗುವ ಖಾತ್ರಿ ಇತ್ತು. ಆದರೆ ಈಗ ಕಾಂಗ್ರೆಸ್‌- ಜೆಡಿಎಸ್‌ ಸರಕಾರ ರಚಿಸಿವೆ, ಈ ಪಕ್ಷಗಳಿಂದ ಜಿಲ್ಲೆಯಲ್ಲಿ ಒಬ್ಬನೇ ಒಬ್ಬ ವಿಧಾನಸಭಾ ಸದಸ್ಯನಿಲ್ಲ. ಹೀಗಾಗಿ ಉಡುಪಿ ಜಿಲ್ಲೆಗೆ ಉಸ್ತುವಾರಿ ಸಚಿವರು ಯಾರಾಗುವರು ಎಂಬ ಕುತೂಹಲ ಉಂಟಾಗಿದೆ.

ಈಗಿರುವ ಸಾಧ್ಯತೆ ಪ್ರಕಾರ ವಿಧಾನ ಪರಿಷತ್‌ ಸದಸ್ಯ ಕುಂದಾಪುರದ ಪ್ರತಾಪಚಂದ್ರ ಶೆಟ್ಟಿಯವರಿಗೆ ಅವಕಾಶಗಳು ಹೆಚ್ಚಿವೆ. ಮೈತ್ರಿಕೂಟ ಸರಕಾರವಿರುವಾಗ ಸಾಮಾನ್ಯವಾಗಿ ಜಿಲ್ಲೆಗಳನ್ನು ಉಭಯ ಪಕ್ಷಗಳು ಹಂಚಿಕೊಳ್ಳುತ್ತವೆ. ಹೀಗಾಗಿ ದ.ಕ., ಉಡುಪಿ ಜಿಲ್ಲೆ ಎರಡೂ ಜಿಲ್ಲೆಯನ್ನು ಕಾಂಗ್ರೆಸ್‌ ವಹಿಸಿಕೊಳ್ಳಬಹುದು ಅಥವಾ ಒಂದು ಜಿಲ್ಲೆಯನ್ನು ಕಾಂಗ್ರೆಸ್‌ ಮತ್ತು ಇನ್ನೊಂದು ಜಿಲ್ಲೆಯನ್ನು ಜೆಡಿಎಸ್‌ ಹಂಚಿಕೊಳ್ಳಬಹುದು.

ಯಾರು ಉಸ್ತುವಾರಿ ಸಚಿವರು?
ಇದುವರೆಗೆ ಉಡುಪಿ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರಾಗಿದ್ದ ಒಂಬತ್ತು ಮಂದಿ ಶಾಸಕರಲ್ಲಿ ಕೆ. ಜಯಪ್ರಕಾಶ್‌ ಹೆಗ್ಡೆ -ಜನತಾದಳ, ಡಿ.ಟಿ. ಜಯಕುಮಾರ್‌ -ಜೆಡಿಎಸ್‌, ಡಾ| ವಿ.ಎಸ್‌. ಆಚಾರ್ಯ, ಕೋಟ ಶ್ರೀನಿವಾಸ ಪೂಜಾರಿ ಬಿಜೆಪಿಯವರಾದರೆ ಉಳಿದವರೆಲ್ಲರೂ ಕಾಂಗ್ರೆಸ್‌ ಸರಕಾರದಲ್ಲಿ ಸಚಿವರಾಗಿದ್ದರು. ಡಿ.ಟಿ. ಜಯಕುಮಾರ್‌ ಅವರು ಎಚ್‌.ಡಿ. ಕುಮಾರಸ್ವಾಮಿ- ಯಡಿಯೂರಪ್ಪ ಸರಕಾರವಿರುವಾಗ ಉಸ್ತುವಾರಿ ಸಚಿವರಾಗಿದ್ದರು. ಈಗ ಮತ್ತೆ ಅಂತಹ ಕಾಲ ಕೂಡಿ ಬರುತ್ತಿದೆ.

ಉಡುಪಿ ಜಿಲ್ಲೆ ಜೆಡಿಎಸ್‌ ಪಾಲಿಗಾದರೆ ಹೊರಗಿನ ಸಚಿವರು ಇಲ್ಲಿಗೆ ಉಸ್ತುವಾರಿಯಾಗಿ ಬರಲಿದ್ದಾರೆ. ವಿಧಾನ ಪರಿಷತ್‌ ಸದಸ್ಯರಾಗಿ ಸಚಿವರಾಗಬಲ್ಲ ವರ್ಚಸ್ಸು ಹೊಂದಿದ ಸ್ಥಳೀಯ ಜೆಡಿಎಸ್‌ ನಾಯಕರು ಇಲ್ಲವಾದ ಕಾರಣ ಹೊರಗಿನ ಜಿಲ್ಲೆಯವರು ಉಸ್ತುವಾರಿಯಾಗುವುದು ಅನಿವಾರ್ಯ. ಇಂತಹ ಸಂದಿಗ್ಧ ಸಂದರ್ಭದಲ್ಲಿ ಪ್ರತಾಪಚಂದ್ರ ಶೆಟ್ಟಿಯವರಿಗೆ ಅವಕಾಶ ಕೂಡಿ ಬಂದೀತು. ಸುದೀರ್ಘ‌ ಕಾಲ ವಿಧಾನಸಭಾ ಸದಸ್ಯರಾಗಿ, ವಿಧಾನ ಪರಿಷತ್‌ ಸದಸ್ಯರಾಗಿ ಆಡಳಿತಾತ್ಮಕ ಸೂಕ್ಷ್ಮ ವಿಷಯಗಳು ತಿಳಿದಿದ್ದರೂ ಪ್ರತಾಪಚಂದ್ರ ಶೆಟ್ಟಿಯವರಿಗೆ ಸಚಿವರಾಗುವ ಯೋಗ ಬಂದಿರಲಿಲ್ಲ. ಈಗದು ಬರುವ ಲಕ್ಷಣಗಳಿವೆ.

 

 

Vishwa News 24

Recent Posts

ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್‌ಪಾಲ್ ಸುವರ್ಣ – vishwanews24

ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್‌ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…

3 hours ago

ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ – vishwanews24

ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್‌ ಜನತಾ ಪಾರ್ಟಿ…

3 hours ago

ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ – vishwanews24

ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…

3 hours ago

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ – vishwanews24

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…

3 hours ago

ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ – vishwanews24

ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಕಂಪನಿಗಳ…

3 hours ago

ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು…

5 hours ago