ಕಾಂಗ್ರೆಸ್ –ಜೆಡಿಎಸ್ ಮೈತ್ರಿ ಪತನ : ಇದು ಪ್ರಜಾಪ್ರಭುತ್ವದ ಕರಾಳ ದಿನ : ಮೆಹಬೂಬಾ ಮುಫ್ತಿ -Vishwanews24

Featured, ರಾಷ್ಟ್ರ ನ್ಯೂಸ್
ಶ್ರೀನಗರ: ಕರ್ನಾಟಕ ರಾಜ್ಯದ  ಕಾಂಗ್ರೆಸ್ –ಜೆಡಿಎಸ್ ಮೈತ್ರಿ ಪತನಗೊಂಡಿರುವ ಕುರಿತು ಪ್ರತಿಕ್ರಿಯಿಸಿರುವ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ, ಇದು ಪ್ರಜಾಪ್ರಭುತ್ವದ ಕರಾಳ ದಿನ ಎಂದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವವನ್ನು ಸಂಭ್ರಮಿಸುತ್ತಿದ್ದ ದೇಶದ ಜನರು, ಇಂದು ಚುನಾಯಿತ ಸರ್ಕಾರ ಪತನಗೊಳ್ಳುವುದನ್ನು ನೋಡಿದ್ದಾರೆ ಎಂದಿದ್ದಾರೆ.
‘ಕರ್ನಾಟಕದ ಶಾಸಕರನ್ನು ಮುಂಬೈಗೆ ಕರೆದೊಯ್ದು ಐಷಾರಾಮಿ ವಸತಿ ಸೌಕರ್ಯ ಕಲ್ಪಿಸಲು ಎಲ್ಲಾ ಹಣ ವ್ಯಯಿಸಲಾಗಿದೆ. ಇದು ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದು, ಪ್ರಜಾಪ್ರಭುತ್ವದ ಕರಾಳ ದಿನ’ ಎಂದಿದ್ದಾರೆ.
ಮಂಗಳವಾರ ಕರ್ನಾಟಕ ವಿಧಾನಸಭೆಯಲ್ಲಿ ನಡೆದ ವಿಶ್ವಾಸಮತ ಯಾಚನೆಯಲ್ಲಿ ಮೈತ್ರಿ ಸರ್ಕಾರ 6 ಮತಗಳಿಂದ ಸೋಲು ಅನುಭವಿಸಿತ್ತು. ಇದರಿಂದ 14 ತಿಂಗಳ ಮೈತ್ರಿ ಸರ್ಕಾರ ಪತನಗೊಂಡಿತ್ತು.