Featured

ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ಆತ್ಮಹತ್ಯೆಗೆ ಸಮಾನ : ಪ್ರಧಾನಿ ಮೋದಿ – Vishwanews24

ನವದೆಹಲಿ: ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ಆತ್ಮಹತ್ಯೆಗೆ ಸಮಾನ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಡಾ.ಬಿ.ಆರ್.ಅಂಬೇಡ್ಕರ್ ಹೇಳಿಕೆಯನ್ನು ಪುನರುಚ್ಛರಿಸಿದರು.ಲೋಕಸಭೆಯಲ್ಲಿಂದು ರಾಷ್ಟ್ರಪತಿ ಭಾಷಣದ ಬಳಿಕ ವಂದನಾ ನಿರ್ಣಯದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಪಕ್ಷ ಮೋದಿಯನ್ನು ದ್ವೇಷಿಸುವಂತೆ, ವಿರೋಧ ಪಕ್ಷ ಇಡೀ ದೇಶವನ್ನೇ ದ್ವೇಷಿಸಲು ಪ್ರಾರಂಭಿಸಿದೆ. ಲಂಡನ್ ನಲ್ಲಿ ಪತ್ರಿಕಾಗೋಷ್ಟಿಯನ್ನು ಆಯೋಜಿಸುವ ಮೂಲಕ ಭಾರತವನ್ನು ಕೆಲ ಮಟ್ಟದಲ್ಲಿ ಬಿಂಬಿಸಲು  ಕಾಂಗ್ರೆಸ್ ಪ್ರಯತ್ನಿಸಿದೆ ಎಂದು ಮೋದಿ ಆರೋಪಿಸಿದರು.

ಮುಂದುವರೆದು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಜನರ ಬೇಡಿಕೆಗಳ ಬಗ್ಗೆ ಯಾವುದೇ ಸೂಕ್ಷ್ಮ ಕಾಳಜಿ ಇಲ್ಲ. ಬದಲಾಗಿ ಭ್ರಷ್ಟಾಚಾರವನ್ನು ಪ್ರೋತ್ಸಾಹಿಸುವ ಕಡೆ ಹೆಚ್ಚು ಗಮನ ಹರಿಸುತ್ತದೆ. ಪ್ರತಿ ಬಾರ್ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೂ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರುತ್ತದೆ. ಹಾಗಾಗಿ ಬೆಲೆ ಏರಿಕೆ ಮತ್ತು ಕಾಂಗ್ರೆಸ್ ಎರಡೂ ಒಂದೇ ಎಂದು ಟೀಕಿಸಿದರು. ಅಷ್ಟೇ ಅಲ್ಲದೆ, ಕಾಂಗ್ರೆಸ್ ಕುಟುಂಬ ರಾಜಕಾರಣದ ಬಗ್ಗೆ ಮೋದಿ ಕಟುವಾಗಿ ಟೀಕಿಸಿದರು.

ನಾವು ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದ್ದೇವೆ. ಆದರೆ ಯುಪಿಎ ಅವಧಿಯಲ್ಲಿ ದಲ್ಲಾಳಿಗಳಿಲ್ಲದೆ ಯಾವುದೇ ಒಪ್ಪಂದ ಆಗೇ ಇಲ್ಲ ಎಂದು ವ್ಯಂಗ್ಯವಾಡಿದರು. ರಾಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಯಾವುದೇ ಮಧ್ಯವರ್ತಿಗಳು ಇಲ್ಲ.

ಹೀಗಾಗಿ ಕಾಂಗ್ರೆಸ್ ಸಮಸ್ಯೆ ಕಾಣಿಸುತ್ತಿದೆ ಎಂದರು.ಜನರಿಗೆ ನಾವು ನೀಡುರುವ ಆಶ್ವಾಸನೆಗಳನ್ನು ನಾವು ಈಡೇರಿಸಿದ್ದೇವೆ. ಯಾವುದೇ ಸವಾಲುಗಳಿಗೆ ಹೆದರಿ ಓಡಿಹೋಗಿಲ್ಲ. ನಮ್ಮ ಸರ್ಕಾರ ಭ್ರಷ್ಟಾಚಾರದ ವಿರುದ್ಧ ಹೋರಾಡಿದೆ, ಹೋರಾಡುತ್ತದೆ ಎಂದರು.

Vishwa News 24

Recent Posts

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

2 days ago

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

2 days ago

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

2 days ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

2 days ago

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…

2 days ago

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ -Vishwanews24

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…

2 days ago