Featured

ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ಆತ್ಮಹತ್ಯೆಗೆ ಸಮಾನ : ಪ್ರಧಾನಿ ಮೋದಿ – Vishwanews24

ನವದೆಹಲಿ: ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ಆತ್ಮಹತ್ಯೆಗೆ ಸಮಾನ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಡಾ.ಬಿ.ಆರ್.ಅಂಬೇಡ್ಕರ್ ಹೇಳಿಕೆಯನ್ನು ಪುನರುಚ್ಛರಿಸಿದರು.ಲೋಕಸಭೆಯಲ್ಲಿಂದು ರಾಷ್ಟ್ರಪತಿ ಭಾಷಣದ ಬಳಿಕ ವಂದನಾ ನಿರ್ಣಯದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಪಕ್ಷ ಮೋದಿಯನ್ನು ದ್ವೇಷಿಸುವಂತೆ, ವಿರೋಧ ಪಕ್ಷ ಇಡೀ ದೇಶವನ್ನೇ ದ್ವೇಷಿಸಲು ಪ್ರಾರಂಭಿಸಿದೆ. ಲಂಡನ್ ನಲ್ಲಿ ಪತ್ರಿಕಾಗೋಷ್ಟಿಯನ್ನು ಆಯೋಜಿಸುವ ಮೂಲಕ ಭಾರತವನ್ನು ಕೆಲ ಮಟ್ಟದಲ್ಲಿ ಬಿಂಬಿಸಲು  ಕಾಂಗ್ರೆಸ್ ಪ್ರಯತ್ನಿಸಿದೆ ಎಂದು ಮೋದಿ ಆರೋಪಿಸಿದರು.

ಮುಂದುವರೆದು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಜನರ ಬೇಡಿಕೆಗಳ ಬಗ್ಗೆ ಯಾವುದೇ ಸೂಕ್ಷ್ಮ ಕಾಳಜಿ ಇಲ್ಲ. ಬದಲಾಗಿ ಭ್ರಷ್ಟಾಚಾರವನ್ನು ಪ್ರೋತ್ಸಾಹಿಸುವ ಕಡೆ ಹೆಚ್ಚು ಗಮನ ಹರಿಸುತ್ತದೆ. ಪ್ರತಿ ಬಾರ್ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೂ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರುತ್ತದೆ. ಹಾಗಾಗಿ ಬೆಲೆ ಏರಿಕೆ ಮತ್ತು ಕಾಂಗ್ರೆಸ್ ಎರಡೂ ಒಂದೇ ಎಂದು ಟೀಕಿಸಿದರು. ಅಷ್ಟೇ ಅಲ್ಲದೆ, ಕಾಂಗ್ರೆಸ್ ಕುಟುಂಬ ರಾಜಕಾರಣದ ಬಗ್ಗೆ ಮೋದಿ ಕಟುವಾಗಿ ಟೀಕಿಸಿದರು.

ನಾವು ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದ್ದೇವೆ. ಆದರೆ ಯುಪಿಎ ಅವಧಿಯಲ್ಲಿ ದಲ್ಲಾಳಿಗಳಿಲ್ಲದೆ ಯಾವುದೇ ಒಪ್ಪಂದ ಆಗೇ ಇಲ್ಲ ಎಂದು ವ್ಯಂಗ್ಯವಾಡಿದರು. ರಾಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಯಾವುದೇ ಮಧ್ಯವರ್ತಿಗಳು ಇಲ್ಲ.

ಹೀಗಾಗಿ ಕಾಂಗ್ರೆಸ್ ಸಮಸ್ಯೆ ಕಾಣಿಸುತ್ತಿದೆ ಎಂದರು.ಜನರಿಗೆ ನಾವು ನೀಡುರುವ ಆಶ್ವಾಸನೆಗಳನ್ನು ನಾವು ಈಡೇರಿಸಿದ್ದೇವೆ. ಯಾವುದೇ ಸವಾಲುಗಳಿಗೆ ಹೆದರಿ ಓಡಿಹೋಗಿಲ್ಲ. ನಮ್ಮ ಸರ್ಕಾರ ಭ್ರಷ್ಟಾಚಾರದ ವಿರುದ್ಧ ಹೋರಾಡಿದೆ, ಹೋರಾಡುತ್ತದೆ ಎಂದರು.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

3 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

3 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

3 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

3 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

3 days ago