ನವದೆಹಲಿ: ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ಆತ್ಮಹತ್ಯೆಗೆ ಸಮಾನ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಡಾ.ಬಿ.ಆರ್.ಅಂಬೇಡ್ಕರ್ ಹೇಳಿಕೆಯನ್ನು ಪುನರುಚ್ಛರಿಸಿದರು.ಲೋಕಸಭೆಯಲ್ಲಿಂದು ರಾಷ್ಟ್ರಪತಿ ಭಾಷಣದ ಬಳಿಕ ವಂದನಾ ನಿರ್ಣಯದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಪಕ್ಷ ಮೋದಿಯನ್ನು ದ್ವೇಷಿಸುವಂತೆ, ವಿರೋಧ ಪಕ್ಷ ಇಡೀ ದೇಶವನ್ನೇ ದ್ವೇಷಿಸಲು ಪ್ರಾರಂಭಿಸಿದೆ. ಲಂಡನ್ ನಲ್ಲಿ ಪತ್ರಿಕಾಗೋಷ್ಟಿಯನ್ನು ಆಯೋಜಿಸುವ ಮೂಲಕ ಭಾರತವನ್ನು ಕೆಲ ಮಟ್ಟದಲ್ಲಿ ಬಿಂಬಿಸಲು ಕಾಂಗ್ರೆಸ್ ಪ್ರಯತ್ನಿಸಿದೆ ಎಂದು ಮೋದಿ ಆರೋಪಿಸಿದರು.
ಮುಂದುವರೆದು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಜನರ ಬೇಡಿಕೆಗಳ ಬಗ್ಗೆ ಯಾವುದೇ ಸೂಕ್ಷ್ಮ ಕಾಳಜಿ ಇಲ್ಲ. ಬದಲಾಗಿ ಭ್ರಷ್ಟಾಚಾರವನ್ನು ಪ್ರೋತ್ಸಾಹಿಸುವ ಕಡೆ ಹೆಚ್ಚು ಗಮನ ಹರಿಸುತ್ತದೆ. ಪ್ರತಿ ಬಾರ್ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೂ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರುತ್ತದೆ. ಹಾಗಾಗಿ ಬೆಲೆ ಏರಿಕೆ ಮತ್ತು ಕಾಂಗ್ರೆಸ್ ಎರಡೂ ಒಂದೇ ಎಂದು ಟೀಕಿಸಿದರು. ಅಷ್ಟೇ ಅಲ್ಲದೆ, ಕಾಂಗ್ರೆಸ್ ಕುಟುಂಬ ರಾಜಕಾರಣದ ಬಗ್ಗೆ ಮೋದಿ ಕಟುವಾಗಿ ಟೀಕಿಸಿದರು.
ನಾವು ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದ್ದೇವೆ. ಆದರೆ ಯುಪಿಎ ಅವಧಿಯಲ್ಲಿ ದಲ್ಲಾಳಿಗಳಿಲ್ಲದೆ ಯಾವುದೇ ಒಪ್ಪಂದ ಆಗೇ ಇಲ್ಲ ಎಂದು ವ್ಯಂಗ್ಯವಾಡಿದರು. ರಾಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಯಾವುದೇ ಮಧ್ಯವರ್ತಿಗಳು ಇಲ್ಲ.
ಹೀಗಾಗಿ ಕಾಂಗ್ರೆಸ್ ಸಮಸ್ಯೆ ಕಾಣಿಸುತ್ತಿದೆ ಎಂದರು.ಜನರಿಗೆ ನಾವು ನೀಡುರುವ ಆಶ್ವಾಸನೆಗಳನ್ನು ನಾವು ಈಡೇರಿಸಿದ್ದೇವೆ. ಯಾವುದೇ ಸವಾಲುಗಳಿಗೆ ಹೆದರಿ ಓಡಿಹೋಗಿಲ್ಲ. ನಮ್ಮ ಸರ್ಕಾರ ಭ್ರಷ್ಟಾಚಾರದ ವಿರುದ್ಧ ಹೋರಾಡಿದೆ, ಹೋರಾಡುತ್ತದೆ ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…