Featured

ಕಾಂಗ್ರೆಸ್ ಜೊತೆ ಸೇರಿ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಹೆಸರು ಕೆಡಿಸಿಕೊಂಡೆ : ಕುಮಾರಸ್ವಾಮಿ -Vishwanews24

ಕಾಂಗ್ರೆಸ್ ಜೊತೆ ಸೇರಿ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಹೆಸರು ಕೆಡಿಸಿಕೊಂಡೆ : ಕುಮಾರಸ್ವಾಮಿ

ಕಾಂಗ್ರೆಸ್​ನವರು ನನ್ನನ್ನ ಸರ್ವನಾಶ ಮಾಡಿದರು..

ಮೈಸೂರು: ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರ ಮಾತನ್ನ ಕೇಳಿ ನಾನು ಕಾಂಗ್ರೆಸ್ ಜೊತೆ​ ಸೇರಿದೆ, ನಂತರ ಕಾಂಗ್ರೆಸ್​ನವರು ನನ್ನನ್ನ ಸರ್ವನಾಶ ಮಾಡಿದರು ಅಂತಾ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ.. 2006/2007 ರಲ್ಲಿ ನಾನು ಗುಡ್​​ವಿಲ್ ಪಡೆದುಕೊಂಡಿದ್ದೆ. ರಾಜಕೀಯ ಹಸ್ತಾಂತರದ ಮಧ್ಯೆಯೂ ನಾನು ಒಂದು ಒಳ್ಳೆಯ ಅಭಿಪ್ರಾಯವನ್ನ ಇಟ್ಟುಕೊಂಡಿದ್ದೆ. 12 ವರ್ಷ ನನ್ನನ್ನ ಸಾಕಿದರು. ಈ ಕಾಂಗ್ರೆಸ್​ನವರ ಸಹವಾಸ ಮಾಡಿ, ದೇವೇಗೌಡರ ಮಾತನ್ನ ಕಟ್ಟಿಕೊಂಡು.. ಪಾಪ ನಾನು ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡಲ್ಲ. ಕಾರಣ ಅವರಿಗೆ ಸೆಕ್ಯೂಲರ್ ಬಗ್ಗೆ ವ್ಯಾಮೋಹ ಇತ್ತು. ಅವರದ್ದೇ ಆದ ಕಮಿಟ್​ಮೆಂಟ್ ಇತ್ತು. ಅವರ ಭಾವನೆಯನ್ನ ಧಿಕ್ಕರಿಸಬಾರದು ಅಂತಾ ಈ ವಯಸ್ಸಲ್ಲಿ ಅವರಿಗೆ ನೋವು ಮಾಡಬಾರದು ಅಂತಾ ನಾನು ಕಾಂಗ್ರೆಸ್​ ಜೊತೆ ಸರ್ಕಾರ ಮಾಡಿದ್ದೆ. ನನ್ನ ಗುಡ್​ವಿಲ್​​ ಅನ್ನ ಸರ್ವನಾಶ ಮಾಡಿದವರು ಈ ಸಿದ್ದರಾಮಯ್ಯನವ್ರ ಗುಂಪು‌ ಅಂತಾ ಆರೋಪಿಸಿದರು.

ಸಿದ್ಧರಾಮಯ್ಯ ಅವರ ಕುತಂತ್ರ ಹಾಗೂ ಹೆಚ್ ಡಿ ದೇವೇಗೌಡರ ಭಾವನಾತ್ಮಕ ಮಾತಿಗೆ ಕಟ್ಟುಬಿದ್ದು ನಾನು ಹೆಸರು ಕೆಡಿಸಿಕೊಂಡೆ. ನಾನು ಅವರ ಮಾತನ್ನು ಕೇಳದೇ ಬೇರೆಯ ನಿರ್ಧಾರವನ್ನು ಮಾಡಿದ್ದೇ ಆಗಿದ್ದರೇ, ಈಗಲೂ ನಾನು ಮುಖ್ಯಮಂತ್ರಿ ಆಗಿರುವ ಅವಕಾಶ ಇರುತ್ತಿತ್ತು ಎಂದರು.

2006ರಲ್ಲಿ ಮುಖ್ಯಮಂತ್ರಿಯಾದಾಗ ರಾಜ್ಯದಲ್ಲಿ ನನಗೆ ಒಳ್ಳೆಯ ಹೆಸರು ಇತ್ತು. ಇದೇ ಕಾರಣದಿಂದಾಗಿ ನನ್ನನ್ನು ಈ ರಾಜ್ಯದ ಜನರು 12 ವರ್ಷ ಸಾಕಿದರು. ಆದ್ರೇ ನನ್ನ ಹೆಸರು ಕೆಡಿಸಲೆಂದು ಕಾಂಗ್ರೆಸ್ ಹೆಣೆದ ಬಲೆಯಲ್ಲಿ ಸಿಲುಕಿದೆ. ಜೊತೆಗೆ ದೇವೇಗೌಡರ ಮಾತು ಕೇಳಿ, ಕಾಂಗ್ರೆಸ್ ಜೊತೆ ಸೇರಿ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಹೆಸರು ಕೆಡಿಸಿಕೊಂಡೆ. ಮತ್ತೆಂದು ಇಂತಹ ತಪ್ಪು ಮಾಡುವುದಿಲ್ಲ ಎಂಬುದಾಗಿ ಹೇಳಿದರು.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

23 hours ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

1 day ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

1 day ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

1 day ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

1 day ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

1 day ago