ಮೈಸೂರು: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಮಾತನ್ನ ಕೇಳಿ ನಾನು ಕಾಂಗ್ರೆಸ್ ಜೊತೆ ಸೇರಿದೆ, ನಂತರ ಕಾಂಗ್ರೆಸ್ನವರು ನನ್ನನ್ನ ಸರ್ವನಾಶ ಮಾಡಿದರು ಅಂತಾ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದರು.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್ಡಿ ಕುಮಾರಸ್ವಾಮಿ.. 2006/2007 ರಲ್ಲಿ ನಾನು ಗುಡ್ವಿಲ್ ಪಡೆದುಕೊಂಡಿದ್ದೆ. ರಾಜಕೀಯ ಹಸ್ತಾಂತರದ ಮಧ್ಯೆಯೂ ನಾನು ಒಂದು ಒಳ್ಳೆಯ ಅಭಿಪ್ರಾಯವನ್ನ ಇಟ್ಟುಕೊಂಡಿದ್ದೆ. 12 ವರ್ಷ ನನ್ನನ್ನ ಸಾಕಿದರು. ಈ ಕಾಂಗ್ರೆಸ್ನವರ ಸಹವಾಸ ಮಾಡಿ, ದೇವೇಗೌಡರ ಮಾತನ್ನ ಕಟ್ಟಿಕೊಂಡು.. ಪಾಪ ನಾನು ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡಲ್ಲ. ಕಾರಣ ಅವರಿಗೆ ಸೆಕ್ಯೂಲರ್ ಬಗ್ಗೆ ವ್ಯಾಮೋಹ ಇತ್ತು. ಅವರದ್ದೇ ಆದ ಕಮಿಟ್ಮೆಂಟ್ ಇತ್ತು. ಅವರ ಭಾವನೆಯನ್ನ ಧಿಕ್ಕರಿಸಬಾರದು ಅಂತಾ ಈ ವಯಸ್ಸಲ್ಲಿ ಅವರಿಗೆ ನೋವು ಮಾಡಬಾರದು ಅಂತಾ ನಾನು ಕಾಂಗ್ರೆಸ್ ಜೊತೆ ಸರ್ಕಾರ ಮಾಡಿದ್ದೆ. ನನ್ನ ಗುಡ್ವಿಲ್ ಅನ್ನ ಸರ್ವನಾಶ ಮಾಡಿದವರು ಈ ಸಿದ್ದರಾಮಯ್ಯನವ್ರ ಗುಂಪು ಅಂತಾ ಆರೋಪಿಸಿದರು.
ಸಿದ್ಧರಾಮಯ್ಯ ಅವರ ಕುತಂತ್ರ ಹಾಗೂ ಹೆಚ್ ಡಿ ದೇವೇಗೌಡರ ಭಾವನಾತ್ಮಕ ಮಾತಿಗೆ ಕಟ್ಟುಬಿದ್ದು ನಾನು ಹೆಸರು ಕೆಡಿಸಿಕೊಂಡೆ. ನಾನು ಅವರ ಮಾತನ್ನು ಕೇಳದೇ ಬೇರೆಯ ನಿರ್ಧಾರವನ್ನು ಮಾಡಿದ್ದೇ ಆಗಿದ್ದರೇ, ಈಗಲೂ ನಾನು ಮುಖ್ಯಮಂತ್ರಿ ಆಗಿರುವ ಅವಕಾಶ ಇರುತ್ತಿತ್ತು ಎಂದರು.
2006ರಲ್ಲಿ ಮುಖ್ಯಮಂತ್ರಿಯಾದಾಗ ರಾಜ್ಯದಲ್ಲಿ ನನಗೆ ಒಳ್ಳೆಯ ಹೆಸರು ಇತ್ತು. ಇದೇ ಕಾರಣದಿಂದಾಗಿ ನನ್ನನ್ನು ಈ ರಾಜ್ಯದ ಜನರು 12 ವರ್ಷ ಸಾಕಿದರು. ಆದ್ರೇ ನನ್ನ ಹೆಸರು ಕೆಡಿಸಲೆಂದು ಕಾಂಗ್ರೆಸ್ ಹೆಣೆದ ಬಲೆಯಲ್ಲಿ ಸಿಲುಕಿದೆ. ಜೊತೆಗೆ ದೇವೇಗೌಡರ ಮಾತು ಕೇಳಿ, ಕಾಂಗ್ರೆಸ್ ಜೊತೆ ಸೇರಿ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಹೆಸರು ಕೆಡಿಸಿಕೊಂಡೆ. ಮತ್ತೆಂದು ಇಂತಹ ತಪ್ಪು ಮಾಡುವುದಿಲ್ಲ ಎಂಬುದಾಗಿ ಹೇಳಿದರು.
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…
ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ : 18 ತಿಂಗಳ ಮಗು ನಿಧನ ; ವೈದ್ಯರ ವಿರುದ್ಧ ಪ್ರಕರಣ ದಾಖಲು ತಿರುವನಂತಪುರಂ:…