ಬಾಗಲಕೋಟೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ. ಅಕ್ಟೋಬರ್ ತಿಂಗಳ ಅವಧಿಯಲ್ಲಿ ಬಿಎಸ್ ವೈ ಸಿಎಮ್ ಆಗುತ್ತಾರೆ ಎಂಬ ರಂಭಾಪುರಿ ಶ್ರೀ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ‘ ಸ್ವಾಮೀಜಿಗಳ ಹೇಳಿಕೆ ಬಗ್ಗೆ ನಾನು ಮಾತನಾಡೋದಿಲ್ಲ. ಸ್ವಾಮೀಜಿಗಳು ಅವರ ಅನಿಸಿಕೆ ಹೇಳಿದ್ದಾರೆ. ರಾಜಕಾರಣಿಗಳು ಹೇಳಿದ್ದರೆ ನಾ ಉತ್ತರ ಕೊಡುತ್ತಿದ್ದೆ. ಅವರು ಮಾತನಾಡುವ ವೇಳೆ ನಾವು ಮಾತನಾಡೋದು ತಪ್ಪು ‘ ಎಂದಿದ್ದಾರೆ.
‘ ಬದಲಾದ ಸನ್ನಿವೇಶದಲ್ಲಿ ಕಾಂಗ್ರೆಸ್ ಜೆಡಿಎಸ್ ಲೋಕಸಭಾ ಚುನಾವಣೆ ಒಟ್ಟಾಗಿ ಎದುರಿಸುತ್ತೇವೆ. ಕಾಂಗ್ರೆಸ್ ದೇಶದಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಶಕ್ತಿ ಹೊಂದಿದೆ. ಜೆಡಿಎಸ್ ಕಾಂಗ್ರೆಸ್ ಯಾರಾದರೂ ಪ್ರಧಾನಿಯಾಗಲಿ. ಆದರೆ ಬಿಜೆಪಿ ಪಕ್ಷದವರನ್ನು ಬಿಟ್ಟು ಯಾರಾದರೂ ಪ್ರಧಾನಿಯಾಗ್ತಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಆಯ್ಕೆ ಬಗ್ಗೆ ರಾಹುಲ್ ಗಾಂಧಿ ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ ‘ ಎಂದು ಹೇಳಿದ್ದಾರೆ.
ಸಭಾಪತಿ ಆಯ್ಕೆ ಗೊಂದಲ ವಿಚಾರವಾಗಿ ಮಾತನಾಡಿರುವ ಅವರು ‘ ಸಮ್ಮಿಶ್ರ ಸರಕಾರ ಅಂದ ಮೇಲೆ ಚರ್ಚೆಗಳು,ಗೊಂದಲಗಳು ಸಾಮಾನ್ಯ. ಈ ಬಗ್ಗೆ ಸಮನ್ವಯ ಸಮಿತಿ ಇದೆ ಸಮಿತಿ ಮೂಲಕ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ‘ ಎಂದಿದ್ದಾರೆ.
ಸಮ್ಮಿಶ್ರ ಸರಕಾರ ಹೆಚ್ಚು ದಿನ ಉಳಿಯೋದಿಲ್ಲ ಎಂಬ ಡಿವಿ ಸದಾನಂದಗೌಡ ಹೇಳಿಕೆಗೆ ತಿರುಗೇಟು ನೀಡಿರುವ ಹರಿಪ್ರಸಾದ್ ‘ ಸದಾನಂದಗೌಡ ಓರ್ವ ರಾಜಕೀಯ ಪಂಡಿತ, ಭವಿಷ್ಯ ನುಡಿತಕ್ಕಂತವರು ಅವರ ಭವಿಷ್ಯ ಏನಾಗುತ್ತದೆ ಅಂತ ಎಲ್ಲರೂ ನೋಡಿದ್ದಾರೆ ಎಂದು ವ್ಯಂಗ್ಯ ಮಾಡಿದ್ದಾರೆ.
ನಿಗಮ ಮಂಡಳಿ ಆಯ್ಕೆ ವಿಚಾರವಾಗಿ ‘ ಮೊದಲನೇ ಹಂತದಲ್ಲಿ ಹಿರಿಯ ಶಾಸಕರಿಗೆ ಕೊಡುವ ತೀರ್ಮಾನ ಮಾಡಲಾಗಿದೆ. ಉಳಿದಂತೆ ಪ್ರಮುಖ ಕಾರ್ಯಕರ್ತರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗುವುದು ‘ ಎಂದು ಹೇಳಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…