ಬಾಗಲಕೋಟೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ. ಅಕ್ಟೋಬರ್ ತಿಂಗಳ ಅವಧಿಯಲ್ಲಿ ಬಿಎಸ್ ವೈ ಸಿಎಮ್ ಆಗುತ್ತಾರೆ ಎಂಬ ರಂಭಾಪುರಿ ಶ್ರೀ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ‘ ಸ್ವಾಮೀಜಿಗಳ ಹೇಳಿಕೆ ಬಗ್ಗೆ ನಾನು ಮಾತನಾಡೋದಿಲ್ಲ. ಸ್ವಾಮೀಜಿಗಳು ಅವರ ಅನಿಸಿಕೆ ಹೇಳಿದ್ದಾರೆ. ರಾಜಕಾರಣಿಗಳು ಹೇಳಿದ್ದರೆ ನಾ ಉತ್ತರ ಕೊಡುತ್ತಿದ್ದೆ. ಅವರು ಮಾತನಾಡುವ ವೇಳೆ ನಾವು ಮಾತನಾಡೋದು ತಪ್ಪು ‘ ಎಂದಿದ್ದಾರೆ.
‘ ಬದಲಾದ ಸನ್ನಿವೇಶದಲ್ಲಿ ಕಾಂಗ್ರೆಸ್ ಜೆಡಿಎಸ್ ಲೋಕಸಭಾ ಚುನಾವಣೆ ಒಟ್ಟಾಗಿ ಎದುರಿಸುತ್ತೇವೆ. ಕಾಂಗ್ರೆಸ್ ದೇಶದಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಶಕ್ತಿ ಹೊಂದಿದೆ. ಜೆಡಿಎಸ್ ಕಾಂಗ್ರೆಸ್ ಯಾರಾದರೂ ಪ್ರಧಾನಿಯಾಗಲಿ. ಆದರೆ ಬಿಜೆಪಿ ಪಕ್ಷದವರನ್ನು ಬಿಟ್ಟು ಯಾರಾದರೂ ಪ್ರಧಾನಿಯಾಗ್ತಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಆಯ್ಕೆ ಬಗ್ಗೆ ರಾಹುಲ್ ಗಾಂಧಿ ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ ‘ ಎಂದು ಹೇಳಿದ್ದಾರೆ.
ಸಭಾಪತಿ ಆಯ್ಕೆ ಗೊಂದಲ ವಿಚಾರವಾಗಿ ಮಾತನಾಡಿರುವ ಅವರು ‘ ಸಮ್ಮಿಶ್ರ ಸರಕಾರ ಅಂದ ಮೇಲೆ ಚರ್ಚೆಗಳು,ಗೊಂದಲಗಳು ಸಾಮಾನ್ಯ. ಈ ಬಗ್ಗೆ ಸಮನ್ವಯ ಸಮಿತಿ ಇದೆ ಸಮಿತಿ ಮೂಲಕ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ‘ ಎಂದಿದ್ದಾರೆ.
ಸಮ್ಮಿಶ್ರ ಸರಕಾರ ಹೆಚ್ಚು ದಿನ ಉಳಿಯೋದಿಲ್ಲ ಎಂಬ ಡಿವಿ ಸದಾನಂದಗೌಡ ಹೇಳಿಕೆಗೆ ತಿರುಗೇಟು ನೀಡಿರುವ ಹರಿಪ್ರಸಾದ್ ‘ ಸದಾನಂದಗೌಡ ಓರ್ವ ರಾಜಕೀಯ ಪಂಡಿತ, ಭವಿಷ್ಯ ನುಡಿತಕ್ಕಂತವರು ಅವರ ಭವಿಷ್ಯ ಏನಾಗುತ್ತದೆ ಅಂತ ಎಲ್ಲರೂ ನೋಡಿದ್ದಾರೆ ಎಂದು ವ್ಯಂಗ್ಯ ಮಾಡಿದ್ದಾರೆ.
ನಿಗಮ ಮಂಡಳಿ ಆಯ್ಕೆ ವಿಚಾರವಾಗಿ ‘ ಮೊದಲನೇ ಹಂತದಲ್ಲಿ ಹಿರಿಯ ಶಾಸಕರಿಗೆ ಕೊಡುವ ತೀರ್ಮಾನ ಮಾಡಲಾಗಿದೆ. ಉಳಿದಂತೆ ಪ್ರಮುಖ ಕಾರ್ಯಕರ್ತರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗುವುದು ‘ ಎಂದು ಹೇಳಿದ್ದಾರೆ.
ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…
ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್ ಜನತಾ ಪಾರ್ಟಿ…
ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…
ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…
ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಕಂಪನಿಗಳ…
ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು…