Featured

ಕಾಂಗ್ರೆಸ್ ದೇಶದಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಸಾಮರ್ಥ್ಯ ಹೊಂದಿದೆ : ಬಿ.ಕೆ ಹರಿಪ್ರಸಾದ್

ಬಾಗಲಕೋಟೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ. ಅಕ್ಟೋಬರ್ ತಿಂಗಳ ಅವಧಿಯಲ್ಲಿ ಬಿಎಸ್ ವೈ ಸಿಎಮ್ ಆಗುತ್ತಾರೆ ಎಂಬ ರಂಭಾಪುರಿ ಶ್ರೀ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ‘ ಸ್ವಾಮೀಜಿಗಳ ಹೇಳಿಕೆ ಬಗ್ಗೆ ನಾನು ಮಾತನಾಡೋದಿಲ್ಲ. ಸ್ವಾಮೀಜಿಗಳು ಅವರ ಅನಿಸಿಕೆ ಹೇಳಿದ್ದಾರೆ. ರಾಜಕಾರಣಿಗಳು ಹೇಳಿದ್ದರೆ ನಾ ಉತ್ತರ ಕೊಡುತ್ತಿದ್ದೆ. ಅವರು ಮಾತನಾಡುವ ವೇಳೆ ನಾವು ಮಾತನಾಡೋದು ತಪ್ಪು ‘ ಎಂದಿದ್ದಾರೆ.

‘ ಬದಲಾದ ಸನ್ನಿವೇಶದಲ್ಲಿ ಕಾಂಗ್ರೆಸ್ ಜೆಡಿಎಸ್ ಲೋಕಸಭಾ ಚುನಾವಣೆ ಒಟ್ಟಾಗಿ ಎದುರಿಸುತ್ತೇವೆ. ಕಾಂಗ್ರೆಸ್ ದೇಶದಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಶಕ್ತಿ ಹೊಂದಿದೆ. ಜೆಡಿಎಸ್ ಕಾಂಗ್ರೆಸ್ ಯಾರಾದರೂ ಪ್ರಧಾನಿಯಾಗಲಿ. ಆದರೆ ಬಿಜೆಪಿ ಪಕ್ಷದವರನ್ನು ಬಿಟ್ಟು ಯಾರಾದರೂ ಪ್ರಧಾನಿಯಾಗ್ತಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಆಯ್ಕೆ ಬಗ್ಗೆ ರಾಹುಲ್ ಗಾಂಧಿ ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ ‘ ಎಂದು ಹೇಳಿದ್ದಾರೆ.

ಸಭಾಪತಿ ಆಯ್ಕೆ ಗೊಂದಲ ವಿಚಾರವಾಗಿ ಮಾತನಾಡಿರುವ ಅವರು ‘ ಸಮ್ಮಿಶ್ರ ಸರಕಾರ ಅಂದ ಮೇಲೆ ಚರ್ಚೆಗಳು,ಗೊಂದಲಗಳು ಸಾಮಾನ್ಯ. ಈ ಬಗ್ಗೆ ಸಮನ್ವಯ ಸಮಿತಿ ಇದೆ ಸಮಿತಿ ಮೂಲಕ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ‘ ಎಂದಿದ್ದಾರೆ.

ಸಮ್ಮಿಶ್ರ ಸರಕಾರ ಹೆಚ್ಚು ದಿನ ಉಳಿಯೋದಿಲ್ಲ ಎಂಬ ಡಿವಿ ಸದಾನಂದಗೌಡ ಹೇಳಿಕೆಗೆ ತಿರುಗೇಟು ನೀಡಿರುವ ಹರಿಪ್ರಸಾದ್ ‘ ಸದಾನಂದಗೌಡ ಓರ್ವ ರಾಜಕೀಯ ಪಂಡಿತ, ಭವಿಷ್ಯ ನುಡಿತಕ್ಕಂತವರು ಅವರ ಭವಿಷ್ಯ ಏನಾಗುತ್ತದೆ ಅಂತ ಎಲ್ಲರೂ ನೋಡಿದ್ದಾರೆ ಎಂದು ವ್ಯಂಗ್ಯ ಮಾಡಿದ್ದಾರೆ.

ನಿಗಮ ಮಂಡಳಿ ಆಯ್ಕೆ ವಿಚಾರವಾಗಿ ‘ ಮೊದಲನೇ ಹಂತದಲ್ಲಿ ಹಿರಿಯ ಶಾಸಕರಿಗೆ ಕೊಡುವ ತೀರ್ಮಾನ ಮಾಡಲಾಗಿದೆ. ಉಳಿದಂತೆ ಪ್ರಮುಖ ಕಾರ್ಯಕರ್ತರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗುವುದು ‘ ಎಂದು ಹೇಳಿದ್ದಾರೆ.

Vishwa News 24

Recent Posts

ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24

ಪುತ್ತೂರು: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…

7 minutes ago

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ – vishwanews24

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…

16 minutes ago

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು – vishwanews24

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…

27 minutes ago

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ – vishwanews24

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…

2 hours ago

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು – ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – vishwanews24

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು-ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ…

2 hours ago

ಡಿವೈಡರ್‌ಗೆ ಕಾರು ಡಿಕ್ಕಿ : ಖ್ಯಾತ ನಟಿ  ಮಾಡೆಲ್ ಹರ್ಷಿಲ್ ಕಾಲಿಯಾ ಸಾವು – vishwanews24

ಡಿವೈಡರ್‌ಗೆ ಕಾರು ಡಿಕ್ಕಿ :  ಭೀಕರ ಅಪಘಾತದಲ್ಲಿ ಖ್ಯಾತ ನಟಿ  ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು…

3 hours ago