ಮಂಡ್ಯ, : ಇದೊಂದು ಐತಿಹಾಸಿಕ ಸ್ಥಳ. ನಾನು ಬಂದಾಗ ಸೇವಾದಳದ ಸ್ನೇಹಿತರಾದ ರಾಮಚಂದ್ರ ಅವರು ನೂತನ ರಾಜ್ಯಾಧ್ಯಕ್ಷರಾಗಿ ಶಿವಪುರದ ವೀರಸೌಧದಲ್ಲಿ ನನ್ನಿಂದ ಧ್ವಜಾರೋಹಣ ಮಾಡಿಸಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಅವರಿಗೆ ಈ ಸಂದರ್ಭದಲ್ಲಿ ಪಕ್ಷದ ಎಲ್ಲ ಕಾರ್ಯಕರ್ತರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದ್ದಾರೆ.
ಮದ್ದೂರು ತಾಲ್ಲೂಕಿನ ಶಿವಪುರದಲ್ಲಿ ಕಾಂಗ್ರೆಸ್ ಪಕ್ಷದ 137ನೇ ವರ್ಷದ ಸಂಸ್ಥಾಪನಾ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.
ಕಾಂಗ್ರೆಸ್ ದೇಶದ ಶಕ್ತಿ, ಕಾಂಗ್ರೆಸ್ ದೇಶದ ಇತಿಹಾಸ. ಈ ಇತಿಹಾಸ ಯಾವ ಭಾರತೀಯನು ಮರೆಯಲು ಸಾಧ್ಯವಿಲ್ಲ ಎಂದರು.
ಕಾಂಗ್ರೆಸ್ ಪಕ್ಷದ ಇತಿಹಾಸಕ್ಕೂ ಬಿಜೆಪಿ ಇತಿಹಾಸಕ್ಕೂ ವ್ಯತ್ಯಾಸವಿದೆ. ಆರ್ಎಸ್ಎಸ್ ಜನ ಸಂಘ ಆನಂತರ ಪರಿವರ್ತನೆಯಾಯಿತು. ನಮ್ಮದು ತ್ಯಾಗ ಮತ್ತು ಬಲಿದಾನದ ಇತಿಹಾಸ. ಶಿವಪುರ ಹಾಗೂ ಮಂಡ್ಯ ಸಹ ಇತಿಹಾಸ ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸದ ಜತೆ ಬೆಸೆದುಕೊಂಡಿದೆ. ಇಲ್ಲಿ ತ್ರಿವರ್ಣ ಧ್ವಜ ಹಾರಿಸಬಾರದು ಎಂದು ಬ್ರಿಟೀಷರು ನಿರ್ಬಂಧ ಹಾಕಿದ್ದನ್ನು ವಿರೋಧಿಸಿ ಹೋರಾಟಗಾರರು ಧ್ವಜ ಹಾರಿಸಿದ್ದು ಈಗ ಇತಿಹಾಸ ಎಂದರು.
ಯಾರಿಗೂ ಅಧಿಕಾರ ಶಾಶ್ವತವಲ್ಲ. ನಾನು ಶಾಶ್ವತವಾಗಿ ಇರುವುದಿಲ್ಲ. ಆದರೆ ನಾವು ಅಧಿಕಾರದಲ್ಲಿದ್ದಾಗ ಏನು ಮಾಡಿದ್ದೇವೆ ಎಂಬುದು ಮುಖ್ಯ ಎಂದರು, ಕೋವಿಡ್ ಕಾಲದಲ್ಲಿ ಜನ ಮನೆಯಿಂದ ಹೊರಗೆ ಬರಲು ಹೆದರುವಾಗ, ನಾವ್ಯಾರು ಮನೆಯಲ್ಲಿ ಕೂರಲಿಲ್ಲ. ನಾನು, ನಮ್ಮ ಕಾರ್ಯಾಧ್ಯಕ್ಷರ ತಂಡ ಹಾಗೂ ನಾಯಕರು ಹಗಲಿರುಳು ಕೋವಿಡ್ ವಿರುದ್ಧ ಹೋರಾಡಿದ್ದಾರೆ. ಕಾಂಗ್ರೆಸ್ ನಾಯಕರು ತಮ್ಮ ಪ್ರಾಣ ಒತ್ತೆ ಇಟ್ಟು ಪ್ರಾಮಾಣಿಕವಾಗಿ ಜನರ ಸೇವೆ ಮಾಡಿದ್ದಾರೆ ಎಂದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…