ಮಂಡ್ಯ, : ಇದೊಂದು ಐತಿಹಾಸಿಕ ಸ್ಥಳ. ನಾನು ಬಂದಾಗ ಸೇವಾದಳದ ಸ್ನೇಹಿತರಾದ ರಾಮಚಂದ್ರ ಅವರು ನೂತನ ರಾಜ್ಯಾಧ್ಯಕ್ಷರಾಗಿ ಶಿವಪುರದ ವೀರಸೌಧದಲ್ಲಿ ನನ್ನಿಂದ ಧ್ವಜಾರೋಹಣ ಮಾಡಿಸಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಅವರಿಗೆ ಈ ಸಂದರ್ಭದಲ್ಲಿ ಪಕ್ಷದ ಎಲ್ಲ ಕಾರ್ಯಕರ್ತರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದ್ದಾರೆ.
ಮದ್ದೂರು ತಾಲ್ಲೂಕಿನ ಶಿವಪುರದಲ್ಲಿ ಕಾಂಗ್ರೆಸ್ ಪಕ್ಷದ 137ನೇ ವರ್ಷದ ಸಂಸ್ಥಾಪನಾ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.
ಕಾಂಗ್ರೆಸ್ ದೇಶದ ಶಕ್ತಿ, ಕಾಂಗ್ರೆಸ್ ದೇಶದ ಇತಿಹಾಸ. ಈ ಇತಿಹಾಸ ಯಾವ ಭಾರತೀಯನು ಮರೆಯಲು ಸಾಧ್ಯವಿಲ್ಲ ಎಂದರು.
ಕಾಂಗ್ರೆಸ್ ಪಕ್ಷದ ಇತಿಹಾಸಕ್ಕೂ ಬಿಜೆಪಿ ಇತಿಹಾಸಕ್ಕೂ ವ್ಯತ್ಯಾಸವಿದೆ. ಆರ್ಎಸ್ಎಸ್ ಜನ ಸಂಘ ಆನಂತರ ಪರಿವರ್ತನೆಯಾಯಿತು. ನಮ್ಮದು ತ್ಯಾಗ ಮತ್ತು ಬಲಿದಾನದ ಇತಿಹಾಸ. ಶಿವಪುರ ಹಾಗೂ ಮಂಡ್ಯ ಸಹ ಇತಿಹಾಸ ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸದ ಜತೆ ಬೆಸೆದುಕೊಂಡಿದೆ. ಇಲ್ಲಿ ತ್ರಿವರ್ಣ ಧ್ವಜ ಹಾರಿಸಬಾರದು ಎಂದು ಬ್ರಿಟೀಷರು ನಿರ್ಬಂಧ ಹಾಕಿದ್ದನ್ನು ವಿರೋಧಿಸಿ ಹೋರಾಟಗಾರರು ಧ್ವಜ ಹಾರಿಸಿದ್ದು ಈಗ ಇತಿಹಾಸ ಎಂದರು.
ಯಾರಿಗೂ ಅಧಿಕಾರ ಶಾಶ್ವತವಲ್ಲ. ನಾನು ಶಾಶ್ವತವಾಗಿ ಇರುವುದಿಲ್ಲ. ಆದರೆ ನಾವು ಅಧಿಕಾರದಲ್ಲಿದ್ದಾಗ ಏನು ಮಾಡಿದ್ದೇವೆ ಎಂಬುದು ಮುಖ್ಯ ಎಂದರು, ಕೋವಿಡ್ ಕಾಲದಲ್ಲಿ ಜನ ಮನೆಯಿಂದ ಹೊರಗೆ ಬರಲು ಹೆದರುವಾಗ, ನಾವ್ಯಾರು ಮನೆಯಲ್ಲಿ ಕೂರಲಿಲ್ಲ. ನಾನು, ನಮ್ಮ ಕಾರ್ಯಾಧ್ಯಕ್ಷರ ತಂಡ ಹಾಗೂ ನಾಯಕರು ಹಗಲಿರುಳು ಕೋವಿಡ್ ವಿರುದ್ಧ ಹೋರಾಡಿದ್ದಾರೆ. ಕಾಂಗ್ರೆಸ್ ನಾಯಕರು ತಮ್ಮ ಪ್ರಾಣ ಒತ್ತೆ ಇಟ್ಟು ಪ್ರಾಮಾಣಿಕವಾಗಿ ಜನರ ಸೇವೆ ಮಾಡಿದ್ದಾರೆ ಎಂದರು.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…