ರಾಮನಗರ: ಜ.9ರಂದು ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಪಾದಯಾತ್ರೆಗೆನಮ್ಮ ಬೆಂಬಲವಿಲ್ಲ ಎಂಬುದಾಗಿ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ನಗರದಲ್ಲಿ ಇಂದು ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮೇಕೆದಾಟು ಜನರಿಗೆ ನೀರು ಒದಗಿಸುವಂತ ಉತ್ತಮ ಯೋಜನೆಯಾಗಿದೆ. ಆ ನಿಟ್ಟಿನಲ್ಲಿ ಹಲವು ವರ್ಷಗಳಿಂದ ಮೇಕೆದಾಟು ಯೋಜನೆ ಜಾರಿಗಾಗಿ ಪ್ರತಿಭಟನೆ ನಡೆಸಲಾಗುತ್ತಿದೆ. ಮೇಕೆದಾಟು ಯೋಜನೆ ಜಾರಿಯಾಗಬೇಕು ಅಂದರು.
ನಾನು ಕೂಡ ಮೇಕೆದಾಟು ಯೋಜನೆ ಜಾರಿಗಾಗಿ ಹೋರಾಟ ಮಾಡುತ್ತೇನೆ. ಆದ್ರೇ ಕಾಂಗ್ರೆಸ್ ನಡೆಸುತ್ತಿರುವಂತ ಪಾದಯಾತ್ರೆಗೆ ನಮ್ಮ ಬೆಂಬಲ ಇಲ್ಲ. ಇದೇ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಸ್ಥಿತ್ವದಲ್ಲಿ ಇದ್ದಾಗ ಯಾಕೆ ಯೋಜನೆ ಮಾಡಲಿಲ್ಲ.? ಈಗ ರಾಜಕೀಯ ಲಾಭಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಜನವರಿ 9ರಿಂದ ಆರಂಭಿಸುತ್ತಿರುವಂತ ಮೇಕೆದಾಟು ಯೋಜನೆ ಜಾರಿಗಾಗಿ ಕಾಂಗ್ರೆಸ್ ಅವರ ಪಾಡಿಗೆ ಅವರು ಪಾದಯಾತ್ರೆ ಮಾಡಲಿ, ನಾವು ಬೆಂಬಲಿಸೋದಿಲ್ಲ. ಮುಂದಿನ ದಿನಗಳಲ್ಲಿ ನಾವು ಈ ಯೋಜನೆಗಾಗಿ ಉಗ್ರ ಚಳುವಳಿಯನ್ನೇ ಮಾಡೋದಾಗಿ ಘೋಷಿಸಿದರು.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…