ಚಿಕ್ಕಮಗಳೂರು : ಕಾಂಗ್ರೆಸ್ ನವರಿಗೆ ದೂರುವುದಕ್ಕೆ ಮೋದಿ ಬೇಕು. ಒಳ್ಳೆಯದಕ್ಕಾದರೆ ಮೋದಿ ಬೇಡ. ಗೂಸುಂಬೆ ರಾಜಕಾರಣದಿಂದ ಕಾಂಗ್ರೆಸ್ ಗೆ ಈ ಸ್ಥಿತಿ ಬಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಿಡಿಕಾರಿದರು.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಈಗ ಲಸಿಕೆ ರಾಜಕಾರಣ ಮಾಡುವುದು ಬೇಡ. ಈ ಹಿಂದೆ ಕಾಂಗ್ರೆಸ್ ನವರು ಲಸಿಕೆ ತೆಗೆದುಕೊಂಡರೆ ಮಕ್ಕಳಾಗಲ್ಲ ಎಂದಿದ್ದರು. ಆ ಸಮಯದಲ್ಲಿ ಸಿದ್ದರಾಮಯ್ಯ ಏನು ಹೇಳಿದ್ದರೆಂದು ಹೇಳಬೇಕಾ, ಡಿ ಕೆ ಶಿವಕುಮಾರ್ ಟ್ವೀಟ್ ತೋರಿಸಬೇಕಾ? ಜಾರ್ಖಂಡ್ ಆರೋಗ್ಯ ಸಚಿವರ ಹೇಳಿಕೆ ನೆನಪು ಮಾಡಬೇಕಾ ಎಂದು ಹೇಳಿದರು.
ಅವತ್ತು ಲಸಿಕೆ ವಿರುದ್ಧ ರಾಜಕಾರಣ ಮಾಡಿದರು. ಈಗ ಕಾಂಗ್ರೆಸ್ ನವರ ಎಡಬಿಡಂಗಿತನ ಹೇಗೆ ಎಂದರೆ ಪ್ರಧಾನಿ ಎಲ್ಲರಿಗೂ ಉಚಿತ ವಾಕ್ಸಿನ್ ಘೋಷಣೆ ಮಾಡಿದಾಗ ಕಾಂಗ್ರೆಸ್ ನವರು ಥ್ಯಾಂಕ್ಯೂ ಸುಪ್ರೀಂ ಕೋರ್ಟ್ ಎಂದರು. ಉಚಿತ ಲಸಿಕೆಯ ಕ್ರೆಡಿಟ್ ಮೋದಿ, ಬಿಜೆಪಿಗೆ ಹೋಗಬಹುದು ಅಂತ ಥ್ಯಾಂಕ್ಯೂ ಸುಪ್ರೀಂ ಕೋರ್ಟ್ ಅಂತಾ ರಾಜಕಾರಣ ಮಾಡಿದರು ಎಂದು ಸಿ.ಟಿ.ರವಿ ವಾಗ್ದಾಳಿ ನಡೆಸಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…